ತಮ್ಮ ರಾಜ್ಯಗಳಿಗೆ ವಾಪಸ್ ತೆರಳಲು ಅವಕಾಶ, ಷರತ್ತುಗಳು ಏನು?

ದೆಹಲಿ: ಮಹಾಮಾರಿ ಕೊರೊನಾ ವೈರಸ್ ಸೋಂಕು ತಡೆಗಟ್ಟಲು ಇಡೀ ದೇಶವನ್ನೇ ಲಾಕ್​ಡೌನ್​ನಲ್ಲಿಡಲಾಗಿದೆ. ಇದರಿಂದ ಬೇರೆ ಬೇರೆ ರಾಜ್ಯಗಳಿಗೆ ತೆರಳಿದ್ದ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಾರ್ಥಿಗಳು ತಮ್ಮ ತಮ್ಮ ಊರುಗಳಿಗೆ ತೆರಳಲು ಸಾಧ್ಯವಾಗದೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಇದೀಗ ಕೇಂದ್ರ ಗೃಹ ಇಲಾಖೆ ಬೇರೆ ಬೇರೆ ರಾಜ್ಯಗಳಲ್ಲಿ ಸಿಲುಕಿರುವವರಿಗೆ ಬಿಗ್ ರಿಲೀಫ್ ನೀಡಿದ್ದು, ತಮ್ಮ ತಮ್ಮ ರಾಜ್ಯಗಳಿಗೆ ವಾಪಸ್ ತೆರಳಲು ಅವಕಾಶ ನೀಡಿದೆ. ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಾರ್ಥಿಗಳು ತೆರಳಬೇಕಿರುವ ರಾಜ್ಯಗಳೊಂದಿಗೆ ಆಯಾ ರಾಜ್ಯ ಸರ್ಕಾರಗಳೇ ಚರ್ಚಿಸಿ, ಕಳಿಸುವ ವ್ಯವಸ್ಥೆ […]

ತಮ್ಮ ರಾಜ್ಯಗಳಿಗೆ ವಾಪಸ್ ತೆರಳಲು ಅವಕಾಶ, ಷರತ್ತುಗಳು ಏನು?
ಸಾಧು ಶ್ರೀನಾಥ್​

Updated on: Apr 29, 2020 | 7:29 PM

ದೆಹಲಿ: ಮಹಾಮಾರಿ ಕೊರೊನಾ ವೈರಸ್ ಸೋಂಕು ತಡೆಗಟ್ಟಲು ಇಡೀ ದೇಶವನ್ನೇ ಲಾಕ್​ಡೌನ್​ನಲ್ಲಿಡಲಾಗಿದೆ. ಇದರಿಂದ ಬೇರೆ ಬೇರೆ ರಾಜ್ಯಗಳಿಗೆ ತೆರಳಿದ್ದ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಾರ್ಥಿಗಳು ತಮ್ಮ ತಮ್ಮ ಊರುಗಳಿಗೆ ತೆರಳಲು ಸಾಧ್ಯವಾಗದೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಇದೀಗ ಕೇಂದ್ರ ಗೃಹ ಇಲಾಖೆ ಬೇರೆ ಬೇರೆ ರಾಜ್ಯಗಳಲ್ಲಿ ಸಿಲುಕಿರುವವರಿಗೆ ಬಿಗ್ ರಿಲೀಫ್ ನೀಡಿದ್ದು, ತಮ್ಮ ತಮ್ಮ ರಾಜ್ಯಗಳಿಗೆ ವಾಪಸ್ ತೆರಳಲು ಅವಕಾಶ ನೀಡಿದೆ. ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಾರ್ಥಿಗಳು ತೆರಳಬೇಕಿರುವ ರಾಜ್ಯಗಳೊಂದಿಗೆ ಆಯಾ ರಾಜ್ಯ ಸರ್ಕಾರಗಳೇ ಚರ್ಚಿಸಿ, ಕಳಿಸುವ ವ್ಯವಸ್ಥೆ ಮಾಡಬೇಕು ಎಂದಿದೆ.

ಕೊರೊನಾ ವೈರಸ್ ಸೋಂಕಿನ ಲಕ್ಷಣ ಇಲ್ಲದವರನ್ನಷ್ಟೇ ಅವರ ರಾಜ್ಯಗಳಿಗೆ ಕಳುಹಿಸಬೇಕು. ಸ್ಯಾನಿಟೈಸ್ ಮಾಡಿದ ಬಸ್​ಗಳಲ್ಲಿ ಮಾತ್ರ ಅಂತರ ಕಾಯ್ದುಕೊಂಡು ಕಳುಹಿಸಬೇಕು. ಅವರು ತಮ್ಮ ರಾಜ್ಯಗಳಿಗೆ ತಲುಪಿದ ಮೇಲೆ ಕ್ವಾರಂಟೈನ್ ಮಾಡಲು ಗೃಹ ಇಲಾಖೆ ಸೂಚನೆ ಕೊಟ್ಟಿದೆ.

Published On - 7:22 pm, Wed, 29 April 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us