AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್​ಲಾಕ್ 5.0: ಶಾಲೆಗಳನ್ನು ತೆರೆಯುವುದು ರಾಜ್ಯ ಸರ್ಕಾರಗಳ ವಿವೇಚನೆ

ಕೇಂದ್ರ ಗೃಹ ಸಚಿವಾಲಯ ಅನ್​ಲಾಕ್​ 5.0ಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು ಅಕ್ಟೋಬರ್ 15ರಿಂದ ಸಿನಿಮಾ ಹಾಲ್​ಗಳನ್ನು ತೆರೆಯಲು ಅನುಮತಿ ನೀಡಿದೆ. ಆದರೆ, ಥಿಯೇಟರ್​ಗಳ ಸೀಟಿಂಗ್ ಸಾಮರ್ಥ್ಯದ ಶೇಕಡ 50 ರಷ್ಟು ಮಾತ್ರ ತುಂಬಿಸುವ ಷರತ್ತು ವಿಧಿಸಲಾಗಿದೆ. ಹಾಗೆಯೇ ಶಾಲಾ–ಕಾಲೇಜುಗಳನ್ನು ತೆರೆಯಲು ಅವಕಾಶ ನೀಡಲಾಗಿದೆಯಾದರೂ, ಆಯಾ ರಾಜ್ಯ ಸರ್ಕಾರಗಳು, ಅಲ್ಲಿ ಶಿಕ್ಷಣ ಸಂಸ್ಥೆಗಳು ಪರಿಸ್ಥಿತಿಯನ್ನು ಅವಲೋಕಿಸಿ ನಿರ್ಧಾರ ತೆಗೆದುಕೊಳ್ಳಬೇಕೆಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ. ಅಂದರೆ ಶೈಕ್ಷಣಿಕ ಸಂಸ್ಥೆಗಳನ್ನು ಪುನರಾರಂಭಿಸುವ ನಿರ್ಧಾರ ಆಯಾ ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶ […]

ಅನ್​ಲಾಕ್ 5.0: ಶಾಲೆಗಳನ್ನು ತೆರೆಯುವುದು ರಾಜ್ಯ ಸರ್ಕಾರಗಳ ವಿವೇಚನೆ
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 30, 2020 | 9:08 PM

Share

ಕೇಂದ್ರ ಗೃಹ ಸಚಿವಾಲಯ ಅನ್​ಲಾಕ್​ 5.0ಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು ಅಕ್ಟೋಬರ್ 15ರಿಂದ ಸಿನಿಮಾ ಹಾಲ್​ಗಳನ್ನು ತೆರೆಯಲು ಅನುಮತಿ ನೀಡಿದೆ.

ಆದರೆ, ಥಿಯೇಟರ್​ಗಳ ಸೀಟಿಂಗ್ ಸಾಮರ್ಥ್ಯದ ಶೇಕಡ 50 ರಷ್ಟು ಮಾತ್ರ ತುಂಬಿಸುವ ಷರತ್ತು ವಿಧಿಸಲಾಗಿದೆ. ಹಾಗೆಯೇ ಶಾಲಾಕಾಲೇಜುಗಳನ್ನು ತೆರೆಯಲು ಅವಕಾಶ ನೀಡಲಾಗಿದೆಯಾದರೂ, ಆಯಾ ರಾಜ್ಯ ಸರ್ಕಾರಗಳು, ಅಲ್ಲಿ ಶಿಕ್ಷಣ ಸಂಸ್ಥೆಗಳು ಪರಿಸ್ಥಿತಿಯನ್ನು ಅವಲೋಕಿಸಿ ನಿರ್ಧಾರ ತೆಗೆದುಕೊಳ್ಳಬೇಕೆಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ. ಅಂದರೆ ಶೈಕ್ಷಣಿಕ ಸಂಸ್ಥೆಗಳನ್ನು ಪುನರಾರಂಭಿಸುವ ನಿರ್ಧಾರ ಆಯಾ ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶ ಆಡಳಿತಗಳ ವಿವೇಚನೆಗೆ ಬಿಟ್ಟಿರುವ ವಿಚಾರವೆಂದು ತಿಳಿಸಲಾಗಿದೆ.

ಮನರಂಜನಾ ಪಾರ್ಕ್ ಮತ್ತು ಸ್ವಿಮ್ಮಿಂಗ್ ಪೂಲ್​ಗಳನ್ನು ಅಕ್ಟೋಬರ್ 15ರ ನಂತರ ಓಪನ್ ಮಾಡಬಹುದು, ವಾಣಿಜ್ಯ ವಸ್ತು ಪ್ರದರ್ಶನ ಆಯೋಜಿಸುವ ಅವಕಾಶ ಕೂಡ ನೀಡಲಾಗಿದೆ.

ಸಾಮಾಜಿಕ, ಶೈಕ್ಷಣಿಕ, ಕ್ರೀಡಾ, ಧಾರ್ಮಿಕ, ರಾಜಕೀಯ ಸಭೆಗೆ ಸೇರಲು ಈವರೆಗೆ ಇದ್ದ 100 ಜನರ ಮಿತಿಯನ್ನು ಅಕ್ಟೋಬರ್ 15ರ ನಂತರ ಹೆಚ್ಚಿಸುವ ನಿರೀಕ್ಷೆ ಇದೆಯೆಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

ಧಾರ್ಮಿಕ, ರಾಜಕೀಯ ಸಭೆ-ಸಮಾರಂಭಗಳು ಒಳಾಂಗಣದಲ್ಲಿ ಆಯೋಜಿದಲ್ಲಿ 200 ಜನ ಸೇರಲು ಅವಕಾಶ ನೀಡುವ ಸಾಧ್ಯತೆಯಿದೆ. ಹೊರಾಂಗಣದಲ್ಲಿ ಸಮಾರಂಭ ನಡೆಸಿದರೆ ಮೈದಾನದ ವಿಸ್ತೀರ್ಣಕ್ಕೆ ತಕ್ಕಂತೆ ಜನ ಸೇರಲು ಅವಕಾಶ ನೀಡಬಹುದಾದರೂ ದೈಹಿಕ ಅಂತರ ಕಡ್ಡಾಯವಾಗಿ ಕಾಯ್ದುಕೊಳ್ಳಲೇಬೇಕಾಗುತ್ತದೆ.

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ