AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ಮೇಲೆ ನಿಯಂತ್ರಣವಿಲ್ಲದ ಪುರುಷರು ಮಹಿಳೆಗೆ ಹಿಜಾಬ್ ಧರಿಸಲು ಒತ್ತಾಯಿಸುತ್ತಾರೆ; ಹರಿಯಾಣ ಗೃಹ ಸಚಿವ ಟೀಕೆ

ಮಹಿಳೆಯರನ್ನು ಕಂಡಾಗ ತಮ್ಮನ್ನು ನಿಯಂತ್ರಿಸಲು ಸಾಧ್ಯವಾಗದ ಪುರುಷರು ಮಹಿಳೆಯರಿಗೆ ಹಿಜಾಬ್ ಧರಿಸಲು ಒತ್ತಾಯಿಸುತ್ತಿದ್ದಾರೆ. ಅವರ ಮನಸ್ಸನ್ನು ಬಲಪಡಿಸುವ ಬದಲು ಶಿಕ್ಷೆಯನ್ನು ಮಹಿಳೆಯರಿಗೆ ನೀಡಲಾಗುತ್ತಿದೆ ಎಂದು ಅನಿಲ್ ವಿಜ್ ಟ್ವೀಟ್ ಮಾಡಿದ್ದಾರೆ.

ತಮ್ಮ ಮೇಲೆ ನಿಯಂತ್ರಣವಿಲ್ಲದ ಪುರುಷರು ಮಹಿಳೆಗೆ ಹಿಜಾಬ್ ಧರಿಸಲು ಒತ್ತಾಯಿಸುತ್ತಾರೆ; ಹರಿಯಾಣ ಗೃಹ ಸಚಿವ ಟೀಕೆ
TV9 Web
| Edited By: |

Updated on: Oct 13, 2022 | 3:25 PM

Share

ಚಂಡೀಗಢ: ತಮ್ಮ ಮನಸಿನ ಮೇಲೆ ಹಿಡಿತವಿಲ್ಲದ ಪುರುಷರು ಮಹಿಳೆಯರಿಗೆ ಹಿಜಾಬ್ (Hijab) ಧರಿಸಲು ಒತ್ತಾಯಿಸುತ್ತಾರೆ. ಪುರುಷರು ತಮ್ಮ ಮನಸ್ಸನ್ನು ಗಟ್ಟಿಗೊಳಿಸಿಕೊಳ್ಳಬೇಕು, ಮಹಿಳೆಯರನ್ನು ಹಿಜಾಬ್‌ನಿಂದ ಮುಕ್ತಗೊಳಿಸಬೇಕು ಎಂದು ಹರಿಯಾಣದ ಸಚಿವ ಅನಿಲ್ ವಿಜ್ (Minister Anil Vij) ಇಂದು ಹಿಜಾಬ್ ವಿಷಯಕ್ಕೆ ಪ್ರತಿಕ್ರಿಯಿಸಿದ್ದಾರೆ.

ಹರಿಯಾಣದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಮೇಲೆ ಸುಪ್ರೀಂ ಕೋರ್ಟ್ ವಿಭಜಿತ ತೀರ್ಪು ನೀಡುವುದಕ್ಕೂ ಮೊದಲು ಸಚಿವ ಅನಿಲ್ ವಿಜ್ ಟ್ವೀಟ್ ಮಾಡಿದ್ದಾರೆ.

“ಮಹಿಳೆಯರನ್ನು ಕಂಡಾಗ ತಮ್ಮ ಉತ್ಸುಕತೆಯನ್ನು ನಿಯಂತ್ರಿಸಲು ಸಾಧ್ಯವಾಗದ ಪುರುಷರು ಮಹಿಳೆಯರಿಗೆ ಹಿಜಾಬ್ ಧರಿಸಲು ಒತ್ತಾಯಿಸುತ್ತಿದ್ದಾರೆ. ಅವರ ಮನಸ್ಸನ್ನು ಬಲಪಡಿಸುವ ಅಗತ್ಯವಿತ್ತು. ಆದರೆ, ಶಿಕ್ಷೆಯನ್ನು ಮಹಿಳೆಯರಿಗೆ ನೀಡಲಾಗುತ್ತಿದೆ. ಅವರನ್ನು ತಲೆಯಿಂದ ಉಗುರಿನವರೆಗೂ ಮುಚ್ಚಲಾಗುತ್ತಿದೆ. ಇದು ಘೋರ ಅನ್ಯಾಯ” ಎಂದು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Hijab Verdict: ಕರ್ನಾಟಕದ ಹಿಜಾಬ್ ವಿವಾದಕ್ಕೂ, ಇರಾನ್​ನಲ್ಲಿ ಹಿಜಾಬ್ ವಿರೋಧಿ ಪ್ರತಿಭಟನೆಗೂ ಇದೆ ಹಲವು ವ್ಯತ್ಯಾಸ

ಪುರುಷರು ತಮ್ಮ ಮನಸ್ಸನ್ನು ಬಲಪಡಿಸಬೇಕು ಮತ್ತು ಮಹಿಳೆಯರನ್ನು ಹಿಜಾಬ್‌ನಿಂದ ಮುಕ್ತಗೊಳಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಫೆಬ್ರವರಿಯಲ್ಲಿ ಕರ್ನಾಟಕದಲ್ಲಿ ಕೆಲವು ವಿದ್ಯಾರ್ಥಿಗಳು ಹಿಜಾಬ್ ಧರಿಸಿರುವ ಬಗ್ಗೆ ಗಲಾಟೆಯ ನಡುವೆ ಅನಿಲ್ ವಿಜ್ ಅವರು ಶಾಲೆಗಳು ಮತ್ತು ಕಾಲೇಜುಗಳಲ್ಲಿ ಚಾಲ್ತಿಯಲ್ಲಿರುವ ಡ್ರೆಸ್ ಕೋಡ್ ಅನ್ನು ಅನುಸರಿಸಬೇಕು ಎಂದು ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ