AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mia Khalifa: ಜಾಮೂನು, ಸಮೋಸಾ ತಿಂದು ರೈತರ ಪರವಾಗಿ ಮತ್ತೆ ಟ್ವೀಟ್​ ಮಾಡಿದ ಮಿಯಾ ಖಲೀಫಾ

ಈ ವೀಡಿಯೊವನ್ನು ಹಂಚಿಕೊಳ್ಳುವಾಗ ಮಿಯಾ ಶೀರ್ಷಿಕೆ ಒಂದನ್ನು ಬರೆದಿದ್ದಾರೆ. ಅದರಲ್ಲಿ, ನಿತ್ಯ ಒಂದು ಗುಲಾಬ್​ ಜಾಮೂನ್​ ತಿಂದರೆ ಫ್ಯಾಸಿಸಂ ದೂರವಾಗುತ್ತದೆ ಎಂದು ಬರೆದುಕೊಂಡಿದ್ದಾರೆ.

Mia Khalifa: ಜಾಮೂನು, ಸಮೋಸಾ ತಿಂದು ರೈತರ ಪರವಾಗಿ ಮತ್ತೆ ಟ್ವೀಟ್​ ಮಾಡಿದ ಮಿಯಾ ಖಲೀಫಾ
ಮಿಯಾ ಖಲೀಫಾ
ರಾಜೇಶ್ ದುಗ್ಗುಮನೆ
|

Updated on:Feb 07, 2021 | 5:27 PM

Share

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಕೃಷಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬೆಂಬಲವಾಗಿ ಲೆಬನಾನ್​ನ ಮಾಡೆಲ್ ಮತ್ತು ಮಾಜಿ ಪಾರ್ನ್​​ ತಾರೆ ಮಿಯಾ ಖಲೀಫಾ ನಿರಂತರವಾಗಿ ಟ್ವೀಟ್ ಮಾಡುತ್ತಿದ್ದಾರೆ. ರೈತರ ಬಗ್ಗೆ ಅವರು ಮಾಡಿದ್ದ ಟ್ವೀಟ್​ ಇಟ್ಟುಕೊಂಡು ಟ್ರೋಲ್​ ಮಾಡಲಾಗಿತ್ತು. ಮಿಯಾ ಖಲೀಫಾ ಆ ಟ್ರೋಲ್‌ಗಳಿಗೆ ಸೂಕ್ತ ಉತ್ತರ ನೀಡಿದ್ದರು. ಏತನ್ಮಧ್ಯೆ, ಮಿಯಾ ಅವರು ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಭಾರತೀಯ ಖಾದ್ಯವನ್ನು ಅವರು ಆನಂದಿಸುತ್ತಿದ್ದಾರೆ. ಅಲ್ಲದೆ, ಆಹಾರವನ್ನು ಕಳುಹಿಸಿದ್ದಕ್ಕಾಗಿ ಮಿಯಾ ರೈತರಿಗೆ ಧನ್ಯವಾದ ಅರ್ಪಿಸಿದ್ದಾರೆ.

ರೈತರ ಪರವಾಗಿ ಟ್ವೀಟ್​ ಮಾಡುತ್ತಿರುವುದಕ್ಕೆ ಪ್ರತಿಯಾಗಿ ಮಿಯಾ ಹಣ ಪಡೆಯುತ್ತಿದ್ದಾರೆ ಎನ್ನುವ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದಕ್ಕೆ ಪ್ರತಿಯಾಗಿ ಮಿಯಾ ಉತ್ತರಿಸಿದ್ದಾರೆ. ಕಷ್ಟಪಟ್ಟು ಕೆಲಸ ಮಾಡಿ ಏನನ್ನಾದರೂ ಪಡೆಯುವುದು ನಿಜಕ್ಕೂ ಖುಷಿ ನೀಡುತ್ತದೆ. ಸಾಮಾಜಿಕ ಜಾಲತಾಣದಲ್ಲಿ ರೈತರ ಪರವಾಗಿ ಟ್ವೀಟ್​ ಮಾಡಿದ್ದಕ್ಕೆ ಪ್ರತಿಯಾಗಿ ನನಗೆ ಈ ಊಟ ಸಿಕ್ಕಿದೆ. ಪ್ರತಿಯೊಂದಕ್ಕೂ ಮೌಲ್ಯವಿದೆ ಎಂದು ನಾನು ಭಾವಿಸಿದ್ದೇನೆ. ನನ್ನ ಕೆಲಸಕ್ಕಾಗಿ ನನಗೆ ಸಮೋಸಾ ಸಿಕ್ಕಿದೆ. ಈ ರುಚಿಕರವಾದ ಭೋಜನವನ್ನು ಕಳುಹಿಸಿದವರಿಗೆ ಧನ್ಯವಾದ ಎಂದಿದ್ದಾರೆ. ಈ ವೇಳೆ ರೈತರ ಬಗ್ಗೆಯೂ ಅವರು ಉಲ್ಲೇಖಿಸಿದ್ದಾರೆ.

ವಿಡಿಯೋವನ್ನು ಹಂಚಿಕೊಳ್ಳುವಾಗ ಮಿಯಾ ಶೀರ್ಷಿಕೆ ಒಂದನ್ನು ಬರೆದಿದ್ದಾರೆ. ‘ಸುಂದರ ಹಬ್ಬದೂಟಕ್ಕೆ ರೂಪಿ ಕೌರ್​​ ಅವರಿಗೆ ಧನ್ಯವಾದಗಳು. ಜಾಮೂನ್​ ನೀಡಿದ ಜಗ್ಮೀತ್ ಸಿಂಗ್​ಗೆ ಧನ್ಯವಾದ. ನಿತ್ಯ ಒಂದು ಗುಲಾಬ್​ ಜಾಮೂನ್​ ತಿಂದರೆ ಫ್ಯಾಸಿಸಂ ದೂರವಾಗುತ್ತದೆ’ ಎಂದು ಬರೆದುಕೊಂಡಿದ್ದಾರೆ.

ಮೂರು ತಿಂಗಳ ಕಾಲವಷ್ಟೇ  ಪೋರ್ನ್ ಇಂಡಸ್ಟ್ರಿಯಲ್ಲಿ ಕೆಲಸ ಮಾಡಿದ್ದರು ಮೀಯಾ.  ನೀಲಿ ಚಿತ್ರಗಳಲ್ಲಿ ನಟನೆ ನಿಲ್ಲಿಸಿದ್ದ ಮಿಯಾ ಇತ್ತೀಚೆಗೆ ಹೋರಾಟಗಳಲ್ಲಿ ಸಕ್ರಿಯವಾಗಿದ್ದಾರೆ. ಕೆಲವು ದಿನಗಳ ಹಿಂದೆ ಹಾಲಿವುಡ್ ನಟಿ ಈವನ್ ರಾಚೆಲ್​ವುಡ್ ತನ್ನ ಮೇಲೆ ರಾಕ್ ಸ್ಟಾರ್ ಮೆರ್ಲಿನ್ ಮಾನ್ಸನ್ ದೌರ್ಜನ್ಯವೆಸಗಿದ್ದಾರೆ ಎಂದು ಹೇಳಿ ಮುಂದೆ ಬಂದಾಗ, ಮಿಯಾ ಈವಾನ್ ಪರ ನಿಂತು ದೌರ್ಜನ್ಯದ ವಿರುದ್ಧ ದನಿಯೆತ್ತಿದ್ದರು.

Farmers Protest | ವ್ಯಂಗ್ಯವಾಡಿದ ಟ್ರೋಲಿಗರಿಗೆ ತಕ್ಕ ಉತ್ತರ ನೀಡಿದ ಮಿಯಾ ಖಲೀಫಾ

Published On - 5:25 pm, Sun, 7 February 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ