AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಯೊಂದಿಗಿನ ಮೊದಲ ಭೇಟಿ ನೆನಪಿಸಿಕೊಂಡ ಮಿಲಿಂದ್ ದಿಯೋರಾ

ನರೇಂದ್ರ ಮೋದಿ ಜಿ ಅವರು ನನ್ನ ಮುಂದೆ ಕುಳಿತಿದ್ದರು. ನಾನು ಅವರನ್ನು ಸ್ವಾಗತಿಸಿದೆ. ಅವರು ಹಿಂದೆ ತಿರುಗಿ, 'ಮಿಲಿಂದ್ ಭಾಯ್, ಹೇಗಿದ್ದೀರಿ?' ಎಂದು ಕೇಳಿದರು. ನಾನು ರಾಜಕೀಯಕ್ಕೆ ತುಂಬಾ ಹೊಸಬ. ಆಗ ಕೇವಲ 27 ವರ್ಷ ವಯಸ್ಸಿನವನಾಗಿದ್ದರಿಂದ ನನಗೆ ಅವರ ನಡೆ ಕಂಡು ಆಶ್ಚರ್ಯವಾಯಿತು ಎಂದು ಮಿಲಿಂದ್ ದಿಯೋರಾ ಮೋದಿ ಜತೆಗಿನ ಮೊದಲ ಭೇಟಿಯನ್ನು ನೆನಪಿಸಿಕೊಂಡಿದ್ದಾರೆ.

ಪ್ರಧಾನಿ ಮೋದಿಯೊಂದಿಗಿನ ಮೊದಲ ಭೇಟಿ ನೆನಪಿಸಿಕೊಂಡ ಮಿಲಿಂದ್ ದಿಯೋರಾ
ಮಿಲಿಂದ್ ದಿಯೋರಾ- ಮೋದಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 13, 2024 | 7:01 PM

Share

ಮುಂಬೈ ಮೇ 13: ಗುಜರಾತ್ ಸಿಎಂ ಆಗಿದ್ದ ಅವಧಿಯಲ್ಲಿ ನರೇಂದ್ರ ಮೋದಿ (Narendra Modi) ಅವರೊಂದಿಗಿನ ಮೊದಲ ಭೇಟಿಯನ್ನು ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ (Shiv Sena) ನಾಯಕ ಮಿಲಿಂದ್ ದಿಯೋರಾ (Milind Deora) ಅವರು ಸೋಮವಾರ ನೆನಪಿಸಿಕೊಂಡಿದ್ದಾರೆ. ಮೋದಿಯವರ ವೈಯಕ್ತಿಕ ಸಂಪರ್ಕ ಮತ್ತು ಜ್ಞಾನದಿಂದ ನನಗೆ ಅಚ್ಚರಿಯಾಯಿತು ಎಂದು ದಿಯೋರಾ ಹೇಳಿದ್ದಾರೆ. ದಿವಂಗತ ಪ್ರಮೋದ್ ಮಹಾಜನ್ ಅವರ ಅಂತ್ಯಕ್ರಿಯೆ ವೇಳೆ ಮೊದಲ ಭೇಟಿ ನಡೆದಿತ್ತು ಎಂದ ದಿಯೋರಾ, ಅಲ್ಲಿ ವೇದಿಕೆಯಲ್ಲಿ ಕುಳಿತಿದ್ದ ಪ್ರಧಾನಿ ಮೋದಿ ಅವರನ್ನು ನಾನು ಬರ ಮಾಡಿಕೊಂಡಿದ್ದೆ. ಆಗ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಮೋದಿಯವರೊಂದಿಗಿನ ಮೊದಲ ಭೇಟಿಯಾಗಿತ್ತು ಅದು.

ನರೇಂದ್ರ ಮೋದಿ ಜಿ ಅವರು ನನ್ನ ಮುಂದೆ ಕುಳಿತಿದ್ದರು. ನಾನು ಅವರನ್ನು ಸ್ವಾಗತಿಸಿದೆ. ಅವರು ಹಿಂದೆ ತಿರುಗಿ, ‘ಮಿಲಿಂದ್ ಭಾಯ್, ಹೇಗಿದ್ದೀರಿ?’ ಎಂದು ಕೇಳಿದರು. ನಾನು ರಾಜಕೀಯಕ್ಕೆ ತುಂಬಾ ಹೊಸಬ. ಆಗ ಕೇವಲ 27 ವರ್ಷ ವಯಸ್ಸಿನವನಾಗಿದ್ದರಿಂದ ನನಗೆ ಅವರ ನಡೆ ಕಂಡು ಆಶ್ಚರ್ಯವಾಯಿತು. ಕೆಲವೇ ಕೆಲವರು ನನ್ನನ್ನು ಗುರುತಿಸಿದರು. ಅವರು (ಮೋದಿ) ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಾರೆ. ಅವರಿಗೆ ಎಲ್ಲರೂ ಗೊತ್ತು ಎಂದು ಎಂದು ಪಿಟಿಐ ಹಂಚಿಕೊಂಡ ವಿಡಿಯೊದಲ್ಲಿ ದಿಯೋರಾ ಹೇಳಿದ್ದಾರೆ.

ಮೋದಿಯವರ ಭೇಟಿ ನೆನಪಿಸಿಕೊಂಡ ದಿಯೋರಾ

ಪಿಎಂ ಮೋದಿ ನಿರಂತರವಾಗಿ ಪಕ್ಷ ರಾಜಕೀಯದಿಂದ ಹೊರಗೆ ಯೋಚಿಸುತ್ತಿದ್ದು, ಪಕ್ಷಗಳ ಸಂಬಂಧವನ್ನು ಲೆಕ್ಕಿಸದೆ ಜನರಿಗೆ ಗೌರವವನ್ನು ತೋರಿಸುತ್ತಾರೆ ಎಂದು ದಿಯೋರಾ ಹೇಳಿದ್ದಾರೆ.

ಹ್ಯೂಸ್ಟನ್‌ನಲ್ಲಿ ನಡೆದ ‘ಹೌಡಿ ಮೋದಿ’ ಕಾರ್ಯಕ್ರಮದಲ್ಲಿ ಪಿಎಂ ಮೋದಿಯವರ ಪಕ್ಷಾತೀತ ವಿಧಾನದ ಬಗ್ಗೆ ದಿಯೋರಾ ಪ್ರಸ್ತಾಪಿಸಿದ್ದಾರೆ. ಭಾರತ ಮತ್ತು ಅಮೆರಿಕ ನಡುವಿನ ಸಂಬಂಧವನ್ನು ಬಲಪಡಿಸುವಲ್ಲಿ ದಿವಂಗತ ಮುರಳಿ ದಿಯೋರಾ (ಮಿಲಿಂದ್ ದಿಯೋರಾ ಅವರ ತಂದೆ) ಕೊಡುಗೆಗಳನ್ನು ಮೋದಿ ಅವರು ಸ್ಮರಿಸಿದ್ದಾರೆ.

ಇದನ್ನೂ ಓದಿ: Rahul Gandhi: ಮದುವೆ ಯಾವಾಗ?; ರಾಯ್​ಬರೇಲಿ ಜನರಿಗೆ ನಗುತ್ತಲೇ ಉತ್ತರ ಕೊಟ್ಟ ರಾಹುಲ್ ಗಾಂಧಿ

‘ನನ್ನ ಸ್ನೇಹಿತ ಮುರಳಿ ದಿಯೋರಾ ಇಂದು ನಿಜವಾಗಿಯೂ ಸಂತೋಷವಾಗಿರುತ್ತಾರೆ’ ಎಂದು ಪ್ರಧಾನಿ ಮೋದಿಯವರ ಟ್ವೀಟ್ ದಿಯೋರಾ ಕುಟುಂಬ ಮತ್ತು ಪಕ್ಷದ ಕಾರ್ಯಕರ್ತರ ಹೃದಯದಲ್ಲಿ ವಿಶೇಷ ಸ್ಥಾನವನ್ನು ಮೂಡಿಸಿದೆ ಎಂದು ಅವರು ಹೇಳಿದರು.

ಮಾಜಿ ಸಂಸದ ಮಿಲಿಂದ್ ದಿಯೋರಾ ಅವರು ಮುಂಬೈ ದಕ್ಷಿಣ ಲೋಕಸಭಾ ಕ್ಷೇತ್ರವನ್ನು ಎರಡು ಬಾರಿ ಪ್ರತಿನಿಧಿಸಿದ್ದರು. 2004 ರಲ್ಲಿ ಮತ್ತು ನಂತರ 2009 ರಲ್ಲಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಅವರು ಇತ್ತೀಚೆಗೆ ಕಾಂಗ್ರೆಸ್ ಪಕ್ಷವನ್ನು ತೊರೆದ ನಂತರ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಸೇರಿದರು. ದಿಯೋರಾ ಅವರನ್ನು ಮಹಾರಾಷ್ಟ್ರದಿಂದ ರಾಜ್ಯಸಭಾ ಸಂಸದರಾಗಿ ನೇಮಕ ಮಾಡಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!