Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಪ್ರಸ್ತುತ ಪರಿಸ್ಥಿತಿ ನೋಡಿ ನಾನು ಎದೆಗುಂದಿದ್ದೇನೆ; ಮೈಕ್ರೋಸಾಫ್ಟ್​ ಸಿಇಒ ಸತ್ಯ ನಾಡೆಲ್ಲ

ಕೊವಿಡ್​ ಎರಡನೇ ಅಲೆ ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. ದೇಶಾದ್ಯಂತ ಆಸ್ಪತ್ರೆಗಳಲ್ಲಿ ಬೆಡ್​ಗಳ ಕೊರತೆ ಉಂಟಾಗುತ್ತಿದೆ. ಜೀವ ಉಳಿಸಲು ಮುಖ್ಯವಾಗಿ ಬೇಕಾದ ಆಮ್ಲಜನಕದ ಕೊರತೆ ಉಂಟಾಗಿದೆ.

ಭಾರತದ ಪ್ರಸ್ತುತ ಪರಿಸ್ಥಿತಿ ನೋಡಿ ನಾನು ಎದೆಗುಂದಿದ್ದೇನೆ; ಮೈಕ್ರೋಸಾಫ್ಟ್​ ಸಿಇಒ ಸತ್ಯ ನಾಡೆಲ್ಲ
ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ (ಸಂಗ್ರಹ ಚಿತ್ರ)
Follow us
shruti hegde
| Updated By: Skanda

Updated on: Apr 26, 2021 | 11:26 AM

ದೆಹಲಿ: ಭಾರತದಲ್ಲಿ ದಿನೇ ದಿನೇ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ದೇಶದ ಪರಿಸ್ಥಿತಿ ಗಂಭೀರವಾಗಿದೆ. ಈ ಕುರಿತಂತೆ ಮೈಕ್ರೊಸಾಫ್ಟ್​ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸತ್ಯ ನಾಡೆಲ್ಲಾ ಸೋಮವಾರ ವಿಷಾದ ವ್ಯಕ್ತಪಡಿಸಿದ್ದಾರೆ. ಕೊವಿಡ್​ ಸಾಂಕ್ರಾಮಿಕ ರೋಗದ ಎರಡನೇ ಅಲೆ ಆರ್ಭಟದಿಂದ ನಾನು ಎದೆಗುಂದಿದ್ದೇನೆ. ಕೊವಿಡ್​ ನಿಯಂತ್ರಣ ಕಾರ್ಯಗಳಿಗೆ ಸಹಾಯ ಮಾಡಲು ಮತ್ತು ಆಮ್ಲಜನಕ ಸಾಧನಗಳ ಖರೀದಿ ಮಾಡಲು ಬೆಂಬಲ ನೀಡುತ್ತೇನೆ ಎಂದು ಹೇಳಿದ್ದಾರೆ.

‘ಭಾರತದ ಪ್ರಸ್ತುತ ಪರಿಸ್ಥಿತಿಯನ್ನು ನೋಡಿ ನಾನು ಎದೆಗುಂದಿದ್ದೇನೆ. ಅಮೆರಿಕಾ ಸರ್ಕಾರ ಸಹಾಯ ಮಾಡುವುದಕ್ಕೆ ಮುಂದಾಗಿರುವುದಕ್ಕೆ ನಾನು ಅವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಕೊವಿಡ್ ನಿಯಂತ್ರಣಕ್ಕೆ ನೆರವಾಗಲು ಮೈಕ್ರೋಸಾಫ್ಟ್​ ತಂತ್ರಜ್ಞಾನ ಬಳಸುವುದನ್ನು ಮುಂದುವರೆಸುತ್ತದೆ ಮತ್ತು ಆಮ್ಲಜನಕ ಸಾಧನಗಳ ಖರೀದಿಗೆ ಬೆಂಬಲಿಸುತ್ತದೆ’ ಎಂದು ಸತ್ಯ ನಾಡೆಲ್ಲಾ ಅವರು ತನ್ನ ಟ್ವಿಟರ್​ ಖಾತೆಯಲ್ಲಿ ಪೋಸ್ಟ್​ ಹಂಚಿಕೊಂಡಿದ್ದಾರೆ.

ಕೊವಿಡ್​ ಎರಡನೇ ಅಲೆ ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. ದೇಶಾದ್ಯಂತ ಆಸ್ಪತ್ರೆಗಳಲ್ಲಿ ಬೆಡ್​ಗಳ ಕೊರತೆ ಉಂಟಾಗುತ್ತಿದೆ. ಜೀವ ಉಳಿಸಲು ಮುಖ್ಯವಾಗಿ ಬೇಕಾದ ಆಮ್ಲಜನಕದ ಕೊರತೆ ಉಂಟಾಗಿದೆ. ಕಳೆದ ಒಂದು ವಾರದಲ್ಲಿ ಭಾರತದಲ್ಲಿ 22.5 ಲಕ್ಷ ಹೊಸ ಪ್ರಕರಣಗಳು ಸೇರ್ಪಡೆಯಾಗಿವೆ. ಸಾವಿನ ಪ್ರಮಾಣ ಶೇ.89ರಷ್ಟು ಹೆಚ್ಚಾಗಿದೆ.

ದೇಶದ ವಿವಿಧ ಭಾಗಗಳಲ್ಲಿನ ಅಮ್ಲಜನಕದ ಕೊರತೆಯಿಂದಾಗಿ ಕೈಗಾರಿಕಾ ಉತ್ಪಾದನೆಗಳಿಗೆ ಆಮ್ಲಜನಕವನ್ನು ಆಮದು ಮಾಡಿಕೊಳ್ಳಲು ಮತ್ತು ಆಮ್ಲಜನಕ ವ್ಯವಸ್ಥೆ ಬೇಕಾದ ಸ್ಥಳಗಳಿಗೆ ವರ್ಗಾಯಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಯುನೈಟೆಡ್​ ಸ್ಟೇಟ್​ ಭಾನುವಾರ ನ್ಯೂಯಾರ್ಕ್​ನಿಂದ ಭಾರತಕ್ಕೆ 300 ಆಮ್ಲಜನಕ ಸಾಂದ್ರಕಗಳನ್ನು ಕಳುಹಿಸಿಕೊಟ್ಟಿದೆ.

ಇದನ್ನೂ ಓದಿ: ವಾನರ ಸೇನೆಗೆ ಕೊರೊನಾ ಕಂಟಕ; ನಗರ ಪ್ರದೇಶಕ್ಕೆ ಲಗ್ಗೆ ಇಡುವ ಮಂಗಗಳ ಬಗ್ಗೆ ಗಮನಹರಿಸಲು ಚಿತ್ರದುರ್ಗ ಜನರ ಆಗ್ರಹ

ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು