AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್​ಬುಕ್​​ನಿಂದ ಪ್ರಧಾನಿ ಮೋದಿ ವೀಡಿಯೊ ಡಿಲೀಟ್: ತಾಂತ್ರಿಕ ದೋಷ ಎಂದು ಸರ್ಕಾರಕ್ಕೆ ಮೆಟಾ ಕ್ಷಮೆಯಾಚನೆ

ಪ್ರಧಾನಿ ನರೇಂದ್ರ ಮೋದಿ ಅವರ ಪರೀಕ್ಷಾ ಸುಧಾರಣೆ ಕುರಿತ ಭಾಷಣದ ವೀಡಿಯೊವನ್ನು ಭಾರತದಲ್ಲಿ ವೀಕ್ಷಿಸದಂತೆ ಫೇಸ್‌ಬುಕ್‌ನಲ್ಲಿ ತಾತ್ಕಾಲಿಕವಾಗಿ ನಿರ್ಬಂಧಿಸಿದ ಘಟನೆಗೆ ಸಂಬಂಧಿಸಿದಂತೆ, ಮೆಟಾ ಸಂಸ್ಥೆಯು ಕೇಂದ್ರ ಸರ್ಕಾರಕ್ಕೆ ಕ್ಷಮೆಯಾಚಿಸಿದೆ ಎಂದು ಮೂಲಗಳು ತಿಳಿಸಿವೆ. ತಾಂತ್ರಿಕ ದೋಷದಿಂದಾಗಿ ವೀಡಿಯೊವನ್ನು ತಪ್ಪಾಗಿ ತೆಗೆದುಹಾಕಲಾಗಿತ್ತು. ತಕ್ಷಣವೇ ದೋಷವನ್ನು ಸರಿಪಡಿಸಿ ವೀಡಿಯೊವನ್ನು ಮತ್ತೆ ಮರುಸ್ಥಾಪಿಸಲಾಗಿದೆ ಎಂದು ಮೆಟಾ ವಕ್ತಾರರು ಸ್ಪಷ್ಟನೆ ನೀಡಿದ್ದಾರೆ.

ಫೇಸ್​ಬುಕ್​​ನಿಂದ ಪ್ರಧಾನಿ ಮೋದಿ ವೀಡಿಯೊ ಡಿಲೀಟ್: ತಾಂತ್ರಿಕ ದೋಷ ಎಂದು ಸರ್ಕಾರಕ್ಕೆ ಮೆಟಾ ಕ್ಷಮೆಯಾಚನೆ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Jul 28, 2026 | 11:27 AM

Share

ನವದೆಹಲಿ,ಜುಲೈ 28: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಪರೀಕ್ಷಾ ಸುಧಾರಣೆ ಕುರಿತ ಭಾಷಣದ ವೀಡಿಯೊವನ್ನು ಭಾರತದಲ್ಲಿ ವೀಕ್ಷಿಸದಂತೆ ಫೇಸ್‌ಬುಕ್‌ನಲ್ಲಿ ತಾತ್ಕಾಲಿಕವಾಗಿ ನಿರ್ಬಂಧಿಸಿದ ಘಟನೆಗೆ ಸಂಬಂಧಿಸಿದಂತೆ, ಮೆಟಾ ಸಂಸ್ಥೆಯು ಕೇಂದ್ರ ಸರ್ಕಾರಕ್ಕೆ ಕ್ಷಮೆಯಾಚಿಸಿದೆ ಎಂದು ಮೂಲಗಳು ತಿಳಿಸಿವೆ. ತಾಂತ್ರಿಕ ದೋಷದಿಂದಾಗಿ ವೀಡಿಯೊವನ್ನು ತಪ್ಪಾಗಿ ತೆಗೆದುಹಾಕಲಾಗಿತ್ತು. ತಕ್ಷಣವೇ ದೋಷವನ್ನು ಸರಿಪಡಿಸಿ ವೀಡಿಯೊವನ್ನು ಮತ್ತೆ ಮರುಸ್ಥಾಪಿಸಲಾಗಿದೆ ಎಂದು ಮೆಟಾ ವಕ್ತಾರರು ಸ್ಪಷ್ಟನೆ ನೀಡಿದ್ದಾರೆ.

ವಿದೇಶಿ ಸಾಮಾಜಿಕ ಜಾಲತಾಣ ವೇದಿಕೆಯೊಂದು ಭಾರತದ ಪ್ರಧಾನಿಯವರ ಪೋಸ್ಟ್ ನಿರ್ಬಂಧಿಸಿರುವುದನ್ನು ಕೇಂದ್ರ ಸರ್ಕಾರ ತೀವ್ರವಾಗಿ ಪರಿಗಣಿಸಿದೆ. ಮೆಟಾ ನೀಡಿರುವ ವಿವರಣೆಯನ್ನು ಪರಿಶೀಲಿಸುತ್ತಿದ್ದು, ಶೀಘ್ರದಲ್ಲೇ ಮೆಟಾ ಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸಮನ್ಸ್ ಜಾರಿಗೊಳಿಸುವ ಸಾಧ್ಯತೆಯಿದೆ.

ವೀಡಿಯೊದಲ್ಲೇನಿತ್ತು?: ಜುಲೈ 23 ರಂದು ಅಪ್‌ಲೋಡ್ ಮಾಡಲಾಗಿದ್ದ ಈ ವೀಡಿಯೊದಲ್ಲಿ, ಜಿರಳೆ ಜನತಾ ಪಕ್ಷ ಆಯೋಜಿಸಿದ್ದ ವಿದ್ಯಾರ್ಥಿ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಜೆನ್​ ಝಿ ಯುವಜನತೆಗೆ ನೀಡಿದ ಮೊದಲ ಸಂದೇಶವಿತ್ತು. ಇದರಲ್ಲಿ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಕಠಿಣ ಕಾನೂನು ತರುವುದಾಗಿ ಅವರು ಘೋಷಿಸಿದ್ದರು. ವೀಡಿಯೊವನ್ನು ತಡೆಹಿಡಿಯುವ ಮೊದಲು ಅದು ಈಗಾಗಲೇ ಲಕ್ಷಾಂತರ ವೀಕ್ಷಣೆಗಳನ್ನು ಗಳಿಸಿ ಭಾರಿ ಸದ್ದು ಮಾಡಿತ್ತು. ಮೆಟಾ ನಿರ್ಬಂಧವನ್ನು ತೆರವುಗೊಳಿಸಿದ ನಂತರ ಕ್ಲಿಪ್ ಮತ್ತೆ ಸಾರ್ವಜನಿಕರಿಗೆ ಲಭ್ಯವಾಗಿದೆ.

ಮತ್ತಷ್ಟು ಓದಿ: ಪ್ರಧಾನಿ ಮೋದಿ ಪೋಸ್ಟ್ ತಡೆಹಿಡಿದ ಫೇಸ್‌ಬುಕ್: ಇದು ಭಾರತದ ಪ್ರಜಾಪ್ರಭುತ್ವದ ಮೇಲಿನ ಹಸ್ತಕ್ಷೇಪ, ತಜಿಂದರ್ ಬಗ್ಗಾ ಆಕ್ರೋಶ

ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ವಿದ್ಯಾರ್ಥಿಗಳು ನಡೆಸುತ್ತಿದ್ದ 36 ದಿನಗಳ ಸತತ ಆಂದೋಲನ ಹಾಗೂ ಜುಲೈ 25 ರಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಗಿತ್ತು. ಪ್ರಧಾನಿ ಮೋದಿ ಅಧಿಕೃತ ಸಂದೇಶದ ವೀಡಿಯೊವನ್ನೇ ನಿರ್ಬಂಧಿಸಿರುವ ಮೆಟಾ ಸಂಸ್ಥೆಯ ನಡೆಯನ್ನು ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಶೀಘ್ರದಲ್ಲೇ ಮೆಟಾ ಸಂಸ್ಥೆಯ ಉನ್ನತಾಧಿಕಾರಿಗಳಿಗೆ ಸಮನ್ಸ್ ಜಾರಿಗೊಳಿಸಿ ವಿಚಾರಣೆ ನಡೆಸುವ ಸಾಧ್ಯತೆಯಿದೆ.

ಪೋಸ್ಟ್​

ಭಾರತೀಯ ಐಟಿ ಕಾಯ್ದೆಯಡಿ ಸಾಮಾಜಿಕ ಜಾಲತಾಣ ಸಂಸ್ಥೆಗಳಿಗೆ ನೀಡಲಾಗಿರುವ ‘ಸೇಫ್ ಹಾರ್ಬರ್’ ಸೌಲಭ್ಯವನ್ನು ಮೆಟಾ ಇಂತಹ ತಾಂತ್ರಿಕ ಎಡವಟ್ಟುಗಳಿಂದ ದುರುಪಯೋಗಪಡಿಸಿಕೊಳ್ಳುತ್ತಿದೆಯೇ ಎಂಬ ಕುರಿತು ಡಿಜಿಟಲ್ ನೀತಿ ತಜ್ಞರ ನಡುವೆ ಸಾರ್ವಜನಿಕ ಚರ್ಚೆ ಶುರುವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು