AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bathinda: ಮಿಲಿಟರಿ ಸ್ಟೇಷನ್ ಮೇಲೆ ಗುಂಡಿನ ದಾಳಿ ಪ್ರಕರಣ: ತಪ್ಪೊಪ್ಪಿಕೊಂಡ ಯೋಧನ ಬಂಧನ

ಬಟಿಂಡಾ (Bathinda) ಮಿಲಿಟರಿ ಸ್ಟೇಷನ್ ಗುಂಡಿನ ದಾಳಿ ಘಟನೆ ಸಂಬಂಂಧಿಸಿದಂತೆ, ನಿರಂತರ ತನಿಖೆಯ ನಂತರ, ಘಟನೆಗೆ ಸಂಬಂಧಿಸಿದಂತೆ ಸೇನಾ ಗನ್ನರ್ ಘಟಕದ ಮೋಹನ್ ದೇಸಾಯಿ ಎಂಬ ಯೋಧ  INSAS ರೈಫಲ್ ಅನ್ನು ಕದ್ದು ತನ್ನ ನಾಲ್ವರು ಸಹೋದ್ಯೋಗಿಗಳನ್ನು ಕೊಂದಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ.

Bathinda: ಮಿಲಿಟರಿ ಸ್ಟೇಷನ್ ಮೇಲೆ ಗುಂಡಿನ ದಾಳಿ ಪ್ರಕರಣ: ತಪ್ಪೊಪ್ಪಿಕೊಂಡ ಯೋಧನ ಬಂಧನ
Follow us
ಅಕ್ಷಯ್​ ಪಲ್ಲಮಜಲು​​
|

Updated on:Apr 17, 2023 | 1:46 PM

ಪಂಜಾಬ್ಬಟಿಂಡಾ (Bathinda) ಮಿಲಿಟರಿ ಸ್ಟೇಷನ್ ಗುಂಡಿನ ದಾಳಿ ಘಟನೆ ಸಂಬಂಂಧಿಸಿದಂತೆ, ನಿರಂತರ ತನಿಖೆಯ ನಂತರ, ಘಟನೆಗೆ ಸಂಬಂಧಿಸಿದಂತೆ ಸೇನಾ ಗನ್ನರ್ ಘಟಕದ ಮೋಹನ್ ದೇಸಾಯಿ ಎಂಬ ಯೋಧ  INSAS ರೈಫಲ್ ಅನ್ನು ಕದ್ದು ತನ್ನ ನಾಲ್ವರು ಸಹೋದ್ಯೋಗಿಗಳನ್ನು ಕೊಂದಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ. ಪ್ರಾಥಮಿಕ ತನಿಖೆಗಳ ಪ್ರಕಾರ ಇದು ವೈಯಕ್ತಿಕ ಹಗೆತನದಿಂದ ಈ ಘಟನೆ ನಡೆದಿದೆ ಎಂದು ಸ್ಪಷ್ಟವಾಗಿ ಕಂಡುಬಂದಿದೆ ಎಂದು HQ ಸೌತ್ ವೆಸ್ಟರ್ನ್ ಕಮಾಂಡ್ ತಿಳಿಸಿದ್ದಾರೆ. ಇದೀಗ ಆ ಯೋಧನನ್ನು ಬಂಧನ ಮಾಡಲಾಗಿದೆ ಎಂದು ಹೇಳಲಾಗಿದೆ. ಗುಂಡಿನ ದಾಳಿಗೆ ಸಂಬಂಧಿಸಿದಂತೆ ನಾಲ್ವರು ಯೋಧರನ್ನು ಭಾನುವಾರ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ಮೂಲಗಳು ತಿಳಿಸಿವೆ. ಫೈರಿಂಗ್ ಘಟನೆಯ ಸಾಕ್ಷಿ ಮೇಜರ್ ಅಶುತೋಷ್ ಶುಕ್ಲಾ ಅವರ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಇಬ್ಬರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಹತ್ಯೆಯಾದ ನಾಲ್ವರು ಯೋಧರನ್ನು ಸಾಗರ್, ಕಮಲೇಶ್, ಸಂತೋಷ್ ಮತ್ತು ಯೋಗೇಶ್ ಎಂದು ಗುರುತಿಸಲಾಗಿದೆ ಎಂದು ಎಫ್‌ಐಆರ್ ತಿಳಿಸಿದೆ. ಅವರು ಸೈನ್ಯದ ಫಿರಂಗಿ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಏ.12 ಬೆಳಗ್ಗೆ ಪಂಜಾಬ್​​ನ ಬಟಿಂಡಾ ಸೇನಾ ಠಾಣೆಯೊಳಗೆ ಗುಂಡಿನ ದಾಳಿ ನಡೆದಿದೆ ಎಂದು ಭಾರತೀಯ ಸೇನೆಯ ಸೌತ್ ವೆಸ್ಟರ್ನ್ ಕಮಾಂಡ್ ತಿಳಿಸಿದೆ. ಈ ಪ್ರದೇಶದಲ್ಲಿ ತಂಡಗಳು ಸಕ್ರಿಯಗೊಂಡು ತ್ವರಿತ ಕಾರ್ಯಚರಣೆಯನ್ನು ನಡೆಸಲಾಗಿತ್ತು. ರಕ್ಷಣಾ ಸಿಬ್ಬಂದಿಗಳು ಈ ಪ್ರದೇಶವನ್ನು ಸುತ್ತುವರಿದ ಮತ್ತು ಕೆಲವೊಂದು ಕಡೆ ನಿರ್ಬಂಧವೇರಿದ್ದರು. ಈ ದಾಳಿಯಲ್ಲಿ ನಾಲ್ಕು ಜನ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿವೆ.

ಇದನ್ನೂ ಓದಿ: Punjab: ಪಂಜಾಬ್​​ನ ಬಟಿಂಡಾ ಸೇನಾ ಠಾಣೆಯೊಳಗೆ ಗುಂಡಿನ ದಾಳಿ, ನಾಲ್ಕು ಸಾವು

ಮುಂಜಾನೆ ವೇಳೆ ಬಟಿಂಡಾ ಮಿಲಿಟರಿ ಸ್ಟೇಷನ್ ಒಳಗೆ ಗುಂಡಿನ ದಾಳಿ ನಡೆಸಿದ ಘಟನೆ ವರದಿಯಾಗಿತ್ತು. ಬಟಿಂಡಾದ ಹಿರಿಯ ಪೊಲೀಸ್ ಅಧೀಕ್ಷಕ ಜಿಎಸ್ ಖುರಾನಾ ಅವರು ನೀಡಿರುವ ಹೇಳಿಕೆಯ ಪ್ರಕಾರ ಪೊಲೀಸ್ ತಂಡವು ಸೇನಾ ಠಾಣೆಯ ಹೊರಗೆ ಕಾಯುತ್ತಿದ್ದ ವೇಳೆ ಈ ಘಟನೆ ನಡೆದಿದೆ, ಹಂತಕರನ್ನು ಠಾಣೆಯ ಒಳಗೆ ಬರದಂತೆ ತಡೆದಿದ್ದಾರೆ ಎಂದು ಹೇಳಿದ್ದಾರೆ. ಆದರೆ, ಇದು ಭಯೋತ್ಪಾದಕ ದಾಳಿಯಾಗಿ ಕಂಡುಬರುತ್ತಿಲ್ಲ. ಇದು ಆಂತರಿಕ ವಿಷಯ ಆಗಿರಬಹುದು ಎಂದು ಅವರು ಹೇಳಿದರು.

Published On - 1:44 pm, Mon, 17 April 23

ನೆರೆರಾಜ್ಯದ ಆನೆಹಿಂಡನ್ನು ಪಳಗಿಸಲು ಹೊರಟಿವೆ ಕರ್ನಾಟಕದ ಸಲಗಗಳು
ನೆರೆರಾಜ್ಯದ ಆನೆಹಿಂಡನ್ನು ಪಳಗಿಸಲು ಹೊರಟಿವೆ ಕರ್ನಾಟಕದ ಸಲಗಗಳು
‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್