AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿರುವ ರೈಲಿನಿಂದ ತ್ಯಾಜ್ಯ ವಿಲೇವಾರಿ ಮಾಡಿದ ಸ್ವಚ್ಛತಾ ಸಿಬ್ಬಂದಿ; ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಇಲಾಖೆ

ವೈರಲ್ ವಿಡಿಯೊಗೆ ಕಾಮೆಂಟ್ ಮಾಡಿದ ಬಳಕೆದಾರರೊಬ್ಬರು ದೇವರೇ ಏರ್ ಇಂಡಿಯಾದಲ್ಲಿ ಈ ರೀತಿ ಮಾಡಲಾಗುವುದಿಲ್ಲ. ಇಲ್ಲದಿದ್ದರೆ ಫ್ಲೈಟ್ ಅಟೆಂಡೆಂಟ್‌ಗಳು ಸಹ ಅದೇ ರೀತಿ ಮಾಡುತ್ತಿರುತ್ತಿದ್ದರು ಎಂದಿದ್ದಾರೆ . ಇನ್ನೊಬ್ಬ ಬಳಕೆದಾರು. ಇದು ನಿಜನಾ? ರೈಲ್ವೆ ಸಿಬ್ಬಂದಿ ಈ ರೀತಿ ಹೇಗೆ ಕಾರ್ಯನಿರ್ವಹಿಸಬಹುದು? ಸ್ವಚ್ಛತೆ ಮನೆಯಿಂದ ಪ್ರಾರಂಭವಾಗುತ್ತದೆ . ಈ ಸಂದರ್ಭದಲ್ಲಿ, ರೈಲ್ವೆ ಅಡುಗೆಮನೆಯಿಂದ ಎಂದು ಹೇಳಿದ್ದಾರೆ.

ಚಲಿಸುತ್ತಿರುವ ರೈಲಿನಿಂದ ತ್ಯಾಜ್ಯ ವಿಲೇವಾರಿ ಮಾಡಿದ ಸ್ವಚ್ಛತಾ ಸಿಬ್ಬಂದಿ; ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಇಲಾಖೆ
ರೈಲಿನಿಂದ ತ್ಯಾಜ್ಯ ಸುರಿಯುತ್ತಿರುವ ಸಿಬ್ಬಂದಿ
ರಶ್ಮಿ ಕಲ್ಲಕಟ್ಟ
|

Updated on:Jan 02, 2024 | 4:00 PM

Share

ದೆಹಲಿ ಜನವರಿ 02: ಭಾರತೀಯ ರೈಲ್ವೇ (Indian Railway) ಹೌಸ್‌ಕೀಪಿಂಗ್ ತಂಡದ ಸದಸ್ಯರೊಬ್ಬರು ಚಲಿಸುತ್ತಿರುವ ರೈಲಿನಿಂದ ತ್ಯಾಜ್ಯವನ್ನು ವಿಲೇವಾರಿ ಮಾಡುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ (Viral Video) ಆಗಿದೆ. ಈ ವಿಡಿಯೊದಲ್ಲಿ, ರೈಲ್ವೇ ಹೌಸ್‌ಕೀಪಿಂಗ್ ಸಿಬ್ಬಂದಿಯೊಬ್ಬರು ಚಲಿಸುತ್ತಿರುವ ರೈಲಿನಿಂದ ಕಸ ತುಂಬಿದ ಕಸದ ಚೀಲವನ್ನು ಹಳಿಗಳ ಮೇಲೆ ಸುರಿಯುತ್ತಿರುವುದು ಕಾಣುತ್ತದೆ. ಸಿಬ್ಬಂದಿಯು ರೈಲಿನ ನೆಲದ ಮೇಲೆ ಹರಡಿದ ಕಸವನ್ನು ತೆರವುಗೊಳಿಸಲು ಫ್ಲೋರ್ ವೈಪರ್ ಬಳಸಿದ್ದಾರೆ. ನಂತರ ಈ ತ್ಯಾಜ್ಯವನ್ನು  ಹಳಿಗಳ ಮೇಲೆ ಸುರಿದಿದ್ದಾರೆ. ರೈಲ್ವೈ ಸಿಬ್ಬಂದಿಯ ಈ ನಡವಳಿಕೆ ರೈಲ್ವೆಯ ನೈರ್ಮಲ್ಯ ಅಭ್ಯಾಸಗಳು ಮತ್ತು ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನಗಳ (SOPs) ಬಗ್ಗೆ ಕಳವಳವನ್ನು ಉಂಟುಮಾಡಿತು.

ಪ್ರಯಾಣಿಕರು ಈ ನಡವಳಿಕೆಯನ್ನು ಗಮನಿಸಿ ದೂರು ಸಲ್ಲಿಸಿದಾಗ, ಸಿಬ್ಬಂದಿ ಕಸ ಸಂಗ್ರಹಣೆಗೆ ಚೀಲ ಸಾಕಾಗುತ್ತಿಲ್ಲ ಎಂದಿದ್ದಾರೆ. ಪ್ರಯಾಣಿಕರೊಬ್ಬರು 139 ನಲ್ಲಿ ದೂರು ದಾಖಲಿಸಿದ್ದಾರೆ. ಸ್ವಲ್ಪ ಸಮಯದ ನಂತರ ಮೇಲ್ವಿಚಾರಕರು ಮತ್ತು ಇಡೀ ಗ್ಯಾಂಗ್ ಯಾರು ದೂರು ನೀಡಿದ್ದಾರೆ ಮತ್ತು ಏಕೆ ದೂರು ನೀಡಿದ್ದಾರೆ ಎಂದು ಹುಡುಕಲು ಪ್ರಯತ್ನಿಸಿದರು. ಅವರಿಗೆ ಸರಿಯಾಗಿ ಸಂಬಳ ಸಿಗುತ್ತಿಲ್ಲ ಎಂದ ಸಿಬ್ಬಂದಿ ಕಸವನ್ನು ಸಂಗ್ರಹಿಸಲು ಸಾಕಷ್ಟು ಚೀಲಗಳನ್ನು ಒದಗಿಸಿಲ್ಲ. ಆದ್ದರಿಂದ ಇರುವ ಸಂಪನ್ಮೂಲ ಬಳಸಿ ಅಡ್ಜೆಸ್ಟ್ ಮಾಡುತ್ತಿರುವುದಾಗಿ ಹೇಳಿದ್ದಾರೆ.

ವೈರಲ್ ವಿಡಿಯೊಗೆ ಕಾಮೆಂಟ್ ಮಾಡಿದ ಬಳಕೆದಾರರೊಬ್ಬರು ದೇವರೇ ಏರ್ ಇಂಡಿಯಾದಲ್ಲಿ ಈ ರೀತಿ ಮಾಡಲಾಗುವುದಿಲ್ಲ. ಇಲ್ಲದಿದ್ದರೆ ಫ್ಲೈಟ್ ಅಟೆಂಡೆಂಟ್‌ಗಳು ಸಹ ಅದೇ ರೀತಿ ಮಾಡುತ್ತಿರುತ್ತಿದ್ದರು ಎಂದಿದ್ದಾರೆ. ಇನ್ನೊಬ್ಬ ಬಳಕೆದಾರು. ಇದು ನಿಜನಾ? ರೈಲ್ವೆ ಸಿಬ್ಬಂದಿ ಈ ರೀತಿ ಹೇಗೆ ಕಾರ್ಯನಿರ್ವಹಿಸಬಹುದು? ಸ್ವಚ್ಛತೆ ಮನೆಯಿಂದ ಪ್ರಾರಂಭವಾಗುತ್ತದೆ . ಈ ಸಂದರ್ಭದಲ್ಲಿ, ರೈಲ್ವೆ ಅಡುಗೆಮನೆಯಿಂದ ಎಂದಿದ್ದಾರೆ.

ಇದನ್ನೂ ಓದಿ: 8 ಕೋಚ್​​ಗಳಿರುವ ವಂದೇ ಭಾರತ್ ರೈಲು ತಯಾರಿಸಲಿದೆ ಭಾರತೀಯ ರೈಲ್ವೇ

ಮತ್ತೊಬ್ಬ ಬಳಕೆದಾರರು ಇದು ಕೆಟ್ಟದು ಆದರೆ ಕಡಿಮೆ ಪ್ರಯಾಣದ ಸಮಯದಲ್ಲಿ ಪ್ರಯಾಣಿಕರು ಅವರು ಪ್ರಯಾಣಿಸುವ ಬೋಗಿಗಳನ್ನು ಎಷ್ಟು ಹೊಲಸು ಮಾಡುತ್ತಾರೆ!. 2 ಟಯರ್ ಎಸಿಯಲ್ಲಿನ ಶೌಚಾಲಯಗಳು ಸಹ ಕೆಟ್ಟದಾಗಿವೆ ಎಂದಿದೆ.

ವಿಡಿಯೊ ಗಮನ ಸೆಳೆದ ನಂತರ ರೈಲ್ವೆಯ ಮುಂಬೈ ವಿಭಾಗ ಕೂಡ ಈ ವಿಷಯವನ್ನು ಒಪ್ಪಿಕೊಂಡಿದ್ದು, ದಯವಿಟ್ಟು PNR ಮತ್ತು ರೈಲು ಸಂಖ್ಯೆಗಳನ್ನು ಹಂಚಿಕೊಳ್ಳಿ ಇದರಿಂದ ನಾವು ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬಹುದು ಎಂದು ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:19 pm, Tue, 2 January 24

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ