AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women Reservation: ಮಹಿಳಾ ಮೀಸಲಾತಿಗೆ ಉತ್ತರ ಭಾರತೀಯರ ಮನಸ್ಥಿತಿಯೇ ದೊಡ್ಡ ತಡೆ: ಶರದ್ ಪವಾರ್

ಉತ್ತರ ಭಾರತೀಯರ ಮನಸ್ಥಿತಿ ಇನ್ನೂ ಹದಗೊಂಡಿಲ್ಲ. ಹೀಗಾಗಿಯೇ ಮಹಿಳೆಯರಿಗೆ ಮೀಸಲಾತಿ ಸೌಲಭ್ಯ ಒದಗಿಸುವ ಮಸೂದೆಗೆ ಅಂಗೀಕಾರ ದೊರೆಯುವುದು ತಡವಾಗುತ್ತಿದೆ ಎಂದು ಶರದ್ ಪವಾರ್ ಹೇಳಿದರು.

Women Reservation: ಮಹಿಳಾ ಮೀಸಲಾತಿಗೆ ಉತ್ತರ ಭಾರತೀಯರ ಮನಸ್ಥಿತಿಯೇ ದೊಡ್ಡ ತಡೆ: ಶರದ್ ಪವಾರ್
ಶರದ್ ಪವಾರ್
TV9 Web
| Edited By: |

Updated on:Sep 18, 2022 | 7:54 AM

Share

ಪುಣೆ: ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲು ಸಂಸತ್ತಿನಲ್ಲಿರುವ ಉತ್ತರ ಭಾರತೀಯರ ಮನಸ್ಥಿತಿ ಇನ್ನೂ ಹದಗೊಂಡಿಲ್ಲ. ಹೀಗಾಗಿಯೇ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಸೌಲಭ್ಯ ಒದಗಿಸುವ ಮಸೂದೆಗೆ ಅಂಗೀಕಾರ ದೊರೆಯುವುದು ತಡವಾಗುತ್ತಿದೆ ಎಂದು ‘ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ’ದ (Nationalist Congress Party – NCP) ಅಧ್ಯಕ್ಷ ಶರದ್ ಪವಾರ್ ಹೇಳಿದರು. ಶರದ್ ಪವಾರ್ ಅವರು ಮೊದಲಿನಿಂದಲೇ ಮಹಿಳಾ ಮೀಸಲಾತಿ ಮತ್ತು ಮಹಿಳೆಯರಿಗೆ ರಾಜಕಾರಣದಲ್ಲಿ ಹೆಚ್ಚು ಅವಕಾಶಗಳು ಸಿಗಬೇಕು ಎಂದು ಪ್ರತಿಪಾದಿಸುತ್ತಿದ್ದಾರೆ. ಅವರು ರಕ್ಷಣಾ ಸಚಿವರಾಗಿದ್ದ ಅವಧಿಯಲ್ಲಿಯೇ ಭಾರತದ ಸಶಸ್ತ್ರ ಪಡೆಗಳಲ್ಲಿ ಮಹಿಳೆಯರಿಗೆ ಪ್ರವೇಶ ಸಿಕ್ಕಿದ್ದು ಎನ್ನುವ ಸಂಗತಿಯನ್ನು ಇಲ್ಲಿ ಸ್ಮರಿಸಬಹುದು.

ಪುಣೆ ನಗರದಲ್ಲಿ ವೈದ್ಯರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮತ್ತು ಪುತ್ರಿ ಹಾಗೂ ಸಂಸದೆ ಸುಪ್ರಿಯಾ ಸುಳೆ ಅವರೊಂದಿಗೆ ಮಾತನಾಡುವಾಗ ತಮ್ಮ ಅಭಿಪ್ರಾಯ ಹಂಚಿಕೊಂಡರು. ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಸ್ಥಾನಗಳನ್ನು ಮೀಸಲಿಡಬೇಕು ಎನ್ನುವ ಗುರಿಯನ್ನು ಮಹಿಳಾ ಮೀಸಲಾತಿ ಮಸೂದೆ ಹೊಂದಿದೆ. ಈ ಕುರಿತು ಕೇಳಿದ ನಿರ್ದಿಷ್ಟ ಪ್ರಶ್ನೆಗೆ ಉತ್ತರಿಸಿದ ಅವರು, ಮಹಿಳೆಯರ ನಾಯಕತ್ವ ಒಪ್ಪಿಕೊಳ್ಳಲು ದೇಶವು ಇನ್ನೂ ಮಾನಸಿಕವಾಗಿ ಸಿದ್ಧವಾಗಿಲ್ಲ ಎಂದು ಹೇಳಿದರು.

‘ಸಂಸತ್ತಿನ, ವಿಶೇಷವಾಗಿ ಉತ್ತರ ಭಾರತದ ಮಾನಸಿಕತೆ ಈ ವಿಷಯದಲ್ಲಿ ಅನುಕೂಲಕರವಾಗಿಲ್ಲ. ನಾನು ಕಾಂಗ್ರೆಸ್ಸಿನಲ್ಲಿ ಲೋಕಸಭೆ ಸಂಸದನಾಗಿದ್ದಾಗ, ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ವಿಷಯದ ಬಗ್ಗೆ ಮಾತನಾಡುತ್ತಿದ್ದೆ. ಒಮ್ಮೆ ನನ್ನ ಭಾಷಣವನ್ನು ಮುಗಿಸಿದ ನಂತರ, ನಾನು ಹಿಂದಿರುಗಿ ನೋಡಿದರೆ ನನ್ನ ಪಕ್ಷದ ಹೆಚ್ಚಿನ ಸಂಸದರು ಎದ್ದು ಹೊರಟುಹೋಗಿದ್ದರು. ಇದರರ್ಥ ಏನು? ನನ್ನ ಅಂದಿನ ಪಕ್ಷದ ಜನರಿಗೂ ಸಹ, ಮಹಿಳಾ ಮೀಸಲಾತಿಯ ಅನಿವಾರ್ಯತೆ ಅರ್ಥವಾಗುತ್ತಿರಲಿಲ್ಲ’ ಎಂದು ವಿವರಿಸಿದರು.

‘ಮಹಿಳಾ ಮೀಸಲು ಮಸೂದೆಗೆ ಅಂಗೀಕಾರ ಪಡೆದುಕೊಳ್ಳಲು ಎಲ್ಲ ರಾಜಕೀಯ ಪಕ್ಷಗಳು ಸತತ ಪ್ರಯತ್ನ ನಡೆಸುತ್ತಲೇ ಇರಬೇಕು. ನಾನು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದಾಗ, ಜಿಲ್ಲಾ ಪರಿಷತ್ ಮತ್ತು ಪಂಚಾಯತ್ ಸಮಿತಿಯಂತಹ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿಯನ್ನು ಪರಿಚಯಿಸಲಾಯಿತು. ಆರಂಭದಲ್ಲಿ ಇದನ್ನು ವಿರೋಧಿಸಲಾಯಿತು ಆದರೆ ನಂತರ ಜನರು ಅದನ್ನು ಒಪ್ಪಿಕೊಂಡರು’ ಎಂದು ನೆನಪಿಸಿಕೊಂಡರು.

Published On - 7:53 am, Sun, 18 September 22

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು