MeToo Case: ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸುದಾಗಿ ಸುಪ್ರೀಂಗೆ ದೆಹಲಿ ಪೊಲೀಸರ ಮಾಹಿತಿ

|

Updated on: Apr 28, 2023 | 4:34 PM

ಕುಸ್ತಿ ಸಂಸ್ಥೆಯ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸುವುದಾಗಿ ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.

MeToo Case: ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸುದಾಗಿ ಸುಪ್ರೀಂಗೆ ದೆಹಲಿ ಪೊಲೀಸರ ಮಾಹಿತಿ
ಸಾಂದರ್ಭಿಕ ಚಿತ್ರ
Follow us on

ದೆಹಲಿ: MeToo ಪ್ರಕರಣಕ್ಕೆ ಸಂಬಂಧಿಸಿದಂತೆ ಕುಸ್ತಿಪಟುಗಳ ಪ್ರತಿಭಟನೆಯ ನಡುವೆ ಇಂದು ಕುಸ್ತಿ ಸಂಸ್ಥೆಯ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸುವುದಾಗಿ ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ. ಒಂದು ವರ್ಷಗಳಿಂದ ನಡೆಯುತ್ತಿರುವ ಕುಸ್ತಿಪಟುಗಳ ಹೋರಾಟಕ್ಕೆ ದೊಡ್ಡ ಬಲ ಸಿಕ್ಕಿದೆ. ಸುಪ್ರೀಂ ಕೋರ್ಟ್​​ ದೆಹಲಿ ಪೊಲೀಸರಿಗೆ ಏ.25ರಂದು ನೋಟಿಸ್​​ ನೀಡಿತ್ತು. ಭಾರತದ ಕುಸ್ತಿ ಒಕ್ಕೂಟದ (WFI) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ವಿಷಯಕ್ಕೆ ಸಂಬಂಧಿಸಿದಂತೆ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ. ಇದರ ಜತೆಗೆ ವಿನೇಶ್ ಫೋಗಟ್ ಸೇರಿದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳು ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಸುಪ್ರೀಂಕೋರ್ಟ್‌ಗೆ (Supreme Court) ಅರ್ಜಿ ಸಲ್ಲಿಸಿದ್ದರು, ಇದು ಆರೋಪಗಳನ್ನು ಗಂಭೀರ ವಿಚಾರ ಎಂದು ಸುಪ್ರೀಂ ಕೋರ್ಟ್ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿತ್ತು. ಇದೆ ಶುಕ್ರವಾರ (ಏ.28) ವಿಚಾರಣೆ ನಡೆಯಲಿದೆ ಎಂದು ಹೇಳಲಾಗಿದೆ. ಸುಪ್ರೀಂ ನೋಟಿಸ್​​ ನಂತರ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ದೂರು ದಾಖಲಿಸಿಕೊಳ್ಳಲಾಗುವುದು ಎಂದು ದೆಹಲಿ ಪೊಲೀಸ್​​ ಇಲಾಖೆ ಹೇಳಿದೆ.

ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಏಳು ಮಹಿಳಾ ಕುಸ್ತಿಪಟುಗಳು ಸೆಂಟ್ರಲ್ ದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದಾರೆ. ಆದರೆ ಈ ಪ್ರಕರಣದಲ್ಲಿ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ, ಪೊಲೀಸರು ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸುವವರೆಗೆ ಹೋರಾಟ ಮುಂದುವರಿಸುವುದಾಗಿ ಪ್ರತಿಭಟನಾನಿರತ ಅಥ್ಲೀಟ್‌ಗಳು ಹೇಳಿದ್ದಾರೆ. ಆಶ್ವಾಸನೆ ನೀಡಿದ್ದರಿಂದ ನಾವು ಜನವರಿಯಲ್ಲಿ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸಿದ್ದೆವು. ಅದು ಸುಳ್ಳು ಆಶ್ವಾಸನೆಯಾಗಿತ್ತು ಎಂದು ಅವರು ಹೇಳಿದ್ದಾರೆ. ನಾವು ಹಗಲು ರಾತ್ರಿ ಇಲ್ಲಿ ಕುಳಿತುಕೊಳ್ಳುತ್ತೇವೆ. ನಮಗೆ ನ್ಯಾಯ ಸಿಗುವವರೆಗೂ ನಾವು ಇಲ್ಲಿಯೇ ಕುಳಿತುಕೊಳ್ಳುತ್ತೇವೆ ಎಂದು ಫುಟ್‌ಪಾತ್‌ನಲ್ಲಿಯೇ ಇಡೀ ರಾತ್ರಿ ಕಳೆದ ಫೋಗಟ್ ಹೇಳಿದ್ದಾರೆ.

ಇದನ್ನೂ ಓದಿ: WFI ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸಲು ಒತ್ತಾಯಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಕುಸ್ತಿಪಟುಗಳು

ನಾವು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಮತ್ತು ಇತರ ಸಂಬಂಧಿತ ಅಧಿಕಾರಿಗಳನ್ನು ಸಂಪರ್ಕಿಸಲು ಮೂರು ತಿಂಗಳಿನಿಂದ ಪ್ರಯತ್ನಿಸುತ್ತಿದ್ದೇವೆ. ಸಮಿತಿಯ ಸದಸ್ಯರು ನಮಗೆ ಪ್ರತಿಕ್ರಿಯಿಸುತ್ತಿಲ್ಲ, ಕ್ರೀಡಾ ಸಚಿವಾಲಯವೂ ಏನನ್ನೂ ಹೇಳಿಲ್ಲ, ಅವರು ನಮ್ಮ ಕರೆಗಳನ್ನು ಸಹ ಸ್ವೀಕರಿಸುವುದಿಲ್ಲ. ನಾವು ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದೇವೆ ಮತ್ತು ಇದಕ್ಕಾಗಿ ನಮ್ಮ ವೃತ್ತಿಜೀವನವನ್ನು ಪಣಕ್ಕಿಟ್ಟಿದ್ದೇವೆ ಎಂದಿದ್ದಾರೆ ಫೋಗಟ್. ಹಲವಾರು ಕುಸ್ತಿಪಟುಗಳು ಜನವರಿ 18 ರಂದು ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಆರೋಪಗಳನ್ನು ಮಾಡಿ ಪ್ರತಿಭಟನೆ ನಡೆಸಿದ್ದರು. ಗಣ್ಯ ಕುಸ್ತಿಪಟುಗಳು ಸರ್ಕಾರದೊಂದಿಗಿನ ನಡೆಸಿದ ಮಾತುಕತೆಯಿಂದ ತೃಪ್ತರಾಗಿಲ್ಲ. ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ತಾವು ಕುಸ್ತಿ ಕಣಕ್ಕಿಳಿಯುವುದಿಲ್ಲ ಎಂದು ಅವರು ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:26 pm, Fri, 28 April 23