AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆ ಆರೋಪದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಕಾಂಗ್ರೆಸ್ ನಾಯಕನಿಗೆ ಹಾಲಿನ ಅಭಿಷೇಕ

ಚುನಾವಣೆಯ ಸಂದರ್ಭದಲ್ಲಿ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಚಂದುರಾವ್ ಶಿಂಧೆ ಅವರನ್ನು ಕೊಲ್ಲಲು ಯತ್ನಿಸಿದ ಆರೋಪದ ಮೇಲೆ ರಾಜು ಭಡೋರಿಯಾ ಅವರನ್ನು ಈ ವರ್ಷ ಜುಲೈ 13ರಂದು ರಾಜಸ್ಥಾನದ ಕೋಟಾದಲ್ಲಿ ಬಂಧಿಸಲಾಗಿತ್ತು.

ಕೊಲೆ ಆರೋಪದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಕಾಂಗ್ರೆಸ್ ನಾಯಕನಿಗೆ ಹಾಲಿನ ಅಭಿಷೇಕ
ಕೊಲೆ ಆರೋಪದಲ್ಲಿ ಜೈಲು ಸೇರಿದ್ದ ಕಾಂಗ್ರೆಸ್ ನಾಯಕನಿಗೆ ಹಾಲಿನ ಅಭಿಷೇಕ
TV9 Web
| Edited By: |

Updated on: Aug 25, 2022 | 3:39 PM

Share

ಇಂದೋರ್: ಬಿಜೆಪಿ ಕಾರ್ಯಕರ್ತನ ಹತ್ಯೆಗೆ ಯತ್ನಿಸಿದ ಆರೋಪ ಹೊತ್ತು ಜೈಲು ಸೇರಿದ್ದ ಮಧ್ಯಪ್ರದೇಶದ (Madhya Pradesh) ಕಾಂಗ್ರೆಸ್ (Congress) ಕಾರ್ಪೊರೇಟರ್ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಆ ಕಾರ್ಪೋರೇಟರ್​​ಗೆ ಅವರ ಬೆಂಬಲಿಗರು ಹಾಲಿನ ಅಭಿಷೇಕ ಮಾಡಿ, ಡ್ರಮ್ ಬಾರಿಸಿ ಸ್ವಾಗತಿಸಿರುವ ವಿಡಿಯೋ ವೈರಲ್ ಆಗಿದೆ.

ಇಂದೋರ್ ಕಾಂಗ್ರೆಸ್ ಕಾರ್ಪೊರೇಟರ್ ರಾಜು ಭಡೋರಿಯಾ ಅವರಿಗೆ ನೀಡಿದ ಸ್ವಾಗತದ ಕೆಲವು ಫೋಟೋ, ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ವಿಪಕ್ಷ ಕಾಂಗ್ರೆಸ್ ಕೊಲೆ ಪ್ರಕರಣದ ಆರೋಪಿಯನ್ನು ವೈಭವೀಕರಿಸುತ್ತಿದೆ ಎಂದು ಆಡಳಿತಾರೂಢ ಬಿಜೆಪಿ ಟೀಕಿಸಿದೆ.

ಜುಲೈ 6ರಂದು ಇಂದೋರ್ ಚುನಾವಣೆಯ ಸಂದರ್ಭದಲ್ಲಿ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಚಂದುರಾವ್ ಶಿಂಧೆ ಅವರನ್ನು ಕೊಲ್ಲಲು ಯತ್ನಿಸಿದ ಆರೋಪದ ಮೇಲೆ ರಾಜು ಭಡೋರಿಯಾ ಅವರನ್ನು ಈ ವರ್ಷ ಜುಲೈ 13ರಂದು ರಾಜಸ್ಥಾನದ ಕೋಟಾದಲ್ಲಿ ಬಂಧಿಸಲಾಗಿತ್ತು. ರಾಜು ಭಡೋರಿಯಾ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 307 (ಕೊಲೆ ಯತ್ನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಅಸಭ್ಯ ವರ್ತನೆ ಬಗ್ಗೆ ಪೋಷಕರಿಗೆ ತಿಳಿಸಿದ್ದಕ್ಕೆ ಬಾಲಕಿಗೆ ಚಾಕು ಇರಿದು ಕೊಲೆ; ಆತ್ಮಹತ್ಯೆ ಮಾಡಿಕೊಂಡ ಆರೋಪಿ

ಬುಧವಾರ ಅವರು ಜಾಮೀನಿನ ಮೇಲೆ ಬಿಡುಗಡೆ ಆಗಿದ್ದರು. ರಾಜು ಭಡೋರಿಯಾ ಜೈಲಿನಿಂದ ಹೊರಬಂದ ನಂತರ, ಅವರ ಬೆಂಬಲಿಗರು ಸಂಗೀತ ಮತ್ತು ಡೋಲು ಬಡಿತಗಳೊಂದಿಗೆ ಮೆರವಣಿಗೆ ನಡೆಸಿ, ಭಡೋರಿಯಾ ಮೇಲೆ ಹಾಲಿನ ಅಭಿಷೇಕ ಮಾಡಿದ್ದಾರೆ. ಇದನ್ನು ಬಿಜೆಪಿ ಟೀಕಿಸಿದೆ.

ಮಧ್ಯಪ್ರದೇಶದ ಬಿಜೆಪಿ ವಕ್ತಾರ ಉಮೇಶ್ ಶರ್ಮಾ, ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮತ್ತು ಗಂಭೀರ ಪ್ರಕರಣದ ಆರೋಪಿಯನ್ನು ವೈಭವೀಕರಿಸುವ ಮೂಲಕ ಕಾಂಗ್ರೆಸ್ ರಾಜಕೀಯವನ್ನು ಅಪರಾಧೀಕರಣಕ್ಕೆ ಒಳಪಡಿಸುತ್ತಿದೆ” ಎಂದು ಕಿಡಿಕಾರಿದ್ದಾರೆ.

ಆದರೆ, ರಾಜ್ಯ ಕಾಂಗ್ರೆಸ್ ಕಾರ್ಯದರ್ಶಿ ನೀಲಭ್ ಶುಕ್ಲಾ ಅವರು ಬಿಜೆಪಿಯ ಆದೇಶದ ಮೇರೆಗೆ ರಾಜು ಭಡೋರಿಯಾ ವಿರುದ್ಧ ಸುಳ್ಳು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ಶಿಂಧೆ ಮೇಲಿನ ದಾಳಿಯ ಸಂದರ್ಭದಲ್ಲಿ ರಾಜು ಭಡೋರಿಯಾ ಆ ಸ್ಥಳದಲ್ಲಿಯೇ ಇರಲಿಲ್ಲ ಎಂದು ಶುಕ್ಲಾ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ