ಲಾಕ್​ಡೌನ್ 4.O: ಹೊಸ ರೂಲ್ಸ್​ನ ಸಂಪೂರ್ಣ ಡೀಟೇಲ್ಸ್​ ಇಲ್ಲಿದೆ

ದೆಹಲಿ: ಕೊರೊನಾ ಹೆಮ್ಮಾರಿಯನ್ನು ತಡೆಗಟ್ಟಲು ದೇಶಾದ್ಯಂತ ಮೇ 31ರವರೆಗೆ ಲಾಕ್​ಡೌನ್ ವಿಸ್ತರಿಸಲಾಗಿದೆ. ಎಷ್ಟೇ ಬಿಗಿಯಾದ ಕ್ರಮಗಳನ್ನು ಕೈಗೊಂಡರೂ ಮಹಾಮಾರಿ ಹರಡುತ್ತಲೇ ಇದೆ. ಹಾಗಾಗಿ 4ನೇ ಹಂತದ ಲಾಕ್​ಡೌನ್​ ವಿಸ್ತರಿಸಿ ಇದೀಗ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಶಾಲಾ-ಕಾಲೇಜು ಬಂದ್: ಲಾಕ್​ಡೌನ್ ಮುಗಿಯುವವರೆಗೂ ಶಾಲಾ-ಕಾಲೇಜು ತೆರೆಯುವಂತಿಲ್ಲ. ಮೆಟ್ರೋ ಸಂಚಾರ ಸಹ ಇರುವುದಿಲ್ಲ. ಹೋಟೆಲ್ ಮತ್ತು ರೆಸ್ಟೋರೆಂಟ್​, ಚಿತ್ರಮಂದಿರಗಳು, ಮಾಲ್ ಬಂದ್. ವಿಮಾನಯಾನ ಸಂಚಾರಕ್ಕೂ ಸಹ ನಿರ್ಬಂಧ ವಿಧಿಸಲಾಗಿದೆ. ಸಂಜೆ 7ರಿಂದ ಬೆಳಗ್ಗೆ 7ರವರೆಗೆ ಸಂಚಾರಕ್ಕೆ ನಿರ್ಬಂಧ: ಕೊರೊನಾ […]

ಲಾಕ್​ಡೌನ್ 4.O: ಹೊಸ ರೂಲ್ಸ್​ನ ಸಂಪೂರ್ಣ ಡೀಟೇಲ್ಸ್​ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​

Updated on: May 17, 2020 | 7:35 PM

ದೆಹಲಿ: ಕೊರೊನಾ ಹೆಮ್ಮಾರಿಯನ್ನು ತಡೆಗಟ್ಟಲು ದೇಶಾದ್ಯಂತ ಮೇ 31ರವರೆಗೆ ಲಾಕ್​ಡೌನ್ ವಿಸ್ತರಿಸಲಾಗಿದೆ. ಎಷ್ಟೇ ಬಿಗಿಯಾದ ಕ್ರಮಗಳನ್ನು ಕೈಗೊಂಡರೂ ಮಹಾಮಾರಿ ಹರಡುತ್ತಲೇ ಇದೆ. ಹಾಗಾಗಿ 4ನೇ ಹಂತದ ಲಾಕ್​ಡೌನ್​ ವಿಸ್ತರಿಸಿ ಇದೀಗ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

ಶಾಲಾ-ಕಾಲೇಜು ಬಂದ್:
ಲಾಕ್​ಡೌನ್ ಮುಗಿಯುವವರೆಗೂ ಶಾಲಾ-ಕಾಲೇಜು ತೆರೆಯುವಂತಿಲ್ಲ. ಮೆಟ್ರೋ ಸಂಚಾರ ಸಹ ಇರುವುದಿಲ್ಲ. ಹೋಟೆಲ್ ಮತ್ತು ರೆಸ್ಟೋರೆಂಟ್​, ಚಿತ್ರಮಂದಿರಗಳು, ಮಾಲ್ ಬಂದ್. ವಿಮಾನಯಾನ ಸಂಚಾರಕ್ಕೂ ಸಹ ನಿರ್ಬಂಧ ವಿಧಿಸಲಾಗಿದೆ.

ಸಂಜೆ 7ರಿಂದ ಬೆಳಗ್ಗೆ 7ರವರೆಗೆ ಸಂಚಾರಕ್ಕೆ ನಿರ್ಬಂಧ:
ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಕಂಟೇನ್ಮೆಂಟ್​ ಜೋನ್​ಗಳಲ್ಲಿ ಕಠಿಣ ನಿಯಮಗಳು ಜಾರಿಗೊಳಿಸಲಾಗಿದೆ. ಸಂಜೆ 7ರಿಂದ ಬೆಳಗ್ಗೆ 7ರವರೆಗೆ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. 10 ವರ್ಷದೊಳಗಿನವರು ಮನೆಯಿಂದ ಹೊರಬರುವಂತಿಲ್ಲ. 60 ವರ್ಷ ಮೇಲ್ಪಟ್ಟವರೂ ಕೂಡ ಮನೆಯಲ್ಲೇ ಇರಬೇಕು. ಮನೆ ಮನೆಗಳಲ್ಲಿ ಆರೋಗ್ಯ ಸರ್ವೆ ಮಾಡಬೇಕೆಂದು ಸೂಚನೆ ನೀಡಲಾಗಿದೆ. ಆರೋಗ್ಯ ಸೇತು ಌಪ್ ಬಳಸುವುದು ಕಡ್ಡಾಯಗೊಳಿಸಲಾಗಿದೆ. ಅಗತ್ಯವಸ್ತು ಸಾಗಣೆ ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

ಅಂತಾರಾಜ್ಯ ಪ್ರಯಾಣಕ್ಕೆ ಅವಕಾಶ:
ವಾಹನಗಳಲ್ಲಿ ಅಂತಾರಾಜ್ಯ ಪ್ರಯಾಣಕ್ಕೆ ಅವಕಾಶ ನೀಡಲಾಗಿದ್ದು, ರಾಜ್ಯದೊಳಗೆ ಸಾರಿಗೆ ವ್ಯವಸ್ಥೆ ಬಗ್ಗೆ ಆಯಾ ರಾಜ್ಯ ಸರ್ಕಾರಗಳೇ ತೀರ್ಮಾನ ಕೈಗೊಳ್ಳಬಹುದು. ಗೂಡ್ಸ್, ಕಾರ್ಗೋ ಟ್ರಕ್​ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ತಿಳಿಸಿದೆ.

ಜಿಲ್ಲಾಡಳಿತವೇ ಅಂತಿಮ ನಿರ್ಧಾರ:
ರೆಡ್, ಆರೆಂಜ್, ಗ್ರೀನ್​ ಬಗ್ಗೆ ಜಿಲ್ಲಾಡಳಿತ ನಿರ್ಧಾರ ಮಾಡಬೇಕು. ಕಂಟೇನ್ಮೆಂಟ್​​ ಜೋನ್​ಗಳಲ್ಲಿ ಚಟುವಟಿಕೆ ಬಗ್ಗೆ ನಿರ್ಧರಿಸಬೇಕು. ಬಫರ್​ಜೋನ್​ ವ್ಯಾಪ್ತಿ ಬಗ್ಗೆಯೂ ಜಿಲ್ಲಾಡಳಿತವೇ ಅಂತಿಮ ನಿರ್ಧಾರ ಕೈಗೊಳ್ಳಬಹುದು. ಮದ್ಯ ಮಾರಾಟಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ.

ಮದುವೆಗಳಿಗೆ 50 ಜನರಿಗೆ ಮಾತ್ರ ಅವಕಾಶ:
ಮದುವೆ ಸಮಾರಂಭಕ್ಕೆ 50 ಜನರ ಪಾಲ್ಗೊಳ್ಳಲು ಅವಕಾಶ. ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು 20 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಸಾರ್ವಜನಿಕ ಪ್ರದೇಶದಲ್ಲಿ ಉಗುಳಿದ್ರೆ ನಿರ್ದಾಕ್ಷಿಣ್ಯ ಕ್ರಮ:
ಧಾರ್ಮಿಕ ಸಭೆ, ಸಾರ್ವಜನಿಕ ಸಭೆ, ಸಮಾರಂಭಕ್ಕೆ ಕೇಂದ್ರ ಸರ್ಕಾರ ಬ್ರೇಕ್​ ಹಾಕಿದೆ. ಗುಟ್ಕಾ, ಪಾನ್ ಮಸಾಲಾ ಜಗಿಯುವುದಕ್ಕೆ ನಿರ್ಬಂಧ. ಸಾರ್ವಜನಿಕ ಪ್ರದೇಶದಲ್ಲಿ ಉಗುಳಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತೆ. ಸಾರ್ವಜನಿಕ ಸ್ಥಳ, ಸಾರ್ವಜನಿಕ ಸಾರಿಗೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ

ವೈದ್ಯರು, ವೈದ್ಯಕೀಯ ಸಿಬ್ಬಂದಿ ಸಂಚಾರಕ್ಕೆ ನಿರ್ಬಂಧವಿಲ್ಲ. ವೈದ್ಯರಿಗೆ ಅಂತಾರಾಜ್ಯ ಸಂಚಾರಕ್ಕೆ ಮುಕ್ತ ಅವಕಾಶವಿರುತ್ತೆ. ವೈದ್ಯರು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ತೆರಳಬಹುದು.

Published On - 7:01 pm, Sun, 17 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us