AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯ ಲೋಪ ಆರೋಪ: ಮೂವರು ಅಧಿಕಾರಿಗಳನ್ನು ಕೇಂದ್ರ ಸೇವೆಗೆ ವರ್ಗಾವಣೆ ಮಾಡಿದ ಗೃಹ ಇಲಾಖೆ

ಬಿಜೆಪಿ ಮುಖ್ಯಸ್ಥ ಜೆ ಪಿ ನಡ್ಡಾ ಅವರ ಬೆಂಗಾವಲು ವಾಹನಗಳ ಮೇಲೆ ದಾಳಿ ಪರಿಣಾಮವನ್ನು ಐಪಿಎಸ್ ಅಧಿಕಾರಿಗಳು ಎದುರಿಸಬೇಕಾಗಿದೆ. ಪಶ್ಚಿಮ ಬಂಗಾಳದ ಮೂವರು ಐಪಿಎಸ್ ಅಧಿಕಾರಿಗಳಿಗೆ ಕರ್ತವ್ಯ ಲೋಪದ ಆರೋಪದಡಿ ಗೃಹ ಇಲಾಖೆ ಸಮನ್ಸ್ ನೀಡಿದ್ದು, ಕೇಂದ್ರ ಸೇವೆಗೆ ಕರೆಸಿಕೊಂಡಿದೆ.

ಕರ್ತವ್ಯ ಲೋಪ ಆರೋಪ: ಮೂವರು ಅಧಿಕಾರಿಗಳನ್ನು ಕೇಂದ್ರ ಸೇವೆಗೆ ವರ್ಗಾವಣೆ ಮಾಡಿದ ಗೃಹ ಇಲಾಖೆ
ಜೆ ಪಿ ನಡ್ಡಾ ಭೇಟಿ ವೇಳೆ ಕಲ್ಲುತೂರಾಟಕ್ಕೆ ಸಿಲುಕಿ ಪುಡಿಪುಡಿಯಾದ ಬಿಜೆಪಿ ಮುಖಂಡರ ಕಾರಿನ ಗಾಜು
guruganesh bhat
| Edited By: |

Updated on:Dec 12, 2020 | 7:35 PM

Share

ದೆಹಲಿ: ಬಿಜೆಪಿ ಮುಖ್ಯಸ್ಥ ಜೆ ಪಿ ನಡ್ಡಾ ಅವರ ಬೆಂಗಾವಲು ವಾಹನಗಳ ಮೇಲೆ ದಾಳಿ ಪರಿಣಾಮವನ್ನು ಐಪಿಎಸ್ ಅಧಿಕಾರಿಗಳು ಎದುರಿಸಬೇಕಾಗಿದೆ. ಪಶ್ಚಿಮ ಬಂಗಾಳದ ಮೂವರು ಐಪಿಎಸ್ ಅಧಿಕಾರಿಗಳಿಗೆ ಕರ್ತವ್ಯ ಲೋಪದ ಆರೋಪದಡಿ ಗೃಹ ಇಲಾಖೆ ಸಮನ್ಸ್ ನೀಡಿದ್ದು, ಕೇಂದ್ರ ಸೇವೆಗೆ ವರ್ಗಾವಣೆ ಮಾಡಿದೆ. ಈ ಮೂಲಕ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಬಿಜೆಪಿಯ ಕೇಂದ್ರ ಸರ್ಕಾರಗಳ ನಡುವಿನ ಶೀತಲ ಸಮರ ಮುಂದುವರೆಯುವ ಎಲ್ಲ ಲಕ್ಷಣಗಳು  ಕಾಣಿಸುತ್ತಿವೆ.

ಡೈಮಂಡ್ ಹಾರ್ಬರ್​ ಠಾಣೆಯ ಎಸ್ ಪಿ ಭೋಲಾನಾಥ್ ಪಾಂಡೆ, ಡಿಐಜಿ ಪ್ರವೀಣ್ ತ್ರಿಪಾಠಿ, ದಕ್ಷಿಣ ಬಂಗಾಳದ ಎಡಿಜಿ ರಾಜೀವ್ ಮಿಶ್ರಾ ಅಂದಿನ ಘಟನೆಗೆ ಜವಾಬ್ದಾರರು ಎಂದು ಗೃಹ ಇಲಾಖೆ ಹೇಳಿದೆ. ಸಾಮಾನ್ಯವಾಗಿ ಈ ರೀತಿ ಐಪಿಎಸ್ ಅಧಿಕಾರಿಗಳ ಸೇವೆಯಲ್ಲಿ ಬದಲಾವಣೆಗೂ ಮುನ್ನ ರಾಜ್ಯ ಸರ್ಕಾರಗಳ ಅಭಿಪ್ರಾಯವನ್ನೂ ಪಡೆಯಲಾಗುತ್ತದೆ. ಆದರೆ, ಗೃಹ ಇಲಾಖೆ ಈ ಬಾರಿ ಏಕಪಕ್ಷೀಯ ಕ್ರಮ ಅನುಸರಿಸಿದೆ.

ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಆಯುಕ್ತರಿಗೂ ರಾಜ್ಯದ ಕಾನೂನು ಸುವ್ಯವಸ್ಥೆಯ ವರದಿ ಕೇಳಿ ಗೃಹ ಇಲಾಖೆ ಸಮನ್ಸ್ ನೀಡಿತ್ತು. ಆದರೆ, ಡಿಸೆಂಬರ್ 14ರ ರಾಜ್ಯ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ವಿವರಿಸಲು ನಿರ್ದೇಶನ ನೀಡಲಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ತಿಳಿಸಿದ್ದರು. ಅಲ್ಲದೇ, ಗೃಹ ಇಲಾಖೆಗೆ ಉತ್ತರಿಸಲು ಬಂಗಾಳ ಸರ್ಕಾರ ನಿರಾಕರಿಸಿತ್ತು.

ಪಶ್ಚಿಮ ಬಂಗಾಳದ ಪ್ರಧಾನ ಕಾರ್ಯದರ್ಶಿ, ಡಿಜಿಪಿಗೆ ಕೇಂದ್ರದಿಂದ ಸಮನ್ಸ್

Published On - 7:34 pm, Sat, 12 December 20

Follow Us
guruganesh bhat
guruganesh bhat
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ