Sign In

By signing in or creating an account, you agree with Associated Broadcasting Company's Terms & Conditions and Privacy Policy.

Chopper Crash in Coonoor: ಹೆಲಿಕಾಪ್ಟರ್​ ಪತನವಾದ ಸ್ಥಳದಲ್ಲಿ ಐವರ ಮೃತದೇಹ ಪತ್ತೆ; ಬೆಳಗ್ಗೆ11.45ಕ್ಕೆ ಸುಲೂರಿಂದ ಹೊರಟಿತ್ತು ಚಾಪರ್​

ದುರಂತದಲ್ಲಿ ಬಿಪಿನ್​ ರಾವತ್ ಪತ್ನಿ ಮಧುಲಿಕಾ ರಾವತ್ ಕೂಡ ಮೃತಪಟ್ಟಿದ್ದಾರೆ. ಮೂವರು ಗಂಭೀರ ಪರಿಸ್ಥಿತಿಯಲ್ಲಿದ್ದಾರೆ ಎಂದೇ ಹೇಳಲಾಗುತ್ತಿದ್ದರೂ ಅವರು ಯಾರೆಂಬ ನಿಖರ ಮಾಹಿತಿ ಇಲ್ಲ.

Chopper Crash in Coonoor: ಹೆಲಿಕಾಪ್ಟರ್​ ಪತನವಾದ ಸ್ಥಳದಲ್ಲಿ ಐವರ ಮೃತದೇಹ ಪತ್ತೆ; ಬೆಳಗ್ಗೆ11.45ಕ್ಕೆ ಸುಲೂರಿಂದ ಹೊರಟಿತ್ತು ಚಾಪರ್​
ಪತನಗೊಂಡ ಹೆಲಿಕಾಪ್ಟರ್​
Follow us
TV9 Web
| Updated By: Lakshmi Hegde

Updated on: Dec 08, 2021 | 4:09 PM

ತಮಿಳುನಾಡಿನ ಕುನೂರ್​​ನಲ್ಲಿ ನಡೆದ ಸೇನಾ ಹೆಲಿಕಾಪ್ಟರ್​ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ನೀಲಗಿರಿ ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್​ ಪತನಗೊಂಡ ಪರಿಣಾಮ ಅಲ್ಲಿದ್ದ ಸ್ಥಳೀಯ ನಿವಾಸಿಗಳೂ ಕೂಡ ಗಂಭೀರ ಗಾಯಗೊಂಡಿದ್ದಾರೆ. ಇಂದು ಹೆಲಿಕಾಪ್ಟರ್​ ಅಪಘಾತಕ್ಕೀಡಾಗಿದ್ದು ಎಸ್ಟೇಟ್​ ಇರುವ ಪ್ರದೇಶದಲ್ಲಿ. ಹಾಗಾಗಿ ಅಲ್ಲಿ ಕೆಲವು ಮನೆಗಳೂ ಇದ್ದವು. ಸದ್ಯ ಮೃತದೇಹಗಳ ಪತ್ತೆ ಕಾರ್ಯ ನಡೆಯುತ್ತಿದೆ. ಇನ್ನು ಹೆಲಿಕಾಪ್ಟರ್ ಪತನವಾಗುತ್ತಿದ್ದಂತೆ ಅತ್ಯಂತ ದೊಡ್ಡ ಶಬ್ದ ಕೇಳಿತು ಎಂದು ಸ್ಥಳೀಯರು ಹೇಳಿದ್ದಾರೆ. ಹೊತ್ತಿ ಉರಿದ ಬೆಂಕಿಯನ್ನು ಆರಿಸಲು ಕೂಡ ಅವರು ಪ್ರಯತ್ನಪಟ್ಟಿದ್ದಾರೆ.

ಭಾರತದ ಸೇನಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್​) ಬಿಪಿನ್​ ರಾವತ್​ ತಮ್ಮ ಪತ್ನಿ ಹಾಗೂ ಇತರ ಸೇನಾ ಅಧಿಕಾರಿಗಳೊಟ್ಟಿಗೆ ದೆಹಲಿಯಿಂದ ತಮಿಳುನಾಡಿನ ಸುಲೂರ್​​ನ ವೆಲ್ಲಿಂಗ್ಟನ್​​ಗೆ ತೆರಳುತ್ತಿದ್ದ ಹೆಲಿಕಾಪ್ಟರ್​ ಇದಾಗಿತ್ತು. ಸದ್ಯ ಬಂದಿರುವ ಮಾಹಿತಿಯ ಪ್ರಕಾರ, ದುರಂತದಲ್ಲಿ ಬಿಪಿನ್​ ರಾವತ್ ಪತ್ನಿ ಮಧುಲಿಕಾ ರಾವತ್ ಕೂಡ ಮೃತಪಟ್ಟಿದ್ದಾರೆ. ಮೂವರು ಗಂಭೀರ ಪರಿಸ್ಥಿತಿಯಲ್ಲಿದ್ದಾರೆ ಎಂದೇ ಹೇಳಲಾಗುತ್ತಿದ್ದರೂ ಅವರು ಯಾರೆಂಬ ನಿಖರ ಮಾಹಿತಿ ಇಲ್ಲ. ಬಿಪಿನ್ ರಾವತ್ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಇನ್ನು ತಮಿಳುನಾಡಿನ ಅರಣ್ಯ ಸಚಿವ ರಾಮಚಂದ್ರನ್​ ಸ್ಥಳಕ್ಕೆ ಭೇಟಿ ನೀಡಿ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಸೇನಾ ಹೆಲಿಕಾಪ್ಟರ್​​ನಲ್ಲಿ 16 ಜನರಿದ್ದರು ಎಂದು ನನಗೆ ಮಾಹಿತಿ ಬಂದಿದೆ. ಈ ಹೆಲಿಕಾಪ್ಟರ್​ ಮನೆಗಳಿದ್ದ ಜಾಗದಲ್ಲೇ ಪತನಗೊಂಡಿದ್ದರಿಂದ ಇಲ್ಲಿನ ಜನರೂ ಅಪಾಯಕ್ಕೀಡಾಗಿದ್ದಾರೆ ಎಂದಿದ್ದಾರೆ. ಹಾಗೇ, ಗಾಯಗೊಂಡವರಿಗೆ ವೈದ್ಯಕೀಯ ಸೇವೆಯನ್ನು ಸರಿಯಾಗಿ ನೀಡುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್​ ಸ್ಥಳೀಯ ಆಡಳಿತಕ್ಕೆ ಸೂಚಿಸಿದ್ದಾರೆ. ಐಎಎಫ್​ ಮುಖ್ಯಸ್ಥ ವಿವೇಕ್​ ಚೌಧರಿ ಕೂಡ ಸ್ಥಳಕ್ಕೆ ತೆರಳುತ್ತಿದ್ದಾರೆ.

ಬೆಳಗ್ಗೆ 9ಕ್ಕೇ ದೆಹಲಿ ಬಿಟ್ಟಿದ್ದರು.. ತಮಿಳುನಾಡಿನ ಕೊಯಮತ್ತೂರಿನ ವೆಲ್ಲಿಂಗ್ಟನ್​​ನಲ್ಲಿ ಇಂದು ಮಧ್ಯಾಹ್ನ 2.45ಕ್ಕೆ ಸಿಡಿಎಸ್​ ಬಿಪಿನ್​ ರಾವತ್​ ಅವರ ಉಪನ್ಯಾಸ ಇತ್ತು. ಅದರೊಂದಿಗೆ ಇನ್ನೂ ಕೆಲವು ಸೇನಾ ಕೆಲಸ ಇದ್ದುದರಿಂದ ಪತ್ನಿ ಹಾಗೂ ಇತರ ಸೇನಾಧಿಕಾರಿಗಳೊಂದಿಗೆ ಬೆಳಗ್ಗೆ 9 ಗಂಟೆಗೆ ವಿಶೇಷ ವಿಮಾನದಲ್ಲಿ ತೆರಳಿದ್ದರು. ಈ ವಿಮಾನ 11.35ಕ್ಕೆ ಸುಲೂರಿನಲ್ಲಿ ಲ್ಯಾಂಡ್ ಆಗಿತ್ತು. ನಂತರ 11.45ರ ಹೊತ್ತಿಗೆ ವೆಲ್ಲಿಂಗ್ಟನ್​ಗೆ ಸೇನಾ ಹೆಲಿಕ್ಯಾಪ್ಟರ್​ ಮೂಲಕ ಪ್ರಯಾಣ ಮಾಡಿದ್ದರು. ಆದರೆ ಈ ಹೆಲಿಕಾಪ್ಟರ್​ 12.20ರ ಹೊತ್ತಿಗೆ ಕಟ್ಟೇರಿ ಎಂಬ ಗ್ರಾಮದ ಬಳಿ ಪತನಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ವಿದೇಶಿ ತಂಡಗಳ ಪರ ಮಿಂಚುತ್ತಿರುವ ಭಾರತ ಮೂಲದ ಸ್ಪಿನ್ನರ್​ಗಳು ಇವರೆ ನೋಡಿ..!

ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ