AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ಮೇಲೆ ನಿಯಂತ್ರಣವಿಲ್ಲದ ಪುರುಷರು ಮಹಿಳೆಗೆ ಹಿಜಾಬ್ ಧರಿಸಲು ಒತ್ತಾಯಿಸುತ್ತಾರೆ; ಹರಿಯಾಣ ಗೃಹ ಸಚಿವ ಟೀಕೆ

ಮಹಿಳೆಯರನ್ನು ಕಂಡಾಗ ತಮ್ಮನ್ನು ನಿಯಂತ್ರಿಸಲು ಸಾಧ್ಯವಾಗದ ಪುರುಷರು ಮಹಿಳೆಯರಿಗೆ ಹಿಜಾಬ್ ಧರಿಸಲು ಒತ್ತಾಯಿಸುತ್ತಿದ್ದಾರೆ. ಅವರ ಮನಸ್ಸನ್ನು ಬಲಪಡಿಸುವ ಬದಲು ಶಿಕ್ಷೆಯನ್ನು ಮಹಿಳೆಯರಿಗೆ ನೀಡಲಾಗುತ್ತಿದೆ ಎಂದು ಅನಿಲ್ ವಿಜ್ ಟ್ವೀಟ್ ಮಾಡಿದ್ದಾರೆ.

ತಮ್ಮ ಮೇಲೆ ನಿಯಂತ್ರಣವಿಲ್ಲದ ಪುರುಷರು ಮಹಿಳೆಗೆ ಹಿಜಾಬ್ ಧರಿಸಲು ಒತ್ತಾಯಿಸುತ್ತಾರೆ; ಹರಿಯಾಣ ಗೃಹ ಸಚಿವ ಟೀಕೆ
TV9 Web
| Edited By: |

Updated on: Oct 13, 2022 | 3:25 PM

Share

ಚಂಡೀಗಢ: ತಮ್ಮ ಮನಸಿನ ಮೇಲೆ ಹಿಡಿತವಿಲ್ಲದ ಪುರುಷರು ಮಹಿಳೆಯರಿಗೆ ಹಿಜಾಬ್ (Hijab) ಧರಿಸಲು ಒತ್ತಾಯಿಸುತ್ತಾರೆ. ಪುರುಷರು ತಮ್ಮ ಮನಸ್ಸನ್ನು ಗಟ್ಟಿಗೊಳಿಸಿಕೊಳ್ಳಬೇಕು, ಮಹಿಳೆಯರನ್ನು ಹಿಜಾಬ್‌ನಿಂದ ಮುಕ್ತಗೊಳಿಸಬೇಕು ಎಂದು ಹರಿಯಾಣದ ಸಚಿವ ಅನಿಲ್ ವಿಜ್ (Minister Anil Vij) ಇಂದು ಹಿಜಾಬ್ ವಿಷಯಕ್ಕೆ ಪ್ರತಿಕ್ರಿಯಿಸಿದ್ದಾರೆ.

ಹರಿಯಾಣದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಮೇಲೆ ಸುಪ್ರೀಂ ಕೋರ್ಟ್ ವಿಭಜಿತ ತೀರ್ಪು ನೀಡುವುದಕ್ಕೂ ಮೊದಲು ಸಚಿವ ಅನಿಲ್ ವಿಜ್ ಟ್ವೀಟ್ ಮಾಡಿದ್ದಾರೆ.

“ಮಹಿಳೆಯರನ್ನು ಕಂಡಾಗ ತಮ್ಮ ಉತ್ಸುಕತೆಯನ್ನು ನಿಯಂತ್ರಿಸಲು ಸಾಧ್ಯವಾಗದ ಪುರುಷರು ಮಹಿಳೆಯರಿಗೆ ಹಿಜಾಬ್ ಧರಿಸಲು ಒತ್ತಾಯಿಸುತ್ತಿದ್ದಾರೆ. ಅವರ ಮನಸ್ಸನ್ನು ಬಲಪಡಿಸುವ ಅಗತ್ಯವಿತ್ತು. ಆದರೆ, ಶಿಕ್ಷೆಯನ್ನು ಮಹಿಳೆಯರಿಗೆ ನೀಡಲಾಗುತ್ತಿದೆ. ಅವರನ್ನು ತಲೆಯಿಂದ ಉಗುರಿನವರೆಗೂ ಮುಚ್ಚಲಾಗುತ್ತಿದೆ. ಇದು ಘೋರ ಅನ್ಯಾಯ” ಎಂದು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Hijab Verdict: ಕರ್ನಾಟಕದ ಹಿಜಾಬ್ ವಿವಾದಕ್ಕೂ, ಇರಾನ್​ನಲ್ಲಿ ಹಿಜಾಬ್ ವಿರೋಧಿ ಪ್ರತಿಭಟನೆಗೂ ಇದೆ ಹಲವು ವ್ಯತ್ಯಾಸ

ಪುರುಷರು ತಮ್ಮ ಮನಸ್ಸನ್ನು ಬಲಪಡಿಸಬೇಕು ಮತ್ತು ಮಹಿಳೆಯರನ್ನು ಹಿಜಾಬ್‌ನಿಂದ ಮುಕ್ತಗೊಳಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಫೆಬ್ರವರಿಯಲ್ಲಿ ಕರ್ನಾಟಕದಲ್ಲಿ ಕೆಲವು ವಿದ್ಯಾರ್ಥಿಗಳು ಹಿಜಾಬ್ ಧರಿಸಿರುವ ಬಗ್ಗೆ ಗಲಾಟೆಯ ನಡುವೆ ಅನಿಲ್ ವಿಜ್ ಅವರು ಶಾಲೆಗಳು ಮತ್ತು ಕಾಲೇಜುಗಳಲ್ಲಿ ಚಾಲ್ತಿಯಲ್ಲಿರುವ ಡ್ರೆಸ್ ಕೋಡ್ ಅನ್ನು ಅನುಸರಿಸಬೇಕು ಎಂದು ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ