ರಾಮಲಲ್ಲಾನ ವಿಗ್ರಹಗಳೆಲ್ಲವೂ ಚೆನ್ನಾಗಿವೆ, ಒಂದನ್ನು ಆಯ್ಕೆ ಮಾಡುವುದು ಕಷ್ಟ: ಚಂಪತ್ ರಾಯ್

ಇಂದು ಟ್ರಸ್ಟ್ ಸಭೆ ಇತ್ತು, ಎಲ್ಲಾ ಟ್ರಸ್ಟಿಗಳು ರಾಮಲಲ್ಲಾ ಪ್ರತಿಮೆಯನ್ನು ನೋಡಿದ್ದು ಎಲ್ಲರೂ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಪ್ರತಿಮೆಯನ್ನು ತುಂಬಾ ಚೆನ್ನಾಗಿ ನಿರ್ಮಿಸಲಾಗಿದೆ. ಮೂರೂ ಪ್ರತಿಮೆಗಳನ್ನು ಎಷ್ಟು ಚೆನ್ನಾಗಿ ಮಾಡಲಾಗಿದೆ, ಒಂದನ್ನು ಆಯ್ಕೆ ಮಾಡುವುದು ಕಷ್ಟವಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹೇಳಿದ್ದಾರೆ.

ರಾಮಲಲ್ಲಾನ ವಿಗ್ರಹಗಳೆಲ್ಲವೂ ಚೆನ್ನಾಗಿವೆ, ಒಂದನ್ನು ಆಯ್ಕೆ ಮಾಡುವುದು ಕಷ್ಟ: ಚಂಪತ್ ರಾಯ್
ಚಂಪತ್ ರಾಯ್
Follow us
|

Updated on: Dec 29, 2023 | 9:05 PM

ಅಯೋಧ್ಯೆ ಡಿಸೆಂಬರ್ 29 : ಅಯೋಧ್ಯೆಯ (Ayodhya) ರಾಮ ಮಂದಿರದ (Ram mandir) ಆಡಳಿತ ಮಂಡಳಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಸದಸ್ಯರು (Shri Ram Janmabhoomi Teerth Kshetra)ಡಿಸೆಂಬರ್ 29 ರಂದು ದೇವಸ್ಥಾನದ ಗರ್ಭ ಗೃಹದಲ್ಲಿ ಪ್ರತಿಷ್ಠಾಪಿಸಲಿರುವ ವಿಗ್ರಹದ ಬಗ್ಗೆ ಚರ್ಚಿಸಲು ಸಭೆ ನಡೆಸಿದರು. ಪ್ರಮುಖವಾಗಿ ಮೂರು ವಿಗ್ರಹಗಳಿದ್ದು, ಒಂದನ್ನು ಅಂತಿಮಗೊಳಿಸಲಾಗುವುದು. ಟ್ರಸ್ಟ್‌ನ ಸದಸ್ಯರಾದ ಸ್ವಾಮಿ ಪರಮಾನಂದ ಅವರು ಟಿವಿ9 ಭಾರತವರ್ಷದೊಂದಿಗೆ ಮಾತನಾಡುತ್ತಾ, ಭಗವಾನ್ ರಾಮನ ಮೂರೂ ವಿಗ್ರಹಗಳು ಸುಂದರವಾಗಿವೆ. ಸಭೆಯಲ್ಲಿ ಟ್ರಸ್ಟ್ ಸದಸ್ಯರು ತಮ್ಮ ಅಭಿಪ್ರಾಯಗಳನ್ನು ಲಿಖಿತವಾಗಿ ಹಂಚಿಕೊಂಡರು. ಟ್ರಸ್ಟ್‌ನ ಮುಖ್ಯಸ್ಥ ಮಹಂತ್ ನೃತ್ಯ ಗೋಪಾಲ್ ದಾಸ್ ಅವರೊಂದಿಗೆ ವಿಗ್ರಹವನ್ನು ಅಂತಿಮಗೊಳಿಸುವ ಕುರಿತು ಚರ್ಚೆ ನಡೆಸಲಾಯಿತು ಎಂದು ಅವರು ಹೇಳಿದರು.

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮಾತನಾಡಿ, “ಇಂದು ಟ್ರಸ್ಟ್ ಸಭೆ ಇತ್ತು, ಎಲ್ಲಾ ಟ್ರಸ್ಟಿಗಳು ರಾಮಲಲ್ಲಾ ಪ್ರತಿಮೆಯನ್ನು ನೋಡಿದ್ದು ಎಲ್ಲರೂ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಪ್ರತಿಮೆಯನ್ನು ತುಂಬಾ ಚೆನ್ನಾಗಿ ನಿರ್ಮಿಸಲಾಗಿದೆ. ಮೂರೂ ಪ್ರತಿಮೆಗಳನ್ನು ಎಷ್ಟು ಚೆನ್ನಾಗಿ ಮಾಡಲಾಗಿದೆ, ಒಂದನ್ನು ಆಯ್ಕೆ ಮಾಡುವುದು ಕಷ್ಟವಾಗಿದೆ ಎಂದಿದ್ದಾರೆ.

ಎಲ್ಲಾ ಮೂರು ವಿಗ್ರಹಗಳನ್ನು ದೇಶದ ಪ್ರಸಿದ್ಧ ಶಿಲ್ಪಿಗಳು ತಯಾರಿಸಿದ್ದಾರೆ. ಈ ಮೂರರಲ್ಲಿ ಒಂದನ್ನು ದೇವಾಲಯದಲ್ಲಿ ಇರಿಸಲಾಗುವುದು.

ಮೂರು ವಿಗ್ರಹಗಳ ಯಾವುವು?

ಮೂರರಲ್ಲಿ ಒಂದನ್ನು ಮೈಸೂರು ಮೂಲದ ಅರುಣ್ ಯೋಗಿರಾಜ್ ತಯಾರಿಸಿದ್ದಾರೆ. ಎರಡನೇ ವಿಗ್ರಹವನ್ನು ಬೆಂಗಳೂರಿನ ಜೆಎಲ್ ಭಟ್ ನಿರ್ಮಿಸಿದ್ದಾರೆ. ಅಂತೆಯೇ, ಮೂರನೆಯದನ್ನು ರಾಜಸ್ಥಾನದ ಸತ್ಯನಾರಾಯಣ ಪಾಂಡೆ ನಿರ್ಮಿಸಿದ್ದಾರೆ. ಎಲ್ಲಾ ಮೂರು ವಿಗ್ರಹಗಳು ಭಗವಾನ್ ರಾಮನ ಬಾಲ್ಯವನ್ನು ಚಿತ್ರಿಸುತ್ತವೆ.

ಪ್ರತ್ಯೇಕ ಶಿಲ್ಪಿಗಳು ಮಾಡಿದ ಎಲ್ಲಾ ಮೂರು ವಿನ್ಯಾಸಗಳನ್ನು ಮೇಜಿನ ಮೇಲೆ ಇಡಲಾಗುತ್ತದೆ. ಹೆಚ್ಚು ಮತಗಳನ್ನು ಪಡೆಯುವ ಒಂದು ವಿಗ್ರಹವನ್ನು ಜನವರಿ 22 ರಂದು ದೇಗುಲದ ಮಹಾಮಸ್ತಕಾಭಿಷೇಕದಲ್ಲಿ ಪ್ರತಿಷ್ಠಾಪಿಸಲಾಗುವುದು ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ:ಅಯೋಧ್ಯೆ ರಾಮಮಂದಿರಕ್ಕೆ ಕಾಶಿ ಮತ್ತು ಪ್ರಯಾಗ್ ರಾಜ್ ಭಿಕ್ಷುಕರಿಂದ 4 ಲಕ್ಷ ದೇಣಿಗೆ

ಆಯ್ಕೆಯ ಮಾನದಂಡ

ಮೂರೂ ವಿಗ್ರಹಗಳು 51 ಇಂಚು ಎತ್ತರವಿದ್ದು, ಅವುಗಳಲ್ಲಿ ಯಾವುದಾದರೂ ಒಂದನ್ನು ಆಯ್ಕೆ ಮಾಡಲಾಗುವುದು ಎಂದು ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ಬುಧವಾರ ಹೇಳಿದ್ದಾರೆ. ಮೂರು ವಿಗ್ರಹಗಳಲ್ಲಿ ಅತ್ಯುತ್ತಮವಾದ ದೈವಿಕ ಸತ್ವವನ್ನು ಹೊಂದಿರುವ ಮತ್ತು ಮಗುವಿನ ರೂಪವನ್ನು ಹೊಂದಿರುವ ವಿಗ್ರಹವನ್ನು ಪ್ರತಿಷ್ಠಾಪನೆಗೆ ಆಯ್ಕೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ಜನವರಿ 22 ರಂದು ರಾಮ ಮಂದಿರದ ಉದ್ಘಾಟನೆಗೆ ಮುನ್ನ ವಿವಿಧ ಕಾರ್ಯಕ್ರಮಗಳು ಜನವರಿ 16 ರಂದು ಪ್ರಾರಂಭವಾಗಲಿದೆ. ರಾಮಮಂದಿರವನ್ನು ಮೋದಿ  ಉದ್ಘಾಟಿಸಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ