AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲ್ಡೀವ್ಸ್‌ನಲ್ಲಿರುವ ಭಾರತೀಯ ಪಡೆಗಳನ್ನು ಸಮರ್ಥ ತಾಂತ್ರಿಕ ಸಿಬ್ಬಂದಿಯಿಂದ ಬದಲಾಯಿಸಲಾಗುವುದು: ಎಂಇಎ

ಈಗಿನ ಸಿಬ್ಬಂದಿಯನ್ನು ಸಮರ್ಥ ಭಾರತೀಯ ತಾಂತ್ರಿಕ ಸಿಬ್ಬಂದಿಯಿಂದ ಬದಲಾಯಿಸಲಾಗುವುದು ಎಂದು ನಾನು ಹೇಳಲು ಬಯಸುತ್ತೇನೆ" ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಹೇಳಿದ್ದು ಈ ಬಗ್ಗೆ ಅವರು ಹೆಚ್ಚಿನ ವಿವರಗಳನ್ನು ನೀಡಿಲ್ಲ.ದ್ವೀಪರಾಷ್ಟ್ರದಿಂದ ಭಾರತೀಯ ಸೇನೆ ಹಿಂತೆಗೆದುಕೊಳ್ಳುವಂತೆ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಭಾರತ ಸರ್ಕಾರವನ್ನು ಒತ್ತಾಯಿಸಿದ್ದರು.

ಮಾಲ್ಡೀವ್ಸ್‌ನಲ್ಲಿರುವ ಭಾರತೀಯ ಪಡೆಗಳನ್ನು ಸಮರ್ಥ ತಾಂತ್ರಿಕ ಸಿಬ್ಬಂದಿಯಿಂದ ಬದಲಾಯಿಸಲಾಗುವುದು: ಎಂಇಎ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on: Feb 08, 2024 | 7:49 PM

Share

ದೆಹಲಿ ಫೆಬ್ರುವರಿ 08: ಎರಡು ಹೆಲಿಕಾಪ್ಟರ್‌ಗಳನ್ನು ನಿರ್ವಹಿಸಲು,ಮಾಲ್ಡೀವ್ಸ್‌ನಲ್ಲಿ (Maldives) ನಿಯೋಜಿಸಲಾದ ಮಿಲಿಟರಿ ಸಿಬ್ಬಂದಿ ಮತ್ತು ವೈದ್ಯಕೀಯ ಸ್ಥಳಾಂತರಿಸುವಿಕೆ ಮತ್ತು ಮಾನವೀಯ ಕಾರ್ಯಾಚರಣೆಗಳಿಗೆ ಬಳಸುವ ವಿಮಾನದ ನಿರ್ವಹಣೆಗಾಗಿ ಈಗಾಗಲೇ ನಿಯೋಜನೆ ಆಗಿರುವ ಭಾರತೀಯ ಪಡೆಗಳನ್ನು  “ಸಮರ್ಥ ಭಾರತೀಯ ತಾಂತ್ರಿಕ ಸಿಬ್ಬಂದಿ” ಯಿಂದ ಬದಲಾಯಿಸಲಾಗುವುದು ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ. ಮಾರ್ಚ್ 15 ರೊಳಗೆ ಅವರನ್ನು ತೆಗೆಯಬೇಕು ಎಂದು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು (Mohamed Muizzu)ಅವರ ಬೇಡಿಕೆಯ ನಂತರ ಹಿಂದೂ ಮಹಾಸಾಗರದ ದ್ವೀಪಸಮೂಹದಿಂದ 75 ಕ್ಕೂ ಹೆಚ್ಚು ಭಾರತೀಯ ಮಿಲಿಟರಿ ಸಿಬ್ಬಂದಿಯನ್ನು ಹಿಂತೆಗೆದುಕೊಳ್ಳುವ ಕುರಿತು ಉಭಯ ದೇಶಗಳು ಪ್ರಸ್ತುತ ಚರ್ಚೆಯಲ್ಲಿ ತೊಡಗಿವೆ.

ಸಮಸ್ಯೆಯನ್ನು ಬಗೆಹರಿಸಲು ಉಭಯ ಕಡೆಯವರು ರಚಿಸಿದ ಉನ್ನತ ಮಟ್ಟದ ಕೋರ್ ಗುಂಪಿನ ಎರಡನೇ ಸಭೆಯ ನಂತರ, ಮೂರು ವಿಮಾನಗಳನ್ನು ನಿರ್ವಹಿಸಲು ಎರಡೂ ದೇಶಗಳು “ಪರಸ್ಪರ ಕಾರ್ಯಸಾಧ್ಯವಾದ ಪರಿಹಾರಗಳನ್ನು” ಒಪ್ಪಿಕೊಂಡಿವೆ ಎಂದು ಭಾರತ ಫೆಬ್ರವರಿ 2 ರಂದು ಹೇಳಿದೆ. ಮಾಲ್ಡೀವಿಯನ್ ವಿದೇಶಾಂಗ ಸಚಿವಾಲಯವು ಮಾರ್ಚ್ 10 ರೊಳಗೆ ಒಂದು ವಿಮಾನಕ್ಕಾಗಿ ಭಾರತವು ಮಿಲಿಟರಿ ಸಿಬ್ಬಂದಿಯನ್ನು ಬದಲಾಯಿಸುತ್ತದೆ. ಮೇ 10 ರೊಳಗೆ ಎಲ್ಲಾ ಸಿಬ್ಬಂದಿಯನ್ನು ಬದಲಾಯಿಸುತ್ತದೆ ಎಂದು ಹೇಳಿದೆ.

“ಈಗಿನ ಸಿಬ್ಬಂದಿಯನ್ನು ಸಮರ್ಥ ಭಾರತೀಯ ತಾಂತ್ರಿಕ ಸಿಬ್ಬಂದಿಯಿಂದ ಬದಲಾಯಿಸಲಾಗುವುದು ಎಂದು ನಾನು ಹೇಳಲು ಬಯಸುತ್ತೇನೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಅವರು ಹೆಚ್ಚಿನ ವಿವರಗಳನ್ನು ಹೇಳಿಲ್ಲ.

ಉನ್ನತ ಮಟ್ಟದ ಕೋರ್ ಗುಂಪಿನ ಮೂರನೇ ಸಭೆಯು “ತರುವಾಯ” ನಡೆಯಲಿದೆ ಎಂದು ಜೈಸ್ವಾಲ್ ಹೇಳಿದರು.

ಭಾರತದಿಂದ ಒದಗಿಸಲಾದ ಎರಡು ALH ಹೆಲಿಕಾಪ್ಟರ್‌ಗಳು ಮತ್ತು ಡೋರ್ನಿಯರ್ ವಿಮಾನವನ್ನು ನಿರ್ವಹಿಸಲು ಪ್ರಸ್ತುತ ಮಾಲ್ಡೀವ್ಸ್‌ನಲ್ಲಿರುವ ಮಿಲಿಟರಿ ಸಿಬ್ಬಂದಿಯನ್ನು ಬದಲಿಸಲು ಭಾರತವು ಹಲವಾರು ಆಯ್ಕೆಗಳನ್ನು ಪರಿಗಣಿಸುತ್ತಿದೆ ಎಂದು ಈ ವಿಷಯದ ಬಗ್ಗೆ ತಿಳಿದಿರುವ ಜನರು ಹೇಳಿದ್ದಾರೆ. ಒಂದು ಆಯ್ಕೆಯು ವಿಮಾನವನ್ನು ಹಾರಿಸುವ ಮತ್ತು ನಿರ್ವಹಿಸುವ ಅನುಭವ ಹೊಂದಿರುವ ಮೂರು ಸೇವೆಗಳ ನಿವೃತ್ತ ಸಿಬ್ಬಂದಿ ಸೇರಿದಂತೆ ಮಿಲಿಟರಿ ಸಿಬ್ಬಂದಿಯನ್ನು ಎರಡು ಪ್ಲಾಟ್‌ಫಾರ್ಮ್‌ಗಳೊಂದಿಗೆ ಪರಿಚಿತವಾಗಿರುವ ನಾಗರಿಕ ಆಪರೇಟರ್‌ಗಳೊಂದಿಗೆ ಬದಲಾಯಿಸುವುದು ಎಂದು ಮೂಲಗಳು ಹೇಳಿವೆ.

ಚೀನಾದ ನಿಕಟವರ್ತಿ ಎಂದು ವ್ಯಾಪಕವಾಗಿ ಗ್ರಹಿಸಲ್ಪಟ್ಟಿರುವ ಮುಯಿಝು, ಕಳೆದ ವರ್ಷದ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ ನಂತರ ಆಹಾರ ಭದ್ರತೆ ಮತ್ತು ರಕ್ಷಣೆಯಂತಹ ನಿರ್ಣಾಯಕ ಕ್ಷೇತ್ರಗಳಲ್ಲಿ ಭಾರತದ ಅವಲಂಬನೆಯಿಂದ ಮಾಲ್ಡೀವ್ಸ್ ಅನ್ನು ದೂರ ಸರಿಸಲು ಪ್ರಯತ್ನಿಸಿದ್ದಾರೆ. ವೈದ್ಯಕೀಯ ಸ್ಥಳಾಂತರಿಸುವ ಸೇವೆಗಳಿಗಾಗಿ ಶ್ರೀಲಂಕಾದೊಂದಿಗೆ ವ್ಯವಸ್ಥೆಗಳನ್ನು ಅಂತಿಮಗೊಳಿಸುವುದರ ಜೊತೆಗೆ, ಕಡಲ ಕಣ್ಗಾವಲು ಬಳಸುವುದಕ್ಕಾಗಿ ಗೋಧಿ ಮತ್ತು ಡ್ರೋನ್‌ಗಳನ್ನು ಸಂಗ್ರಹಿಸಲು ಮುಯಿಝು ಸರ್ಕಾರವು ಟರ್ಕಿಯೊಂದಿಗೆ ಒಪ್ಪಂದಗಳಿಗೆ ಸಹಿ ಹಾಕಿದೆ.

ಆದಾಗ್ಯೂ, ಭಾರತವು ಮಾಲ್ಡೀವ್ಸ್‌ನೊಂದಿಗಿನ ತನ್ನ ಅಭಿವೃದ್ಧಿ ಪಾಲುದಾರಿಕೆಗೆ ಬದ್ಧವಾಗಿದೆ ಎಂದು ಜೈಸ್ವಾಲ್ ಹೇಳಿದರು. 2024-25ರ ಬಜೆಟ್‌ನಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಮಾಲ್ಡೀವ್ಸ್‌ಗೆ ಬಜೆಟ್ ಹಂಚಿಕೆ ₹ 779 ಕೋಟಿಯಾಗಿದ್ದು, ಈ ಹಿಂದೆ ಯೋಜಿತ ₹ 600 ಕೋಟಿಗಿಂತ ಹೆಚ್ಚಾಗಿದೆ ಎಂದು ಅವರು ಗಮನಿಸಿದರು.

ಇದನ್ನೂ ಓದಿ: ಮಾಲ್ಡೀವ್ಸ್​ನಲ್ಲಿ ಚಿತ್ರೀಕರಣ ಬೇಡ, ನಿರ್ಮಾಪಕರಿಗೆ ಮನವಿ

“ನಾವು ಮಾಲ್ಡೀವ್ಸ್‌ಗೆ ಪ್ರಮುಖ, ಬದ್ಧ ಅಭಿವೃದ್ಧಿ ಪಾಲುದಾರರಾಗಿ ಉಳಿದಿದ್ದೇವೆ” ಎಂದು ಅವರು ಹೇಳಿದ್ದಾರೆ.  ಮಾಲ್ಡೀವ್ಸ್ ಭಾರತದ “ನೆರೆಹೊರೆಯ ಮೊದಲ” ನೀತಿಯ ಅತಿದೊಡ್ಡ ಫಲಾನುಭವಿಗಳಲ್ಲಿ ಒಂದಾಗಿದೆ. ಕೇಂದ್ರ ಸರ್ಕಾರವು ದ್ವೀಪಸಮೂಹದಲ್ಲಿನ ಅಭಿವೃದ್ಧಿ ಮತ್ತು ಮೂಲಸೌಕರ್ಯ ಯೋಜನೆಗಳಿಗೆ ಅನುದಾನ ಮತ್ತು ಸಾಲಗಳನ್ನು ಒಳಗೊಂಡಂತೆ ಬಿಲಿಯನ್‌ಗಟ್ಟಲೆ ಡಾಲರ್‌ಗಳನ್ನು ನೀಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!