ಚೆನ್ನೈ ವಿಮಾನ ನಿಲ್ದಾಣದಲ್ಲಿ ಚಲಿಸುತ್ತಿರುವ ವಿಮಾನದ ಎಕ್ಸಿಟ್ ಡೋರ್ ತೆರೆದು ಹಾರಿದ ಪ್ರಯಾಣಿಕ

ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಮುಂಜಾನೆ ನಡೆದ ಅನಿರೀಕ್ಷಿತ ಘಟನೆಯು ಪ್ರಯಾಣಿಕರನ್ನು ಬೆಚ್ಚಿಬೀಳಿಸಿದೆ. ಶಾರ್ಜಾದಿಂದ ಬಂದ ಏರ್ ಅರೇಬಿಯಾ ವಿಮಾನವು ಇಳಿದ ನಂತರ ವಿಮಾನದೊಳಗಿನ ವ್ಯಕ್ತಿಯೊಬ್ಬರು ತೋರಿದ ಹಠಾತ್ ವರ್ತನೆಯು ಭದ್ರತಾ ಆತಂಕಕ್ಕೆ ಕಾರಣವಾಯಿತು.ಶಾರ್ಜಾ-ಚೆನ್ನೈ ಏರ್ ಅರೇಬಿಯಾ ವಿಮಾನವು ರನ್‌ವೇಯಲ್ಲಿ ಇಳಿದು ಟ್ಯಾಕ್ಸಿವೇಯಲ್ಲಿ ನಿಧಾನವಾಗಿ ಚಲಿಸುತ್ತಿತ್ತು. ವಿಮಾನವು ಪಾರ್ಕಿಂಗ್ ಬೇ ತಲುಪುವ ಮೊದಲೇ, ಪುರುಷ ಪ್ರಯಾಣಿಕನೊಬ್ಬ ಹಠಾತ್ತಾಗಿ ತುರ್ತು ನಿರ್ಗಮನ ಬಾಗಿಲನ್ನು ತೆರೆದು ಹೊರಗೆ ಜಿಗಿದಿದ್ದಾನೆ. ವಿಮಾನ ನಿಂತಿರದ ಸಮಯದಲ್ಲಿ ಸಂಭವಿಸಿದ ಈ ಘಟನೆಯು ಸಹ-ಪ್ರಯಾಣಿಕರಲ್ಲಿ ಭೀತಿಯನ್ನು ಉಂಟುಮಾಡಿತು.

ಚೆನ್ನೈ ವಿಮಾನ ನಿಲ್ದಾಣದಲ್ಲಿ ಚಲಿಸುತ್ತಿರುವ ವಿಮಾನದ ಎಕ್ಸಿಟ್ ಡೋರ್ ತೆರೆದು ಹಾರಿದ ಪ್ರಯಾಣಿಕ
ಏರ್ ಅರೇಬಿಯಾ ವಿಮಾನ
Image Credit source: Times Of India

Updated on: May 03, 2026 | 2:07 PM

ಚೆನ್ನೈ, ಮೇ 03: ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(Airport)ದಲ್ಲಿ ಇಂದು ಮುಂಜಾನೆ ನಡೆದ ಅನಿರೀಕ್ಷಿತ ಘಟನೆಯು ಪ್ರಯಾಣಿಕರನ್ನು ಬೆಚ್ಚಿಬೀಳಿಸಿದೆ. ಶಾರ್ಜಾದಿಂದ ಬಂದ ಏರ್ ಅರೇಬಿಯಾ ವಿಮಾನವು ಇಳಿದ ನಂತರ ವಿಮಾನದೊಳಗಿನ ವ್ಯಕ್ತಿಯೊಬ್ಬರು ತೋರಿದ ಹಠಾತ್ ವರ್ತನೆಯು ಭದ್ರತಾ ಆತಂಕಕ್ಕೆ ಕಾರಣವಾಯಿತು.ಶಾರ್ಜಾ-ಚೆನ್ನೈ ಏರ್ ಅರೇಬಿಯಾ ವಿಮಾನವು ರನ್‌ವೇಯಲ್ಲಿ ಇಳಿದು ಟ್ಯಾಕ್ಸಿವೇಯಲ್ಲಿ ನಿಧಾನವಾಗಿ ಚಲಿಸುತ್ತಿತ್ತು. ವಿಮಾನವು ಪಾರ್ಕಿಂಗ್ ಬೇ ತಲುಪುವ ಮೊದಲೇ, ಪುರುಷ ಪ್ರಯಾಣಿಕನೊಬ್ಬ ಹಠಾತ್ತಾಗಿ ತುರ್ತು ನಿರ್ಗಮನ ಬಾಗಿಲನ್ನು ತೆರೆದು ಹೊರಗೆ ಜಿಗಿದಿದ್ದಾನೆ. ವಿಮಾನ ನಿಂತಿರದ ಸಮಯದಲ್ಲಿ ಸಂಭವಿಸಿದ ಈ ಘಟನೆಯು ಸಹ-ಪ್ರಯಾಣಿಕರಲ್ಲಿ ಭೀತಿಯನ್ನು ಉಂಟುಮಾಡಿತು.

ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಪ್ರಯಾಣಿಕನು ಪ್ರಯಾಣದ ಅವಧಿಯಲ್ಲಿ ಅಸ್ವಸ್ಥನಾಗಿದ್ದ ಎನ್ನಲಾಗಿದೆ.ಪ್ರಯಾಣದ ಸಮಯದಲ್ಲಿ ಆತ ತನಗೆ ವಾಂತಿ ಬರುತ್ತಿದೆ ಎಂದು ದೂರಿದ್ದ.ವಿಮಾನದ ಒಳಗೆ ಎರಡು ಬಾರಿ ವಾಂತಿ ಮಾಡಿಕೊಂಡಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾಂತಿಯ ಅನುಭವ ಮತ್ತು ಮಾನಸಿಕ ಒತ್ತಡದಿಂದಾಗಿ ಆತ ಈ ರೀತಿ ವರ್ತಿಸಿರಬಹುದು ಎಂದು ಶಂಕಿಸಲಾಗಿದೆ.

ಘಟನೆ ನಡೆದ ಕೂಡಲೇ ವಿಮಾನದ ಪೈಲಟ್ ನೆಲದ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದರು. ಕೂಡಲೇ ಕಾರ್ಯಪ್ರವೃತ್ತರಾದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಸಿಬ್ಬಂದಿ ವ್ಯಕ್ತಿಯನ್ನು ವಶಕ್ಕೆ ಪಡೆದರು. ಹೆಚ್ಚಿನ ತನಿಖೆಗಾಗಿ ಆತನನ್ನು ಈಗ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ವರದಿಗಳ ಪ್ರಕಾರ, ಈ ವ್ಯಕ್ತಿ ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ನಿವಾಸಿ ಎಂದು ತಿಳಿದುಬಂದಿದೆ.

ಮತ್ತಷ್ಟು ಓದಿ: ಇನ್ನೇನು ಟೇಕ್ ಆಫ್ ಆಗುವಷ್ಟರಲ್ಲೇ ಪ್ರಯಾಣಿಕ ಅಸ್ವಸ್ಥ: ಮಾನವೀಯತೆಗೆ ಸಾಕ್ಷಿಯಾದ ವಿಮಾನ

ಈ ಘಟನೆಯಿಂದಾಗಿ ಸುರಕ್ಷತೆಯ ದೃಷ್ಟಿಯಿಂದ ಮುಖ್ಯ ರನ್‌ವೇಯನ್ನು ಬೆಳಗ್ಗೆ 03.23 ರಿಂದ 04.23 ರವರೆಗೆ ಮುಚ್ಚಲಾಗಿತ್ತು. ಈ ಒಂದು ಗಂಟೆಯ ಅವಧಿಯಲ್ಲಿ ವಿಮಾನಗಳ ಸಂಚಾರವನ್ನು ದ್ವಿತೀಯ ರನ್‌ವೇಗೆ ತಿರುಗಿಸಲಾಯಿತು.

ಅದೃಷ್ಟವಶಾತ್, ಈ ಘಟನೆಯಲ್ಲಿ ವಿಮಾನಕ್ಕೆ ಯಾವುದೇ ಹಾನಿಯಾಗಿಲ್ಲ ಅಥವಾ ಸಿಬ್ಬಂದಿ ಮತ್ತು ಪ್ರಯಾಣಿಕರಿಗೆ ಗಾಯಗಳಾಗಿಲ್ಲ ಎಂದು ಹಿರಿಯ ಅಧಿಕಾರಿಗಳು ದೃಢಪಡಿಸಿದ್ದಾರೆ. ವಿಮಾನಯಾನ ಸುರಕ್ಷತಾ ನಿಯಮಗಳ ಉಲ್ಲಂಘನೆಯ ಕುರಿತು ಅಧಿಕಾರಿಗಳು ಸಮಗ್ರ ತನಿಖೆಯನ್ನು ಆರಂಭಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us