AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ಮೇಲೆ ನಿಯಂತ್ರಣವಿಲ್ಲದ ಪುರುಷರು ಮಹಿಳೆಗೆ ಹಿಜಾಬ್ ಧರಿಸಲು ಒತ್ತಾಯಿಸುತ್ತಾರೆ; ಹರಿಯಾಣ ಗೃಹ ಸಚಿವ ಟೀಕೆ

ಮಹಿಳೆಯರನ್ನು ಕಂಡಾಗ ತಮ್ಮನ್ನು ನಿಯಂತ್ರಿಸಲು ಸಾಧ್ಯವಾಗದ ಪುರುಷರು ಮಹಿಳೆಯರಿಗೆ ಹಿಜಾಬ್ ಧರಿಸಲು ಒತ್ತಾಯಿಸುತ್ತಿದ್ದಾರೆ. ಅವರ ಮನಸ್ಸನ್ನು ಬಲಪಡಿಸುವ ಬದಲು ಶಿಕ್ಷೆಯನ್ನು ಮಹಿಳೆಯರಿಗೆ ನೀಡಲಾಗುತ್ತಿದೆ ಎಂದು ಅನಿಲ್ ವಿಜ್ ಟ್ವೀಟ್ ಮಾಡಿದ್ದಾರೆ.

ತಮ್ಮ ಮೇಲೆ ನಿಯಂತ್ರಣವಿಲ್ಲದ ಪುರುಷರು ಮಹಿಳೆಗೆ ಹಿಜಾಬ್ ಧರಿಸಲು ಒತ್ತಾಯಿಸುತ್ತಾರೆ; ಹರಿಯಾಣ ಗೃಹ ಸಚಿವ ಟೀಕೆ
TV9 Web
| Edited By: |

Updated on: Oct 13, 2022 | 3:25 PM

Share

ಚಂಡೀಗಢ: ತಮ್ಮ ಮನಸಿನ ಮೇಲೆ ಹಿಡಿತವಿಲ್ಲದ ಪುರುಷರು ಮಹಿಳೆಯರಿಗೆ ಹಿಜಾಬ್ (Hijab) ಧರಿಸಲು ಒತ್ತಾಯಿಸುತ್ತಾರೆ. ಪುರುಷರು ತಮ್ಮ ಮನಸ್ಸನ್ನು ಗಟ್ಟಿಗೊಳಿಸಿಕೊಳ್ಳಬೇಕು, ಮಹಿಳೆಯರನ್ನು ಹಿಜಾಬ್‌ನಿಂದ ಮುಕ್ತಗೊಳಿಸಬೇಕು ಎಂದು ಹರಿಯಾಣದ ಸಚಿವ ಅನಿಲ್ ವಿಜ್ (Minister Anil Vij) ಇಂದು ಹಿಜಾಬ್ ವಿಷಯಕ್ಕೆ ಪ್ರತಿಕ್ರಿಯಿಸಿದ್ದಾರೆ.

ಹರಿಯಾಣದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಮೇಲೆ ಸುಪ್ರೀಂ ಕೋರ್ಟ್ ವಿಭಜಿತ ತೀರ್ಪು ನೀಡುವುದಕ್ಕೂ ಮೊದಲು ಸಚಿವ ಅನಿಲ್ ವಿಜ್ ಟ್ವೀಟ್ ಮಾಡಿದ್ದಾರೆ.

“ಮಹಿಳೆಯರನ್ನು ಕಂಡಾಗ ತಮ್ಮ ಉತ್ಸುಕತೆಯನ್ನು ನಿಯಂತ್ರಿಸಲು ಸಾಧ್ಯವಾಗದ ಪುರುಷರು ಮಹಿಳೆಯರಿಗೆ ಹಿಜಾಬ್ ಧರಿಸಲು ಒತ್ತಾಯಿಸುತ್ತಿದ್ದಾರೆ. ಅವರ ಮನಸ್ಸನ್ನು ಬಲಪಡಿಸುವ ಅಗತ್ಯವಿತ್ತು. ಆದರೆ, ಶಿಕ್ಷೆಯನ್ನು ಮಹಿಳೆಯರಿಗೆ ನೀಡಲಾಗುತ್ತಿದೆ. ಅವರನ್ನು ತಲೆಯಿಂದ ಉಗುರಿನವರೆಗೂ ಮುಚ್ಚಲಾಗುತ್ತಿದೆ. ಇದು ಘೋರ ಅನ್ಯಾಯ” ಎಂದು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Hijab Verdict: ಕರ್ನಾಟಕದ ಹಿಜಾಬ್ ವಿವಾದಕ್ಕೂ, ಇರಾನ್​ನಲ್ಲಿ ಹಿಜಾಬ್ ವಿರೋಧಿ ಪ್ರತಿಭಟನೆಗೂ ಇದೆ ಹಲವು ವ್ಯತ್ಯಾಸ

ಪುರುಷರು ತಮ್ಮ ಮನಸ್ಸನ್ನು ಬಲಪಡಿಸಬೇಕು ಮತ್ತು ಮಹಿಳೆಯರನ್ನು ಹಿಜಾಬ್‌ನಿಂದ ಮುಕ್ತಗೊಳಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಫೆಬ್ರವರಿಯಲ್ಲಿ ಕರ್ನಾಟಕದಲ್ಲಿ ಕೆಲವು ವಿದ್ಯಾರ್ಥಿಗಳು ಹಿಜಾಬ್ ಧರಿಸಿರುವ ಬಗ್ಗೆ ಗಲಾಟೆಯ ನಡುವೆ ಅನಿಲ್ ವಿಜ್ ಅವರು ಶಾಲೆಗಳು ಮತ್ತು ಕಾಲೇಜುಗಳಲ್ಲಿ ಚಾಲ್ತಿಯಲ್ಲಿರುವ ಡ್ರೆಸ್ ಕೋಡ್ ಅನ್ನು ಅನುಸರಿಸಬೇಕು ಎಂದು ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ