AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Menstrual Leave: ಉದ್ಯೋಗಿಗಳಿಗೆ ಮುಟ್ಟಿನ ರಜೆ; ಮಾದರಿ ನೀತಿ ರೂಪಿಸಲು ಕೇಂದ್ರಕ್ಕೆ ಸುಪ್ರೀಂ ನಿರ್ದೇಶನ

ಸಮಸ್ಯೆಯು ಬಹು ನೀತಿ ಅಂಶಗಳಿಗೆ ಸಂಬಂಧಿಸಿದೆ. ಹಾಗಾಗಿ ನ್ಯಾಯಾಲಯವು ಮಧ್ಯಪ್ರವೇಶಿಸಲು ಯಾವುದೇ ಕಾರಣವಿಲ್ಲ ಎಂದು ನ್ಯಾಯಾಲಯ ಹೇಳಿದೆ. "ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಲ್ಲಿನ ಕಾರ್ಯದರ್ಶಿಯನ್ನು ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಅವರನ್ನು ಸಂಪರ್ಕಿಸಲು ನಾವು ಅರ್ಜಿದಾರರಿಗೆ ಅನುಮತಿ ನೀಡುತ್ತೇವೆ ಎಂದು ನ್ಯಾಯಪೀಠ ಹೇಳಿದೆ. ಮಹಿಳಾ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಿಗೆ ಮುಟ್ಟಿನ ರಜೆಗೆ ನಿಯಮಗಳನ್ನು ರೂಪಿಸಲು ಎಲ್ಲಾ ರಾಜ್ಯಗಳಿಗೆ ನಿರ್ದೇಶನವನ್ನು ಕೋರಿ ಅರ್ಜಿ ಸಲ್ಲಿಸಿದಾಗ ಈ ವರ್ಷದ ಫೆಬ್ರವರಿಯಲ್ಲಿ ಸುಪ್ರೀಂಕೋರ್ಟ್ ಇದೇ ರೀತಿಯ ನಿಲುವನ್ನು ತೆಗೆದುಕೊಂಡಿತ್ತು.

Menstrual Leave: ಉದ್ಯೋಗಿಗಳಿಗೆ ಮುಟ್ಟಿನ ರಜೆ; ಮಾದರಿ ನೀತಿ ರೂಪಿಸಲು ಕೇಂದ್ರಕ್ಕೆ ಸುಪ್ರೀಂ ನಿರ್ದೇಶನ
ಸುಪ್ರೀಂಕೋರ್ಟ್
ರಶ್ಮಿ ಕಲ್ಲಕಟ್ಟ
|

Updated on:Jul 08, 2024 | 2:58 PM

Share

ದೆಹಲಿ ಜುಲೈ 08: ರಾಜ್ಯ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿ ಉದ್ಯೋಗಸ್ಥ ಮಹಿಳೆಯರಿಗೆ ಮುಟ್ಟಿನ ರಜೆ ನೀಡುವ (Menstrual Leave) ಕುರಿತು ಮಾದರಿ ನೀತಿ ರೂಪಿಸುವಂತೆ ಸುಪ್ರೀಂಕೋರ್ಟ್ (Supreme Court) ಸೋಮವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಇದು ಸರ್ಕಾರದ ನೀತಿಗೆ ಸಂಬಂಧಿಸಿದ್ದು, ನ್ಯಾಯಾಲಯಗಳು ಪರಿಶೀಲಿಸಬೇಕಾದ ವಿಷಯವಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಮುಟ್ಟಿನ ರಜೆಗಾಗಿ ನೀತಿಗಳನ್ನು ರೂಪಿಸಲು ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನಗಳನ್ನು ಕೋರಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಆಲಿಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, “ಅಂತಹ ರಜೆಗಳನ್ನು ಕಡ್ಡಾಯಗೊಳಿಸುವುದರಿಂದ ಮಹಿಳೆಯರು ಉದ್ಯೋಗಗಳಿಂದ ದೂರವಿರುತ್ತಾರೆ. ನಾವು ಅದನ್ನು ಬಯಸುವುದಿಲ್ಲ. ಮಹಿಳೆಯರನ್ನು ರಕ್ಷಿಸಲು ನಾವು ಏನು ಮಾಡಲು ಪ್ರಯತ್ನಿಸುತ್ತೇವೆಯೋ ಅದು ಅವರ ಅನನುಕೂಲತೆಗೆ ಕಾರಣವಾಗುವುದನ್ನು ನಾವು ಬಯಸುವುದಿಲ್ಲ. ಇದು ವಾಸ್ತವವಾಗಿ ಸರ್ಕಾರದ ನೀತಿ ಅಂಶವಾಗಿದೆ. ನ್ಯಾಯಾಲಯಗಳು ಪರಿಶೀಲಿಸುವ ವಿಷಯವಲ್ಲ ಎಂದು ನ್ಯಾಯಾಲಯ ಹೇಳಿದೆ.

ಸಮಸ್ಯೆಯು ಬಹು ನೀತಿ ಅಂಶಗಳಿಗೆ ಸಂಬಂಧಿಸಿದೆ. ಹಾಗಾಗಿ ನ್ಯಾಯಾಲಯವು ಮಧ್ಯಪ್ರವೇಶಿಸಲು ಯಾವುದೇ ಕಾರಣವಿಲ್ಲ ಎಂದು ನ್ಯಾಯಾಲಯ ಹೇಳಿದೆ. “ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಲ್ಲಿನ ಕಾರ್ಯದರ್ಶಿಯನ್ನು ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಅವರನ್ನು ಸಂಪರ್ಕಿಸಲು ನಾವು ಅರ್ಜಿದಾರರಿಗೆ ಅನುಮತಿ ನೀಡುತ್ತೇವೆ. ಈ ವಿಷಯವನ್ನು ನೀತಿ ಮಟ್ಟದಲ್ಲಿ ಪರಿಶೀಲಿಸಲು ಮತ್ತು ಎಲ್ಲಾ ಮಧ್ಯಸ್ಥಗಾರರನ್ನು ಸಂಪರ್ಕಿಸಿದ ನಂತರ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಮತ್ತು ಮಾದರಿ ನೀತಿಯನ್ನು ರೂಪಿಸಬಹುದೇ ಎಂಬುದನ್ನು ತೀರ್ಮಾನಿಸಲು ನಾವು ಕಾರ್ಯದರ್ಶಿಯಲ್ಲಿ ವಿನಂತಿಸುತ್ತೇವೆ ಎಂದು ನ್ಯಾಯಾಲಯ ಹೇಳಿದೆ.

ಈ ನಿಟ್ಟಿನಲ್ಲಿ ಯಾವುದೇ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲು ಈ ತೀರ್ಪು ಅಡ್ಡಿಯಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಮಹಿಳಾ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಿಗೆ ಮುಟ್ಟಿನ ರಜೆಗೆ ನಿಯಮಗಳನ್ನು ರೂಪಿಸಲು ಎಲ್ಲಾ ರಾಜ್ಯಗಳಿಗೆ ನಿರ್ದೇಶನವನ್ನು ಕೋರಿ ಅರ್ಜಿ ಸಲ್ಲಿಸಿದಾಗ ಈ ವರ್ಷದ ಫೆಬ್ರವರಿಯಲ್ಲಿ ಸುಪ್ರೀಂಕೋರ್ಟ್ ಇದೇ ರೀತಿಯ ನಿಲುವನ್ನು ತೆಗೆದುಕೊಂಡಿತ್ತು.

ಇದನ್ನೂ ಓದಿ: ಸಂದೇಶಖಾಲಿ ಪ್ರಕರಣ: ಸಿಬಿಐ ತನಿಖೆಗೆ ಕಲ್ಕತ್ತಾ ಹೈಕೋರ್ಟ್ ಆದೇಶದ ವಿರುದ್ಧ ಬಂಗಾಳ ಸರ್ಕಾರದ ಮನವಿ ತಿರಸ್ಕರಿಸಿದ ಸುಪ್ರೀಂ

ಪ್ರಸ್ತುತ, ಬಿಹಾರ ಮತ್ತು ಕೇರಳ ದೇಶದಲ್ಲಿ ಋತುಚಕ್ರದ ರಜೆಗೆ ಅವಕಾಶವನ್ನು ಹೊಂದಿರುವ ಎರಡು ರಾಜ್ಯಗಳಾಗಿವೆ. ಬಿಹಾರವು ಮಹಿಳಾ ಉದ್ಯೋಗಿಗಳಿಗೆ ಎರಡು ದಿನಗಳ ರಜೆ ನೀತಿಯನ್ನು ಹೊಂದಿದ್ದರೆ, ಕೇರಳದಲ್ಲಿ ಮಹಿಳಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಅವಧಿಯ ರಜೆಗೆ ಅವಕಾಶವಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:56 pm, Mon, 8 July 24

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್