AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯ ಬಿ ಟೀಮ್​, ಔರಂಗಜೇಬನಿಗೆ ತಲೆಬಾಗುವ ಪಕ್ಷದೊಂದಿಗೆ ಮೈತ್ರಿ ಸಾಧ್ಯವಿಲ್ಲ: ಶಿವಸೇನೆ ನಾಯಕರ ಸ್ಪಷ್ಟ ನಿರ್ಧಾರ

ಅಸಾದುದ್ದೀನ್ ಓವೈಸಿ ಪಕ್ಷದೊಂದಿಗೆ ಮೈತ್ರಿಗೆ ಸಂಬಂಧಪಟ್ಟು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಪಕ್ಷದ ಪ್ರಮುಖರೊಂದಿಗೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲೇ ಮೈತ್ರಿಯನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ.

ಬಿಜೆಪಿಯ ಬಿ ಟೀಮ್​, ಔರಂಗಜೇಬನಿಗೆ ತಲೆಬಾಗುವ ಪಕ್ಷದೊಂದಿಗೆ ಮೈತ್ರಿ ಸಾಧ್ಯವಿಲ್ಲ: ಶಿವಸೇನೆ ನಾಯಕರ ಸ್ಪಷ್ಟ ನಿರ್ಧಾರ
ಉದ್ಧವ್ ಠಾಕ್ರೆ
TV9 Web
| Edited By: |

Updated on: Mar 20, 2022 | 4:04 PM

Share

ಆಲ್​ ಇಂಡಿಯಾ ಮಜ್ಲಿಸ್​-ಇ-ಇತ್ತೇಹಾದುಲ್​ ಮುಸ್ಲಿಮೀನ್​ (ಎಐಎಂಐಎಂ) ಪಕ್ಷ, ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ (ಶಿವಸೇನೆ-ಕಾಂಗ್ರೆಸ್​-ಎನ್​​​ಸಿಪಿ ಮೈತ್ತಿ)ಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಇಂಗಿತವನ್ನು ಎಐಎಂಐಎಂ  ಸಂಸದರೊಬ್ಬರು ವ್ಯಕ್ತಪಡಿಸಿದ್ದರು. ಆದರೆ ಶಿವಸೇನೆ (Shiv Sena) ಅದನ್ನು ನೇರಾನೇರ ತಿರಸ್ಕರಿಸಿದೆ. ಈ ಬಗ್ಗೆ ಶನಿವಾರ ಪ್ರತಿಕ್ರಿಯೆ ನೀಡಿದ್ದ ಶಿವಸೇನೆ ಸಂಸದ ಸಂಜಯ್ ರಾವತ್​, ಔರಂಗಜೇಬನಿಗೆ ತಲೆಬಾಗುವ ಪಕ್ಷದೊಟ್ಟಿಗೆ ಎಂದಿಗೂ ಮೈತ್ರಿ ಸಾಧ್ಯವೇ ಇಲ್ಲ ಎಂದು ಹೇಳಿದ್ದರು. ಹಾಗೇ ಇಂದು ಮಾಧ್ಯಮಗಳೊಟ್ಟಿಗೆ ಮಾತನಾಡಿದ ರಾವತ್​, ಎಐಎಂಐಎಂ ಒಂದು ಬಿಜೆಪಿಯ ಬಿ ಟೀಮ್​.  ಅದರೊಂದಿಗೆ ಸ್ನೇಹ ಸಾಧ್ಯವಾಗದು ಎಂದಿದ್ದಾರೆ.

ಅಸಾದುದ್ದೀನ್ ಓವೈಸಿ ಪಕ್ಷದೊಂದಿಗೆ ಮೈತ್ರಿಗೆ ಸಂಬಂಧಪಟ್ಟು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಪಕ್ಷದ ಪ್ರಮುಖರೊಂದಿಗೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲೇ ಮೈತ್ರಿಯನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ನಾವು ನಮ್ಮ ಪಕ್ಷವನ್ನು ಛತ್ರಪತಿ ಶಿವಾಜಿ ಮಹಾರಾಜ ಮತ್ತು ಸಂಭಾಜಿ ಮಹಾರಾಜ್​ ಸಿದ್ಧಾಂತ, ಮೌಲ್ಯವನ್ನು ಅಳವಡಿಸಿಕೊಂಡು ಕಟ್ಟಿದ್ದೇವೆ. ಹೀಗಿರುವಾಗ ಔರಂಗಜೇಬನ ಸಮಾಧಿಯೆದುರು ತಲೆಬಾಗುವ ಪಕ್ಷದೆದುರು ಯಾಕೆ ಮೈತ್ರಿ ಮಾಡಿಕೊಳ್ಳಬೇಕು.  ಮಹಾರಾಷ್ಟ್ರದಲ್ಲಿ ಕಾಂಗ್ರೆಸ್​, ಶಿವಸೇನೆ, ಎನ್​ಸಿಪಿ ಸೇರಿ ಸರ್ಕಾರ ರಚನೆಯಾಗಿದೆ. ಅಲ್ಲಿ ಇನ್ನು ನಾಲ್ಕನೇ ಪಕ್ಷ ಸೇರಲು ಅವಕಾಶವಿಲ್ಲ ಎಂದಿದ್ದಾರೆ.

ಉದ್ಧವ್ ಠಾಕ್ರೆ ಹೇಳಿದ್ದೇನು?

ಎಐಎಂಐಎಂ ಪಕ್ಷ ಮಹಾವಿಕಾಸ್​ ಅಘಾಡಿ ಸೇರ್ಪಡೆ ಕುರಿತಂತೆ ಶಿವಸೇನೆ ಮುಖ್ಯಸ್ಥ, ಮಹಾ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಮ್ಮ ಪಕ್ಷದ ಸಂಸದರು, ಶಾಸಕರು, ಪ್ರಮುಖರೊಂದಿಗೆ ಸಭೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಠಾಕ್ರೆ, ಓವೈಸಿ ಪಕ್ಷದೊಂದಿಗೆ ಮೈತ್ರಿ ಸಾಧ್ಯವೇ ಇಲ್ಲ. ಶಿವಸೇನೆ ಒಂದು ಬಲಿಷ್ಠವಾದ ರಾಷ್ಟ್ರೀಯ ಪಕ್ಷ. ಹಿಂದುತ್ವದ ಪರ ಪಕ್ಷ ಮತ್ತು ನಮ್ಮ ಪಕ್ಷಕ್ಕೆ ನಮ್ಮದೇ ಆದ ಸ್ಪಷ್ಟ ಸಿದ್ಧಾಂತವಿದೆ. ಇದನ್ನು ರೂಪಿಸಿಕೊಟ್ಟವರು ಬಾಳಾಸಾಹೇಬ್​ ಠಾಕ್ರೆ. ಅದನ್ನು ಮುಂದುವರಿಸಿಕೊಂಡು ಹೋಗಬೇಕು. ಎಐಎಂಐಎಂ ಜತೆ ಮೈತ್ರಿ ಸಂಬಂಧ ಯಾರಿಗೂ, ಯಾವುದೇ ಗೊಂದಲ ಬೇಡ, ಅದು ಆಗದ ಮಾತು ಎಂದು ಹೇಳಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಎಐಎಂಐಎಂ ಸಂಸದ ಇಮ್ತಿಯಾಜ್​ ಜಲೀಲ್​ ಅವರು ಮೊದಲಿಗೆ ಮೈತ್ರಿ ಮಾತನಾಡಿದವರು. ಮಹಾರಾಷ್ಟ್ರದಲ್ಲಿ ಮುಂಬರುವ ಸ್ಥಳೀಯ ಆಡಳಿತಗಳ ಚುನಾವಣೆಯಲ್ಲಿ ನಮ್ಮ ಪಕ್ಷ  ಎನ್​ಸಿಪಿ ಮತ್ತು ಕಾಂಗ್ರೆಸ್​ ಮೈತ್ರಿಯನ್ನು ಸೇರ್ಪಡೆಯಾಗುವ ಆಶಯವಿದೆ ಎಂದಿದ್ದರು. ಈ ಸಂಬಂಧ ಅವರು ಎನ್​ಸಿಪಿ ಹಿರಿಯ ಮುಖಂಡರೊಬ್ಬರೊಂದಿಗೂ ಮಾತನಾಡಿದ್ದರು. ಆದರೆ ಶಿವಸೇನೆ ಇದನ್ನು ಸ್ಪಷ್ಟವಾಗಿ ನಿರಕಾರಿಸಿದೆ. ಎಐಎಂಐಎಂ ಕಾಂಗ್ರೆಸ್​-ಎನ್​ಸಿಪಿ ಮೈತ್ರಿಯೊಂದಿಗೆ ತಾವೂ ಸೇರುವುದಾಗಿ ಹೇಳುತ್ತಿದೆ. ಆದರೆ ಮಹಾವಿಕಾಸ್ ಅಘಾಡಿ ರಚಿತವಾಗಿರುವುದು ಕಾಂಗ್ರೆಸ್​-ಎನ್​ಸಿಪಿ ಮತ್ತು ಶಿವಸೇನೆ ಮೈತ್ರಿಯಿಂದ. ಓವೈಸಿ ಪಕ್ಷವನ್ನು ನಮ್ಮ ಮೈತ್ರಿಗೆ ಸೇರಿಸಿಕೊಳ್ಳಲು ನಮಗೆ ಒಪ್ಪಿಗೆಯಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: RRR: ಏಕತಾ ಪ್ರತಿಮೆ ಮುಂಭಾಗ ರಾಮ್ ಚರಣ್- ಜ್ಯೂ.ಎನ್​ಟಿಆರ್ ‘ದೋಸ್ತಿ’ ಪೋಸ್; ವಿಶೇಷ ಕ್ಷಣಕ್ಕೆ ಸಾಕ್ಷಿಯಾದ ರಾಜಮೌಳಿ; ಫೋಟೋಗಳು ಇಲ್ಲಿವೆ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!