AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಮನೆಯಲ್ಲಿ ನನ್ನ ಮಾನಭಂಗವಾಗಿದೆ, ಚಾರಿತ್ರ್ಯವಧೆ ನಡೆಸಿದ್ದಾರೆ, ನಾನು ಪಾಲಿಗ್ರಾಫ್​ ಪರೀಕ್ಷೆಗೆ ಸಿದ್ಧ : ಸ್ವಾತಿ ಮಲಿವಾಲ್

ಅರವಿಂದ್ ಕೇಜ್ರಿವಾಲ್​ ಮನೆಯಲ್ಲಿ ನನ್ನ ಚಾರಿತ್ರ್ಯ ವಧೆ ನಡೆದಿದೆ, ನಾನು ಎಫ್​ಐಆರ್​ನಲ್ಲಿ ಹೇಳಿರುವುದೆಲ್ಲವೂ ನಿಜ, ನಾನು ಪಾಲಿಗ್ರಾಫ್​ ಹಾಗೂ ನಾರ್ಕೊ ಪರೀಕ್ಷೆಗೆ ಸಿದ್ಧನಿದ್ದೇನೆ ಎಂದು ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಹೇಳಿದ್ದಾರೆ.

ಆ ಮನೆಯಲ್ಲಿ ನನ್ನ ಮಾನಭಂಗವಾಗಿದೆ, ಚಾರಿತ್ರ್ಯವಧೆ ನಡೆಸಿದ್ದಾರೆ, ನಾನು ಪಾಲಿಗ್ರಾಫ್​ ಪರೀಕ್ಷೆಗೆ ಸಿದ್ಧ : ಸ್ವಾತಿ ಮಲಿವಾಲ್
ಸ್ವಾತಿ ಮಲಿವಾಲ್
ನಯನಾ ರಾಜೀವ್
|

Updated on: May 24, 2024 | 8:31 AM

Share

ಆಮ್​ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್(Swati Maliwal) ಅವರು ಅರವಿಂದ್ ಕೇಜ್ರಿವಾಲ್(Arvind Kejriwal)​ ಅವರ ನಿವಾಸದಲ್ಲಿ ಅವರ ಆಪ್ತ ಕಾಯದರ್ಶಿ ವಿಭವ್ ಕುಮಾರ್ ತಮ್ಮ ಮೇಲೆ ನಡೆಸಿದ ಹಲ್ಲೆ ಕುರಿತು ಮಾಧ್ಯಮದ ಮುಂದೆ ಮಾತನಾಡಿದ್ದಾರೆ. ಆ ಮನೆಯಲ್ಲಿ ನನ್ನ ಮಾನಭಂಗ ನಡೆದಿದೆ, ಚಾರಿತ್ರ್ಯ ವಧೆಯಾಗಿದೆ, ಎಫ್‌ಐಆರ್‌ನಲ್ಲಿ ತಾನು ಹೇಳಿರುವುದು ನಿಜ ಎಂದು ಸ್ವಾತಿ ಮಲಿವಾಲ್ ಹೇಳಿದ್ದಾರೆ. ನಾರ್ಕೋ ಪರೀಕ್ಷೆ ಮತ್ತು ಪಾಲಿಗ್ರಾಫ್‌ಗೆ ಒಳಗಾಗಲು ಸಿದ್ಧ ಎಂದು ಅವರು ಹೇಳಿದ್ದಾರೆ.

ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಸ್ವಾತಿ ಮಲಿವಾಲ್ ಸ್ಪಷ್ಟಪಡಿಸಿದ್ದಾರೆ. ಅವರಿಗೆ ನನ್ನ ರಾಜ್ಯಸಭಾ ಸ್ಥಾನ ಬೇಕಿದ್ದರೆ ಪ್ರೀತಿಯಿಂದ ಕೇಳಿದ್ದರೆ ನನ್ನ ಪ್ರಾಣವನ್ನು ಬೇಕಿದ್ದರೂ ಬಿಡುತ್ತಿದ್ದೆ, ಸಂಸದೆ ಎಂಬುದು ಸಣ್ಣ ವಿಷಯ, ಆದರೆ ಈಗ ನನ್ನ ಮೇಲೆ ಹಲ್ಲೆ ನಡೆದಿದೆ, ಪ್ರಪಂಚದ ಯಾವೊಂದು ಶಕ್ತಿ ಬಂದು ಹೇಳಿದರೂ ನಾನು ರಾಜೀನಾಮೆ ನೀಡುವ ಮಾತೇ ಇಲ್ಲ ಎಂದಿದ್ದಾರೆ.

ನನ್ನನ್ನು ಟ್ರೋಲ್ ಮಾಡಲಾಗುತ್ತಿದೆ, ನಾನು ಒತ್ತಡಕ್ಕೆ ಮಣಿದು ಈ ಪ್ರಕರಣವನ್ನು ಇಲ್ಲಿಗೆ ಬಿಡುತ್ತೇನೆ ಎಂದುಕೊಂಡಿದ್ದಾರೆ, ಆದರೆ ನಾನು ಎಫ್​ಐಆರ್​ನಲ್ಲಿ ಹೇಳಿರುವುದೆಲ್ಲವೂ ನಿಜ, ನಾನು ಪಾಲಿಗ್ರಾಫ್ ಹಾಗೂ ನಾರ್ಕೊ ಪರೀಕ್ಷೆ ಸಿದ್ಧನಿದ್ದೇನೆ, ನಾನು ಹೋರಾಡುತ್ತೇನೆ ಎಂದರು.

ಮತ್ತಷ್ಟು ಓದಿ: ಮೇ 13ರಂದು ನಡೆದ ಘಟನೆ ಬಗ್ಗೆ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಹೇಳಿದ್ದೇನು?

ಇಷ್ಟೆಲ್ಲ ಆದರೂ, ಇಲ್ಲಿಯವರೆಗೆ ನಾನು ಅರವಿಂದ್ ಜಿಯಿಂದ ಯಾವುದೇ ಕರೆ ಸ್ವೀಕರಿಸಿಲ್ಲ ಅಥವಾ ಅವರು ನನ್ನನ್ನು ಭೇಟಿ ಮಾಡಿಲ್ಲ ಎಂಬುದು ಸಹ ನಿಜ. ಅರವಿಂದ್ ಜಿ ಆರೋಪಿಯನ್ನು ರಕ್ಷಿಸುತ್ತಿದ್ದಾರೆ.

ನಾನು ಎಫ್‌ಐಆರ್‌ನಲ್ಲಿ ನನ್ನ ಬಟ್ಟೆ ಹರಿದಿದೆ ಎಂದು ಯಾವಾಗ ಹೇಳಿದ್ದೇನೆ, ನನ್ನ ತಲೆಗೆ ಗಾಯವಾಗಿದೆ ಎಂದು ನಾನು ಎಫ್‌ಐಆರ್‌ನಲ್ಲಿ ಹೇಳಿದ್ದೇನೆ. ನನಗೆ ಏನಾಯಿತು ಎಂದು ನಾನು ನಿಖರವಾಗಿ ಬರೆದಿದ್ದೇನೆ, ನಾನು ಅದಕ್ಕಿಂತ ಹೆಚ್ಚಿನದನ್ನು ಬರೆದಿಲ್ಲ ಎಂದರು.

ತಾನು ಸತ್ಯವನ್ನೇ ಹೇಳುತ್ತಿದ್ದೇನೆ ಎಂದು ಸಾಬೀತುಪಡಿಸಲು ಏನು ಬೇಕಾದರೂ ಮಾಡಲು ಸಿದ್ಧ ಎಂದು ಸ್ವಾತಿ ಮಲಿವಾಲ್ ಹೇಳಿದ್ದಾರೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್