AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bathinda: ಮಿಲಿಟರಿ ಸ್ಟೇಷನ್ ಮೇಲೆ ಗುಂಡಿನ ದಾಳಿ ಪ್ರಕರಣ: ತಪ್ಪೊಪ್ಪಿಕೊಂಡ ಯೋಧನ ಬಂಧನ

ಬಟಿಂಡಾ (Bathinda) ಮಿಲಿಟರಿ ಸ್ಟೇಷನ್ ಗುಂಡಿನ ದಾಳಿ ಘಟನೆ ಸಂಬಂಂಧಿಸಿದಂತೆ, ನಿರಂತರ ತನಿಖೆಯ ನಂತರ, ಘಟನೆಗೆ ಸಂಬಂಧಿಸಿದಂತೆ ಸೇನಾ ಗನ್ನರ್ ಘಟಕದ ಮೋಹನ್ ದೇಸಾಯಿ ಎಂಬ ಯೋಧ  INSAS ರೈಫಲ್ ಅನ್ನು ಕದ್ದು ತನ್ನ ನಾಲ್ವರು ಸಹೋದ್ಯೋಗಿಗಳನ್ನು ಕೊಂದಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ.

Bathinda: ಮಿಲಿಟರಿ ಸ್ಟೇಷನ್ ಮೇಲೆ ಗುಂಡಿನ ದಾಳಿ ಪ್ರಕರಣ: ತಪ್ಪೊಪ್ಪಿಕೊಂಡ ಯೋಧನ ಬಂಧನ
ಅಕ್ಷಯ್​ ಪಲ್ಲಮಜಲು​​
|

Updated on:Apr 17, 2023 | 1:46 PM

Share

ಪಂಜಾಬ್ಬಟಿಂಡಾ (Bathinda) ಮಿಲಿಟರಿ ಸ್ಟೇಷನ್ ಗುಂಡಿನ ದಾಳಿ ಘಟನೆ ಸಂಬಂಂಧಿಸಿದಂತೆ, ನಿರಂತರ ತನಿಖೆಯ ನಂತರ, ಘಟನೆಗೆ ಸಂಬಂಧಿಸಿದಂತೆ ಸೇನಾ ಗನ್ನರ್ ಘಟಕದ ಮೋಹನ್ ದೇಸಾಯಿ ಎಂಬ ಯೋಧ  INSAS ರೈಫಲ್ ಅನ್ನು ಕದ್ದು ತನ್ನ ನಾಲ್ವರು ಸಹೋದ್ಯೋಗಿಗಳನ್ನು ಕೊಂದಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ. ಪ್ರಾಥಮಿಕ ತನಿಖೆಗಳ ಪ್ರಕಾರ ಇದು ವೈಯಕ್ತಿಕ ಹಗೆತನದಿಂದ ಈ ಘಟನೆ ನಡೆದಿದೆ ಎಂದು ಸ್ಪಷ್ಟವಾಗಿ ಕಂಡುಬಂದಿದೆ ಎಂದು HQ ಸೌತ್ ವೆಸ್ಟರ್ನ್ ಕಮಾಂಡ್ ತಿಳಿಸಿದ್ದಾರೆ. ಇದೀಗ ಆ ಯೋಧನನ್ನು ಬಂಧನ ಮಾಡಲಾಗಿದೆ ಎಂದು ಹೇಳಲಾಗಿದೆ. ಗುಂಡಿನ ದಾಳಿಗೆ ಸಂಬಂಧಿಸಿದಂತೆ ನಾಲ್ವರು ಯೋಧರನ್ನು ಭಾನುವಾರ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ಮೂಲಗಳು ತಿಳಿಸಿವೆ. ಫೈರಿಂಗ್ ಘಟನೆಯ ಸಾಕ್ಷಿ ಮೇಜರ್ ಅಶುತೋಷ್ ಶುಕ್ಲಾ ಅವರ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಇಬ್ಬರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಹತ್ಯೆಯಾದ ನಾಲ್ವರು ಯೋಧರನ್ನು ಸಾಗರ್, ಕಮಲೇಶ್, ಸಂತೋಷ್ ಮತ್ತು ಯೋಗೇಶ್ ಎಂದು ಗುರುತಿಸಲಾಗಿದೆ ಎಂದು ಎಫ್‌ಐಆರ್ ತಿಳಿಸಿದೆ. ಅವರು ಸೈನ್ಯದ ಫಿರಂಗಿ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಏ.12 ಬೆಳಗ್ಗೆ ಪಂಜಾಬ್​​ನ ಬಟಿಂಡಾ ಸೇನಾ ಠಾಣೆಯೊಳಗೆ ಗುಂಡಿನ ದಾಳಿ ನಡೆದಿದೆ ಎಂದು ಭಾರತೀಯ ಸೇನೆಯ ಸೌತ್ ವೆಸ್ಟರ್ನ್ ಕಮಾಂಡ್ ತಿಳಿಸಿದೆ. ಈ ಪ್ರದೇಶದಲ್ಲಿ ತಂಡಗಳು ಸಕ್ರಿಯಗೊಂಡು ತ್ವರಿತ ಕಾರ್ಯಚರಣೆಯನ್ನು ನಡೆಸಲಾಗಿತ್ತು. ರಕ್ಷಣಾ ಸಿಬ್ಬಂದಿಗಳು ಈ ಪ್ರದೇಶವನ್ನು ಸುತ್ತುವರಿದ ಮತ್ತು ಕೆಲವೊಂದು ಕಡೆ ನಿರ್ಬಂಧವೇರಿದ್ದರು. ಈ ದಾಳಿಯಲ್ಲಿ ನಾಲ್ಕು ಜನ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿವೆ.

ಇದನ್ನೂ ಓದಿ: Punjab: ಪಂಜಾಬ್​​ನ ಬಟಿಂಡಾ ಸೇನಾ ಠಾಣೆಯೊಳಗೆ ಗುಂಡಿನ ದಾಳಿ, ನಾಲ್ಕು ಸಾವು

ಮುಂಜಾನೆ ವೇಳೆ ಬಟಿಂಡಾ ಮಿಲಿಟರಿ ಸ್ಟೇಷನ್ ಒಳಗೆ ಗುಂಡಿನ ದಾಳಿ ನಡೆಸಿದ ಘಟನೆ ವರದಿಯಾಗಿತ್ತು. ಬಟಿಂಡಾದ ಹಿರಿಯ ಪೊಲೀಸ್ ಅಧೀಕ್ಷಕ ಜಿಎಸ್ ಖುರಾನಾ ಅವರು ನೀಡಿರುವ ಹೇಳಿಕೆಯ ಪ್ರಕಾರ ಪೊಲೀಸ್ ತಂಡವು ಸೇನಾ ಠಾಣೆಯ ಹೊರಗೆ ಕಾಯುತ್ತಿದ್ದ ವೇಳೆ ಈ ಘಟನೆ ನಡೆದಿದೆ, ಹಂತಕರನ್ನು ಠಾಣೆಯ ಒಳಗೆ ಬರದಂತೆ ತಡೆದಿದ್ದಾರೆ ಎಂದು ಹೇಳಿದ್ದಾರೆ. ಆದರೆ, ಇದು ಭಯೋತ್ಪಾದಕ ದಾಳಿಯಾಗಿ ಕಂಡುಬರುತ್ತಿಲ್ಲ. ಇದು ಆಂತರಿಕ ವಿಷಯ ಆಗಿರಬಹುದು ಎಂದು ಅವರು ಹೇಳಿದರು.

Published On - 1:44 pm, Mon, 17 April 23

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ