AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯ ಹಾಸಿಗೆ ಮೇಲೆ ವೈದ್ಯಕೀಯ ಉಪಕರಣಗಳ ಹಿಡಿದು ಗದ್ದಲ ಸೃಷ್ಟಿಸಿದ ಮಾನಸಿಕ ಅಸ್ವಸ್ಥ

ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಗದ್ದಲ ಸೃಷ್ಟಿಸಿರುವ ಘಟನೆ ನಡೆದಿದೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ರೋಗಿಯೊಬ್ಬ ವೈದ್ಯಕೀಯ ಉಪಕರಣಗಳನ್ನು ಹಿಡಿದು ಹಾಸಿಗೆಯ ಮೇಲೆ ಹತ್ತಿ ಕಿರುಚಾಡುತ್ತಾ ಗದ್ದಲ ಸೃಷ್ಟಿಸಿದ್ದಾನೆ. ಆತನನ್ನು ಕೆಳಗಿಳಿಸಲು ಹೋದ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ.

ಆಸ್ಪತ್ರೆಯ ಹಾಸಿಗೆ ಮೇಲೆ ವೈದ್ಯಕೀಯ ಉಪಕರಣಗಳ ಹಿಡಿದು ಗದ್ದಲ ಸೃಷ್ಟಿಸಿದ ಮಾನಸಿಕ ಅಸ್ವಸ್ಥ
ಆಸ್ಪತ್ರೆ ಮಾನಸಿಕ ಅಸ್ವಸ್ಥ
ನಯನಾ ರಾಜೀವ್
|

Updated on:Jul 29, 2024 | 3:21 PM

Share

ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಗದ್ದಲ ಸೃಷ್ಟಿಸಿರುವ ಘಟನೆ ನಡೆದಿದೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ರೋಗಿಯೊಬ್ಬ ವೈದ್ಯಕೀಯ ಉಪಕರಣಗಳನ್ನು ಹಿಡಿದು ಹಾಸಿಗೆಯ ಮೇಲೆ ಹತ್ತಿ ಕಿರುಚಾಡುತ್ತಾ ಗದ್ದಲ ಸೃಷ್ಟಿಸಿದ್ದಾನೆ. ಆತನನ್ನು ಕೆಳಗಿಳಿಸಲು ಹೋದ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ.

ಕರ್ನೂಲಿನ ಅರೇಕಲ್ ಗ್ರಾಮದ ಈಡಿಗ ರಾಘವೇಂದ್ರ ಎಂದು ಗುರುತಿಸಲಾದ ವ್ಯಕ್ತಿ ಆಸ್ಪತ್ರೆಯ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದು, ಚಿಕಿತ್ಸೆ ವೇಳೆ ವೈದ್ಯಕೀಯ ಉಪಕರಣಗಳನ್ನು ಹಾನಿಗೊಳಿಸಿದ್ದಾನೆ. ಘಟನೆಯ ವಿಡಿಯೋದಲ್ಲಿ ರಾಘವೇಂದ್ರ ಆಸ್ಪತ್ರೆಯ ಬೆಡ್ ಒಂದರ ಮೇಲೆ ವೈದ್ಯಕೀಯ ಉಪಕರಣದೊಂದಿಗೆ ನಿಂತು ಆಸ್ಪತ್ರೆಯ ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸುತ್ತಿರುವುದು ಕಂಡುಬಂದಿದೆ.

ನಂತರ ಆತನನ್ನು ಆಸ್ಪತ್ರೆಯ ಸಿಬ್ಬಂದಿ ಕುಟುಂಬ ಸದಸ್ಯರ ನೆರವಿನಿಂದ ಹಿಡಿದು ಕಟ್ಟಿ ಹಾಕಿದ್ದಾರೆ. ರಾಘವೇಂದ್ರ ಕುಟುಂಬದ ಪ್ರಕಾರ, ಅವರು ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ವ್ಯಕ್ತಿಯನ್ನು ಹೇಗೋ ಹಿಡಿದು ಚಿಕಿತ್ಸೆ ನೀಡಲಾಗಿದೆ, ನಂತರ ಚಿಕಿತ್ಸೆಗಾಗಿ ಉತ್ತಮ ವೈದ್ಯಕೀಯ ಸೌಲಭ್ಯ ಇರುವ ಆಸ್ಪತ್ರೆಗೆ ಶಿಫಾರಸು ಮಾಡಲಾಗಿದೆ.

ಮತ್ತಷ್ಟು ಓದಿ: Lyme Disease: ಲೈಮ್ ಕಾಯಿಲೆಯು ಮಾನಸಿಕ ಅಸ್ವಸ್ಥತೆ, ಆತ್ಮಹತ್ಯೆ ಅಪಾಯ ಹೆಚ್ಚಿಸುತ್ತದೆ: ಅಧ್ಯಯನ

ಘಟನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕ (ಸಿಎಂಎಸ್) ಶ್ರೀನಿವಾಸ್ ನಾಯ್ಕ್, ರಾಘವೇಂದ್ರ ಅವರ ಕ್ರಮದಿಂದ ಸುಮಾರು ಒಂದು ಲಕ್ಷ ರೂ.ಗೂ ಹೆಚ್ಚು ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದ್ದು, ಈ ಬಗ್ಗೆ ತನಿಖೆಯನ್ನೂ ಆರಂಭಿಸಲಾಗಿದೆ ಎಂದು ಸಿಎಂಎಸ್ ಶ್ರೀನಿವಾಸ್ ನಾಯ್ಕ್ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:58 am, Sun, 28 July 24

Follow Us
ಪೃಥ್ವಿ-ಕಾರ್ತಿಕ್​ಗೆ ‘ಗ್ಯಾಸ್ ಟ್ರಬಲ್’: ಇಬ್ಬರಲ್ಲಿ ಯಾರು ಹೀರೊ?
ಪೃಥ್ವಿ-ಕಾರ್ತಿಕ್​ಗೆ ‘ಗ್ಯಾಸ್ ಟ್ರಬಲ್’: ಇಬ್ಬರಲ್ಲಿ ಯಾರು ಹೀರೊ?
1 ಗಂಟೆಯಲ್ಲಿ ಏನೇನೋ ಆಗ್ಬಹುದು: ದಾವಣಗೆರೆಯಲ್ಲಿ ಜಮೀರ್ ಅಚ್ಚರಿ ಮಾತು!
1 ಗಂಟೆಯಲ್ಲಿ ಏನೇನೋ ಆಗ್ಬಹುದು: ದಾವಣಗೆರೆಯಲ್ಲಿ ಜಮೀರ್ ಅಚ್ಚರಿ ಮಾತು!
ಕಿಶನ್ ವಿಕೆಟ್ ಬಿದ್ದ ಕೂಡಲೇ ದೇವರಿಗೆ ಕೈಮುಗಿದ ಲಕ್ನೋ ಮಾಲೀಕ
ಕಿಶನ್ ವಿಕೆಟ್ ಬಿದ್ದ ಕೂಡಲೇ ದೇವರಿಗೆ ಕೈಮುಗಿದ ಲಕ್ನೋ ಮಾಲೀಕ
ಏಕವಚನದಲ್ಲಿ ಬೈದಿದ್ದ ಸಚಿವ ಮಲ್ಲಿಕಾರ್ಜುರನ್ನು ಕ್ಷಮಿಸಿದ ಜಮೀರ್
ಏಕವಚನದಲ್ಲಿ ಬೈದಿದ್ದ ಸಚಿವ ಮಲ್ಲಿಕಾರ್ಜುರನ್ನು ಕ್ಷಮಿಸಿದ ಜಮೀರ್
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ
ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ
ದಾವಣಗೆರೆ ಬೈಎಲೆಕ್ಷನ್​​: ಅಸಮಾಧಾನ ಆರೋಪಕ್ಕೆ ಜಮೀರ್​​ ಫಸ್ಟ್​​ ರಿಯಾಕ್ಷನ್
ದಾವಣಗೆರೆ ಬೈಎಲೆಕ್ಷನ್​​: ಅಸಮಾಧಾನ ಆರೋಪಕ್ಕೆ ಜಮೀರ್​​ ಫಸ್ಟ್​​ ರಿಯಾಕ್ಷನ್
47ನೇ ವಯಸ್ಸಿನಲ್ಲಿ ನಟಿ ಜ್ಯೋತಿಕಾ ವರ್ಕೌಟ್ ಹೇಗಿದೆ ನೋಡಿ; ವಿಡಿಯೋ ವೈರಲ್
47ನೇ ವಯಸ್ಸಿನಲ್ಲಿ ನಟಿ ಜ್ಯೋತಿಕಾ ವರ್ಕೌಟ್ ಹೇಗಿದೆ ನೋಡಿ; ವಿಡಿಯೋ ವೈರಲ್
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ