AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bathinda: ಮಿಲಿಟರಿ ಸ್ಟೇಷನ್ ಮೇಲೆ ಗುಂಡಿನ ದಾಳಿ ಪ್ರಕರಣ: ತಪ್ಪೊಪ್ಪಿಕೊಂಡ ಯೋಧನ ಬಂಧನ

ಬಟಿಂಡಾ (Bathinda) ಮಿಲಿಟರಿ ಸ್ಟೇಷನ್ ಗುಂಡಿನ ದಾಳಿ ಘಟನೆ ಸಂಬಂಂಧಿಸಿದಂತೆ, ನಿರಂತರ ತನಿಖೆಯ ನಂತರ, ಘಟನೆಗೆ ಸಂಬಂಧಿಸಿದಂತೆ ಸೇನಾ ಗನ್ನರ್ ಘಟಕದ ಮೋಹನ್ ದೇಸಾಯಿ ಎಂಬ ಯೋಧ  INSAS ರೈಫಲ್ ಅನ್ನು ಕದ್ದು ತನ್ನ ನಾಲ್ವರು ಸಹೋದ್ಯೋಗಿಗಳನ್ನು ಕೊಂದಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ.

Bathinda: ಮಿಲಿಟರಿ ಸ್ಟೇಷನ್ ಮೇಲೆ ಗುಂಡಿನ ದಾಳಿ ಪ್ರಕರಣ: ತಪ್ಪೊಪ್ಪಿಕೊಂಡ ಯೋಧನ ಬಂಧನ
ಅಕ್ಷಯ್​ ಪಲ್ಲಮಜಲು​​
|

Updated on:Apr 17, 2023 | 1:46 PM

Share

ಪಂಜಾಬ್ಬಟಿಂಡಾ (Bathinda) ಮಿಲಿಟರಿ ಸ್ಟೇಷನ್ ಗುಂಡಿನ ದಾಳಿ ಘಟನೆ ಸಂಬಂಂಧಿಸಿದಂತೆ, ನಿರಂತರ ತನಿಖೆಯ ನಂತರ, ಘಟನೆಗೆ ಸಂಬಂಧಿಸಿದಂತೆ ಸೇನಾ ಗನ್ನರ್ ಘಟಕದ ಮೋಹನ್ ದೇಸಾಯಿ ಎಂಬ ಯೋಧ  INSAS ರೈಫಲ್ ಅನ್ನು ಕದ್ದು ತನ್ನ ನಾಲ್ವರು ಸಹೋದ್ಯೋಗಿಗಳನ್ನು ಕೊಂದಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ. ಪ್ರಾಥಮಿಕ ತನಿಖೆಗಳ ಪ್ರಕಾರ ಇದು ವೈಯಕ್ತಿಕ ಹಗೆತನದಿಂದ ಈ ಘಟನೆ ನಡೆದಿದೆ ಎಂದು ಸ್ಪಷ್ಟವಾಗಿ ಕಂಡುಬಂದಿದೆ ಎಂದು HQ ಸೌತ್ ವೆಸ್ಟರ್ನ್ ಕಮಾಂಡ್ ತಿಳಿಸಿದ್ದಾರೆ. ಇದೀಗ ಆ ಯೋಧನನ್ನು ಬಂಧನ ಮಾಡಲಾಗಿದೆ ಎಂದು ಹೇಳಲಾಗಿದೆ. ಗುಂಡಿನ ದಾಳಿಗೆ ಸಂಬಂಧಿಸಿದಂತೆ ನಾಲ್ವರು ಯೋಧರನ್ನು ಭಾನುವಾರ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ಮೂಲಗಳು ತಿಳಿಸಿವೆ. ಫೈರಿಂಗ್ ಘಟನೆಯ ಸಾಕ್ಷಿ ಮೇಜರ್ ಅಶುತೋಷ್ ಶುಕ್ಲಾ ಅವರ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಇಬ್ಬರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಹತ್ಯೆಯಾದ ನಾಲ್ವರು ಯೋಧರನ್ನು ಸಾಗರ್, ಕಮಲೇಶ್, ಸಂತೋಷ್ ಮತ್ತು ಯೋಗೇಶ್ ಎಂದು ಗುರುತಿಸಲಾಗಿದೆ ಎಂದು ಎಫ್‌ಐಆರ್ ತಿಳಿಸಿದೆ. ಅವರು ಸೈನ್ಯದ ಫಿರಂಗಿ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಏ.12 ಬೆಳಗ್ಗೆ ಪಂಜಾಬ್​​ನ ಬಟಿಂಡಾ ಸೇನಾ ಠಾಣೆಯೊಳಗೆ ಗುಂಡಿನ ದಾಳಿ ನಡೆದಿದೆ ಎಂದು ಭಾರತೀಯ ಸೇನೆಯ ಸೌತ್ ವೆಸ್ಟರ್ನ್ ಕಮಾಂಡ್ ತಿಳಿಸಿದೆ. ಈ ಪ್ರದೇಶದಲ್ಲಿ ತಂಡಗಳು ಸಕ್ರಿಯಗೊಂಡು ತ್ವರಿತ ಕಾರ್ಯಚರಣೆಯನ್ನು ನಡೆಸಲಾಗಿತ್ತು. ರಕ್ಷಣಾ ಸಿಬ್ಬಂದಿಗಳು ಈ ಪ್ರದೇಶವನ್ನು ಸುತ್ತುವರಿದ ಮತ್ತು ಕೆಲವೊಂದು ಕಡೆ ನಿರ್ಬಂಧವೇರಿದ್ದರು. ಈ ದಾಳಿಯಲ್ಲಿ ನಾಲ್ಕು ಜನ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿವೆ.

ಇದನ್ನೂ ಓದಿ: Punjab: ಪಂಜಾಬ್​​ನ ಬಟಿಂಡಾ ಸೇನಾ ಠಾಣೆಯೊಳಗೆ ಗುಂಡಿನ ದಾಳಿ, ನಾಲ್ಕು ಸಾವು

ಮುಂಜಾನೆ ವೇಳೆ ಬಟಿಂಡಾ ಮಿಲಿಟರಿ ಸ್ಟೇಷನ್ ಒಳಗೆ ಗುಂಡಿನ ದಾಳಿ ನಡೆಸಿದ ಘಟನೆ ವರದಿಯಾಗಿತ್ತು. ಬಟಿಂಡಾದ ಹಿರಿಯ ಪೊಲೀಸ್ ಅಧೀಕ್ಷಕ ಜಿಎಸ್ ಖುರಾನಾ ಅವರು ನೀಡಿರುವ ಹೇಳಿಕೆಯ ಪ್ರಕಾರ ಪೊಲೀಸ್ ತಂಡವು ಸೇನಾ ಠಾಣೆಯ ಹೊರಗೆ ಕಾಯುತ್ತಿದ್ದ ವೇಳೆ ಈ ಘಟನೆ ನಡೆದಿದೆ, ಹಂತಕರನ್ನು ಠಾಣೆಯ ಒಳಗೆ ಬರದಂತೆ ತಡೆದಿದ್ದಾರೆ ಎಂದು ಹೇಳಿದ್ದಾರೆ. ಆದರೆ, ಇದು ಭಯೋತ್ಪಾದಕ ದಾಳಿಯಾಗಿ ಕಂಡುಬರುತ್ತಿಲ್ಲ. ಇದು ಆಂತರಿಕ ವಿಷಯ ಆಗಿರಬಹುದು ಎಂದು ಅವರು ಹೇಳಿದರು.

Published On - 1:44 pm, Mon, 17 April 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!