AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಪ್ರಸ್ತುತ ಪರಿಸ್ಥಿತಿ ನೋಡಿ ನಾನು ಎದೆಗುಂದಿದ್ದೇನೆ; ಮೈಕ್ರೋಸಾಫ್ಟ್​ ಸಿಇಒ ಸತ್ಯ ನಾಡೆಲ್ಲ

ಕೊವಿಡ್​ ಎರಡನೇ ಅಲೆ ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. ದೇಶಾದ್ಯಂತ ಆಸ್ಪತ್ರೆಗಳಲ್ಲಿ ಬೆಡ್​ಗಳ ಕೊರತೆ ಉಂಟಾಗುತ್ತಿದೆ. ಜೀವ ಉಳಿಸಲು ಮುಖ್ಯವಾಗಿ ಬೇಕಾದ ಆಮ್ಲಜನಕದ ಕೊರತೆ ಉಂಟಾಗಿದೆ.

ಭಾರತದ ಪ್ರಸ್ತುತ ಪರಿಸ್ಥಿತಿ ನೋಡಿ ನಾನು ಎದೆಗುಂದಿದ್ದೇನೆ; ಮೈಕ್ರೋಸಾಫ್ಟ್​ ಸಿಇಒ ಸತ್ಯ ನಾಡೆಲ್ಲ
ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ (ಸಂಗ್ರಹ ಚಿತ್ರ)
shruti hegde
| Updated By: Skanda|

Updated on: Apr 26, 2021 | 11:26 AM

Share

ದೆಹಲಿ: ಭಾರತದಲ್ಲಿ ದಿನೇ ದಿನೇ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ದೇಶದ ಪರಿಸ್ಥಿತಿ ಗಂಭೀರವಾಗಿದೆ. ಈ ಕುರಿತಂತೆ ಮೈಕ್ರೊಸಾಫ್ಟ್​ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸತ್ಯ ನಾಡೆಲ್ಲಾ ಸೋಮವಾರ ವಿಷಾದ ವ್ಯಕ್ತಪಡಿಸಿದ್ದಾರೆ. ಕೊವಿಡ್​ ಸಾಂಕ್ರಾಮಿಕ ರೋಗದ ಎರಡನೇ ಅಲೆ ಆರ್ಭಟದಿಂದ ನಾನು ಎದೆಗುಂದಿದ್ದೇನೆ. ಕೊವಿಡ್​ ನಿಯಂತ್ರಣ ಕಾರ್ಯಗಳಿಗೆ ಸಹಾಯ ಮಾಡಲು ಮತ್ತು ಆಮ್ಲಜನಕ ಸಾಧನಗಳ ಖರೀದಿ ಮಾಡಲು ಬೆಂಬಲ ನೀಡುತ್ತೇನೆ ಎಂದು ಹೇಳಿದ್ದಾರೆ.

‘ಭಾರತದ ಪ್ರಸ್ತುತ ಪರಿಸ್ಥಿತಿಯನ್ನು ನೋಡಿ ನಾನು ಎದೆಗುಂದಿದ್ದೇನೆ. ಅಮೆರಿಕಾ ಸರ್ಕಾರ ಸಹಾಯ ಮಾಡುವುದಕ್ಕೆ ಮುಂದಾಗಿರುವುದಕ್ಕೆ ನಾನು ಅವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಕೊವಿಡ್ ನಿಯಂತ್ರಣಕ್ಕೆ ನೆರವಾಗಲು ಮೈಕ್ರೋಸಾಫ್ಟ್​ ತಂತ್ರಜ್ಞಾನ ಬಳಸುವುದನ್ನು ಮುಂದುವರೆಸುತ್ತದೆ ಮತ್ತು ಆಮ್ಲಜನಕ ಸಾಧನಗಳ ಖರೀದಿಗೆ ಬೆಂಬಲಿಸುತ್ತದೆ’ ಎಂದು ಸತ್ಯ ನಾಡೆಲ್ಲಾ ಅವರು ತನ್ನ ಟ್ವಿಟರ್​ ಖಾತೆಯಲ್ಲಿ ಪೋಸ್ಟ್​ ಹಂಚಿಕೊಂಡಿದ್ದಾರೆ.

ಕೊವಿಡ್​ ಎರಡನೇ ಅಲೆ ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. ದೇಶಾದ್ಯಂತ ಆಸ್ಪತ್ರೆಗಳಲ್ಲಿ ಬೆಡ್​ಗಳ ಕೊರತೆ ಉಂಟಾಗುತ್ತಿದೆ. ಜೀವ ಉಳಿಸಲು ಮುಖ್ಯವಾಗಿ ಬೇಕಾದ ಆಮ್ಲಜನಕದ ಕೊರತೆ ಉಂಟಾಗಿದೆ. ಕಳೆದ ಒಂದು ವಾರದಲ್ಲಿ ಭಾರತದಲ್ಲಿ 22.5 ಲಕ್ಷ ಹೊಸ ಪ್ರಕರಣಗಳು ಸೇರ್ಪಡೆಯಾಗಿವೆ. ಸಾವಿನ ಪ್ರಮಾಣ ಶೇ.89ರಷ್ಟು ಹೆಚ್ಚಾಗಿದೆ.

ದೇಶದ ವಿವಿಧ ಭಾಗಗಳಲ್ಲಿನ ಅಮ್ಲಜನಕದ ಕೊರತೆಯಿಂದಾಗಿ ಕೈಗಾರಿಕಾ ಉತ್ಪಾದನೆಗಳಿಗೆ ಆಮ್ಲಜನಕವನ್ನು ಆಮದು ಮಾಡಿಕೊಳ್ಳಲು ಮತ್ತು ಆಮ್ಲಜನಕ ವ್ಯವಸ್ಥೆ ಬೇಕಾದ ಸ್ಥಳಗಳಿಗೆ ವರ್ಗಾಯಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಯುನೈಟೆಡ್​ ಸ್ಟೇಟ್​ ಭಾನುವಾರ ನ್ಯೂಯಾರ್ಕ್​ನಿಂದ ಭಾರತಕ್ಕೆ 300 ಆಮ್ಲಜನಕ ಸಾಂದ್ರಕಗಳನ್ನು ಕಳುಹಿಸಿಕೊಟ್ಟಿದೆ.

ಇದನ್ನೂ ಓದಿ: ವಾನರ ಸೇನೆಗೆ ಕೊರೊನಾ ಕಂಟಕ; ನಗರ ಪ್ರದೇಶಕ್ಕೆ ಲಗ್ಗೆ ಇಡುವ ಮಂಗಗಳ ಬಗ್ಗೆ ಗಮನಹರಿಸಲು ಚಿತ್ರದುರ್ಗ ಜನರ ಆಗ್ರಹ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?