AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್​ಲಾಕ್ 5.0: ಶಾಲೆಗಳನ್ನು ತೆರೆಯುವುದು ರಾಜ್ಯ ಸರ್ಕಾರಗಳ ವಿವೇಚನೆ

ಕೇಂದ್ರ ಗೃಹ ಸಚಿವಾಲಯ ಅನ್​ಲಾಕ್​ 5.0ಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು ಅಕ್ಟೋಬರ್ 15ರಿಂದ ಸಿನಿಮಾ ಹಾಲ್​ಗಳನ್ನು ತೆರೆಯಲು ಅನುಮತಿ ನೀಡಿದೆ. ಆದರೆ, ಥಿಯೇಟರ್​ಗಳ ಸೀಟಿಂಗ್ ಸಾಮರ್ಥ್ಯದ ಶೇಕಡ 50 ರಷ್ಟು ಮಾತ್ರ ತುಂಬಿಸುವ ಷರತ್ತು ವಿಧಿಸಲಾಗಿದೆ. ಹಾಗೆಯೇ ಶಾಲಾ–ಕಾಲೇಜುಗಳನ್ನು ತೆರೆಯಲು ಅವಕಾಶ ನೀಡಲಾಗಿದೆಯಾದರೂ, ಆಯಾ ರಾಜ್ಯ ಸರ್ಕಾರಗಳು, ಅಲ್ಲಿ ಶಿಕ್ಷಣ ಸಂಸ್ಥೆಗಳು ಪರಿಸ್ಥಿತಿಯನ್ನು ಅವಲೋಕಿಸಿ ನಿರ್ಧಾರ ತೆಗೆದುಕೊಳ್ಳಬೇಕೆಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ. ಅಂದರೆ ಶೈಕ್ಷಣಿಕ ಸಂಸ್ಥೆಗಳನ್ನು ಪುನರಾರಂಭಿಸುವ ನಿರ್ಧಾರ ಆಯಾ ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶ […]

ಅನ್​ಲಾಕ್ 5.0: ಶಾಲೆಗಳನ್ನು ತೆರೆಯುವುದು ರಾಜ್ಯ ಸರ್ಕಾರಗಳ ವಿವೇಚನೆ
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 30, 2020 | 9:08 PM

Share

ಕೇಂದ್ರ ಗೃಹ ಸಚಿವಾಲಯ ಅನ್​ಲಾಕ್​ 5.0ಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು ಅಕ್ಟೋಬರ್ 15ರಿಂದ ಸಿನಿಮಾ ಹಾಲ್​ಗಳನ್ನು ತೆರೆಯಲು ಅನುಮತಿ ನೀಡಿದೆ.

ಆದರೆ, ಥಿಯೇಟರ್​ಗಳ ಸೀಟಿಂಗ್ ಸಾಮರ್ಥ್ಯದ ಶೇಕಡ 50 ರಷ್ಟು ಮಾತ್ರ ತುಂಬಿಸುವ ಷರತ್ತು ವಿಧಿಸಲಾಗಿದೆ. ಹಾಗೆಯೇ ಶಾಲಾಕಾಲೇಜುಗಳನ್ನು ತೆರೆಯಲು ಅವಕಾಶ ನೀಡಲಾಗಿದೆಯಾದರೂ, ಆಯಾ ರಾಜ್ಯ ಸರ್ಕಾರಗಳು, ಅಲ್ಲಿ ಶಿಕ್ಷಣ ಸಂಸ್ಥೆಗಳು ಪರಿಸ್ಥಿತಿಯನ್ನು ಅವಲೋಕಿಸಿ ನಿರ್ಧಾರ ತೆಗೆದುಕೊಳ್ಳಬೇಕೆಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ. ಅಂದರೆ ಶೈಕ್ಷಣಿಕ ಸಂಸ್ಥೆಗಳನ್ನು ಪುನರಾರಂಭಿಸುವ ನಿರ್ಧಾರ ಆಯಾ ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶ ಆಡಳಿತಗಳ ವಿವೇಚನೆಗೆ ಬಿಟ್ಟಿರುವ ವಿಚಾರವೆಂದು ತಿಳಿಸಲಾಗಿದೆ.

ಮನರಂಜನಾ ಪಾರ್ಕ್ ಮತ್ತು ಸ್ವಿಮ್ಮಿಂಗ್ ಪೂಲ್​ಗಳನ್ನು ಅಕ್ಟೋಬರ್ 15ರ ನಂತರ ಓಪನ್ ಮಾಡಬಹುದು, ವಾಣಿಜ್ಯ ವಸ್ತು ಪ್ರದರ್ಶನ ಆಯೋಜಿಸುವ ಅವಕಾಶ ಕೂಡ ನೀಡಲಾಗಿದೆ.

ಸಾಮಾಜಿಕ, ಶೈಕ್ಷಣಿಕ, ಕ್ರೀಡಾ, ಧಾರ್ಮಿಕ, ರಾಜಕೀಯ ಸಭೆಗೆ ಸೇರಲು ಈವರೆಗೆ ಇದ್ದ 100 ಜನರ ಮಿತಿಯನ್ನು ಅಕ್ಟೋಬರ್ 15ರ ನಂತರ ಹೆಚ್ಚಿಸುವ ನಿರೀಕ್ಷೆ ಇದೆಯೆಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

ಧಾರ್ಮಿಕ, ರಾಜಕೀಯ ಸಭೆ-ಸಮಾರಂಭಗಳು ಒಳಾಂಗಣದಲ್ಲಿ ಆಯೋಜಿದಲ್ಲಿ 200 ಜನ ಸೇರಲು ಅವಕಾಶ ನೀಡುವ ಸಾಧ್ಯತೆಯಿದೆ. ಹೊರಾಂಗಣದಲ್ಲಿ ಸಮಾರಂಭ ನಡೆಸಿದರೆ ಮೈದಾನದ ವಿಸ್ತೀರ್ಣಕ್ಕೆ ತಕ್ಕಂತೆ ಜನ ಸೇರಲು ಅವಕಾಶ ನೀಡಬಹುದಾದರೂ ದೈಹಿಕ ಅಂತರ ಕಡ್ಡಾಯವಾಗಿ ಕಾಯ್ದುಕೊಳ್ಳಲೇಬೇಕಾಗುತ್ತದೆ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ