AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯ ಲೋಪ ಆರೋಪ: ಮೂವರು ಅಧಿಕಾರಿಗಳನ್ನು ಕೇಂದ್ರ ಸೇವೆಗೆ ವರ್ಗಾವಣೆ ಮಾಡಿದ ಗೃಹ ಇಲಾಖೆ

ಬಿಜೆಪಿ ಮುಖ್ಯಸ್ಥ ಜೆ ಪಿ ನಡ್ಡಾ ಅವರ ಬೆಂಗಾವಲು ವಾಹನಗಳ ಮೇಲೆ ದಾಳಿ ಪರಿಣಾಮವನ್ನು ಐಪಿಎಸ್ ಅಧಿಕಾರಿಗಳು ಎದುರಿಸಬೇಕಾಗಿದೆ. ಪಶ್ಚಿಮ ಬಂಗಾಳದ ಮೂವರು ಐಪಿಎಸ್ ಅಧಿಕಾರಿಗಳಿಗೆ ಕರ್ತವ್ಯ ಲೋಪದ ಆರೋಪದಡಿ ಗೃಹ ಇಲಾಖೆ ಸಮನ್ಸ್ ನೀಡಿದ್ದು, ಕೇಂದ್ರ ಸೇವೆಗೆ ಕರೆಸಿಕೊಂಡಿದೆ.

ಕರ್ತವ್ಯ ಲೋಪ ಆರೋಪ: ಮೂವರು ಅಧಿಕಾರಿಗಳನ್ನು ಕೇಂದ್ರ ಸೇವೆಗೆ ವರ್ಗಾವಣೆ ಮಾಡಿದ ಗೃಹ ಇಲಾಖೆ
ಜೆ ಪಿ ನಡ್ಡಾ ಭೇಟಿ ವೇಳೆ ಕಲ್ಲುತೂರಾಟಕ್ಕೆ ಸಿಲುಕಿ ಪುಡಿಪುಡಿಯಾದ ಬಿಜೆಪಿ ಮುಖಂಡರ ಕಾರಿನ ಗಾಜು
guruganesh bhat
| Edited By: |

Updated on:Dec 12, 2020 | 7:35 PM

Share

ದೆಹಲಿ: ಬಿಜೆಪಿ ಮುಖ್ಯಸ್ಥ ಜೆ ಪಿ ನಡ್ಡಾ ಅವರ ಬೆಂಗಾವಲು ವಾಹನಗಳ ಮೇಲೆ ದಾಳಿ ಪರಿಣಾಮವನ್ನು ಐಪಿಎಸ್ ಅಧಿಕಾರಿಗಳು ಎದುರಿಸಬೇಕಾಗಿದೆ. ಪಶ್ಚಿಮ ಬಂಗಾಳದ ಮೂವರು ಐಪಿಎಸ್ ಅಧಿಕಾರಿಗಳಿಗೆ ಕರ್ತವ್ಯ ಲೋಪದ ಆರೋಪದಡಿ ಗೃಹ ಇಲಾಖೆ ಸಮನ್ಸ್ ನೀಡಿದ್ದು, ಕೇಂದ್ರ ಸೇವೆಗೆ ವರ್ಗಾವಣೆ ಮಾಡಿದೆ. ಈ ಮೂಲಕ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಬಿಜೆಪಿಯ ಕೇಂದ್ರ ಸರ್ಕಾರಗಳ ನಡುವಿನ ಶೀತಲ ಸಮರ ಮುಂದುವರೆಯುವ ಎಲ್ಲ ಲಕ್ಷಣಗಳು  ಕಾಣಿಸುತ್ತಿವೆ.

ಡೈಮಂಡ್ ಹಾರ್ಬರ್​ ಠಾಣೆಯ ಎಸ್ ಪಿ ಭೋಲಾನಾಥ್ ಪಾಂಡೆ, ಡಿಐಜಿ ಪ್ರವೀಣ್ ತ್ರಿಪಾಠಿ, ದಕ್ಷಿಣ ಬಂಗಾಳದ ಎಡಿಜಿ ರಾಜೀವ್ ಮಿಶ್ರಾ ಅಂದಿನ ಘಟನೆಗೆ ಜವಾಬ್ದಾರರು ಎಂದು ಗೃಹ ಇಲಾಖೆ ಹೇಳಿದೆ. ಸಾಮಾನ್ಯವಾಗಿ ಈ ರೀತಿ ಐಪಿಎಸ್ ಅಧಿಕಾರಿಗಳ ಸೇವೆಯಲ್ಲಿ ಬದಲಾವಣೆಗೂ ಮುನ್ನ ರಾಜ್ಯ ಸರ್ಕಾರಗಳ ಅಭಿಪ್ರಾಯವನ್ನೂ ಪಡೆಯಲಾಗುತ್ತದೆ. ಆದರೆ, ಗೃಹ ಇಲಾಖೆ ಈ ಬಾರಿ ಏಕಪಕ್ಷೀಯ ಕ್ರಮ ಅನುಸರಿಸಿದೆ.

ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಆಯುಕ್ತರಿಗೂ ರಾಜ್ಯದ ಕಾನೂನು ಸುವ್ಯವಸ್ಥೆಯ ವರದಿ ಕೇಳಿ ಗೃಹ ಇಲಾಖೆ ಸಮನ್ಸ್ ನೀಡಿತ್ತು. ಆದರೆ, ಡಿಸೆಂಬರ್ 14ರ ರಾಜ್ಯ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ವಿವರಿಸಲು ನಿರ್ದೇಶನ ನೀಡಲಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ತಿಳಿಸಿದ್ದರು. ಅಲ್ಲದೇ, ಗೃಹ ಇಲಾಖೆಗೆ ಉತ್ತರಿಸಲು ಬಂಗಾಳ ಸರ್ಕಾರ ನಿರಾಕರಿಸಿತ್ತು.

ಪಶ್ಚಿಮ ಬಂಗಾಳದ ಪ್ರಧಾನ ಕಾರ್ಯದರ್ಶಿ, ಡಿಜಿಪಿಗೆ ಕೇಂದ್ರದಿಂದ ಸಮನ್ಸ್

Published On - 7:34 pm, Sat, 12 December 20

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ