AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯ ಬಿ ಟೀಮ್​, ಔರಂಗಜೇಬನಿಗೆ ತಲೆಬಾಗುವ ಪಕ್ಷದೊಂದಿಗೆ ಮೈತ್ರಿ ಸಾಧ್ಯವಿಲ್ಲ: ಶಿವಸೇನೆ ನಾಯಕರ ಸ್ಪಷ್ಟ ನಿರ್ಧಾರ

ಅಸಾದುದ್ದೀನ್ ಓವೈಸಿ ಪಕ್ಷದೊಂದಿಗೆ ಮೈತ್ರಿಗೆ ಸಂಬಂಧಪಟ್ಟು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಪಕ್ಷದ ಪ್ರಮುಖರೊಂದಿಗೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲೇ ಮೈತ್ರಿಯನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ.

ಬಿಜೆಪಿಯ ಬಿ ಟೀಮ್​, ಔರಂಗಜೇಬನಿಗೆ ತಲೆಬಾಗುವ ಪಕ್ಷದೊಂದಿಗೆ ಮೈತ್ರಿ ಸಾಧ್ಯವಿಲ್ಲ: ಶಿವಸೇನೆ ನಾಯಕರ ಸ್ಪಷ್ಟ ನಿರ್ಧಾರ
ಉದ್ಧವ್ ಠಾಕ್ರೆ
TV9 Web
| Edited By: |

Updated on: Mar 20, 2022 | 4:04 PM

Share

ಆಲ್​ ಇಂಡಿಯಾ ಮಜ್ಲಿಸ್​-ಇ-ಇತ್ತೇಹಾದುಲ್​ ಮುಸ್ಲಿಮೀನ್​ (ಎಐಎಂಐಎಂ) ಪಕ್ಷ, ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ (ಶಿವಸೇನೆ-ಕಾಂಗ್ರೆಸ್​-ಎನ್​​​ಸಿಪಿ ಮೈತ್ತಿ)ಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಇಂಗಿತವನ್ನು ಎಐಎಂಐಎಂ  ಸಂಸದರೊಬ್ಬರು ವ್ಯಕ್ತಪಡಿಸಿದ್ದರು. ಆದರೆ ಶಿವಸೇನೆ (Shiv Sena) ಅದನ್ನು ನೇರಾನೇರ ತಿರಸ್ಕರಿಸಿದೆ. ಈ ಬಗ್ಗೆ ಶನಿವಾರ ಪ್ರತಿಕ್ರಿಯೆ ನೀಡಿದ್ದ ಶಿವಸೇನೆ ಸಂಸದ ಸಂಜಯ್ ರಾವತ್​, ಔರಂಗಜೇಬನಿಗೆ ತಲೆಬಾಗುವ ಪಕ್ಷದೊಟ್ಟಿಗೆ ಎಂದಿಗೂ ಮೈತ್ರಿ ಸಾಧ್ಯವೇ ಇಲ್ಲ ಎಂದು ಹೇಳಿದ್ದರು. ಹಾಗೇ ಇಂದು ಮಾಧ್ಯಮಗಳೊಟ್ಟಿಗೆ ಮಾತನಾಡಿದ ರಾವತ್​, ಎಐಎಂಐಎಂ ಒಂದು ಬಿಜೆಪಿಯ ಬಿ ಟೀಮ್​.  ಅದರೊಂದಿಗೆ ಸ್ನೇಹ ಸಾಧ್ಯವಾಗದು ಎಂದಿದ್ದಾರೆ.

ಅಸಾದುದ್ದೀನ್ ಓವೈಸಿ ಪಕ್ಷದೊಂದಿಗೆ ಮೈತ್ರಿಗೆ ಸಂಬಂಧಪಟ್ಟು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಪಕ್ಷದ ಪ್ರಮುಖರೊಂದಿಗೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲೇ ಮೈತ್ರಿಯನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ನಾವು ನಮ್ಮ ಪಕ್ಷವನ್ನು ಛತ್ರಪತಿ ಶಿವಾಜಿ ಮಹಾರಾಜ ಮತ್ತು ಸಂಭಾಜಿ ಮಹಾರಾಜ್​ ಸಿದ್ಧಾಂತ, ಮೌಲ್ಯವನ್ನು ಅಳವಡಿಸಿಕೊಂಡು ಕಟ್ಟಿದ್ದೇವೆ. ಹೀಗಿರುವಾಗ ಔರಂಗಜೇಬನ ಸಮಾಧಿಯೆದುರು ತಲೆಬಾಗುವ ಪಕ್ಷದೆದುರು ಯಾಕೆ ಮೈತ್ರಿ ಮಾಡಿಕೊಳ್ಳಬೇಕು.  ಮಹಾರಾಷ್ಟ್ರದಲ್ಲಿ ಕಾಂಗ್ರೆಸ್​, ಶಿವಸೇನೆ, ಎನ್​ಸಿಪಿ ಸೇರಿ ಸರ್ಕಾರ ರಚನೆಯಾಗಿದೆ. ಅಲ್ಲಿ ಇನ್ನು ನಾಲ್ಕನೇ ಪಕ್ಷ ಸೇರಲು ಅವಕಾಶವಿಲ್ಲ ಎಂದಿದ್ದಾರೆ.

ಉದ್ಧವ್ ಠಾಕ್ರೆ ಹೇಳಿದ್ದೇನು?

ಎಐಎಂಐಎಂ ಪಕ್ಷ ಮಹಾವಿಕಾಸ್​ ಅಘಾಡಿ ಸೇರ್ಪಡೆ ಕುರಿತಂತೆ ಶಿವಸೇನೆ ಮುಖ್ಯಸ್ಥ, ಮಹಾ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಮ್ಮ ಪಕ್ಷದ ಸಂಸದರು, ಶಾಸಕರು, ಪ್ರಮುಖರೊಂದಿಗೆ ಸಭೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಠಾಕ್ರೆ, ಓವೈಸಿ ಪಕ್ಷದೊಂದಿಗೆ ಮೈತ್ರಿ ಸಾಧ್ಯವೇ ಇಲ್ಲ. ಶಿವಸೇನೆ ಒಂದು ಬಲಿಷ್ಠವಾದ ರಾಷ್ಟ್ರೀಯ ಪಕ್ಷ. ಹಿಂದುತ್ವದ ಪರ ಪಕ್ಷ ಮತ್ತು ನಮ್ಮ ಪಕ್ಷಕ್ಕೆ ನಮ್ಮದೇ ಆದ ಸ್ಪಷ್ಟ ಸಿದ್ಧಾಂತವಿದೆ. ಇದನ್ನು ರೂಪಿಸಿಕೊಟ್ಟವರು ಬಾಳಾಸಾಹೇಬ್​ ಠಾಕ್ರೆ. ಅದನ್ನು ಮುಂದುವರಿಸಿಕೊಂಡು ಹೋಗಬೇಕು. ಎಐಎಂಐಎಂ ಜತೆ ಮೈತ್ರಿ ಸಂಬಂಧ ಯಾರಿಗೂ, ಯಾವುದೇ ಗೊಂದಲ ಬೇಡ, ಅದು ಆಗದ ಮಾತು ಎಂದು ಹೇಳಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಎಐಎಂಐಎಂ ಸಂಸದ ಇಮ್ತಿಯಾಜ್​ ಜಲೀಲ್​ ಅವರು ಮೊದಲಿಗೆ ಮೈತ್ರಿ ಮಾತನಾಡಿದವರು. ಮಹಾರಾಷ್ಟ್ರದಲ್ಲಿ ಮುಂಬರುವ ಸ್ಥಳೀಯ ಆಡಳಿತಗಳ ಚುನಾವಣೆಯಲ್ಲಿ ನಮ್ಮ ಪಕ್ಷ  ಎನ್​ಸಿಪಿ ಮತ್ತು ಕಾಂಗ್ರೆಸ್​ ಮೈತ್ರಿಯನ್ನು ಸೇರ್ಪಡೆಯಾಗುವ ಆಶಯವಿದೆ ಎಂದಿದ್ದರು. ಈ ಸಂಬಂಧ ಅವರು ಎನ್​ಸಿಪಿ ಹಿರಿಯ ಮುಖಂಡರೊಬ್ಬರೊಂದಿಗೂ ಮಾತನಾಡಿದ್ದರು. ಆದರೆ ಶಿವಸೇನೆ ಇದನ್ನು ಸ್ಪಷ್ಟವಾಗಿ ನಿರಕಾರಿಸಿದೆ. ಎಐಎಂಐಎಂ ಕಾಂಗ್ರೆಸ್​-ಎನ್​ಸಿಪಿ ಮೈತ್ರಿಯೊಂದಿಗೆ ತಾವೂ ಸೇರುವುದಾಗಿ ಹೇಳುತ್ತಿದೆ. ಆದರೆ ಮಹಾವಿಕಾಸ್ ಅಘಾಡಿ ರಚಿತವಾಗಿರುವುದು ಕಾಂಗ್ರೆಸ್​-ಎನ್​ಸಿಪಿ ಮತ್ತು ಶಿವಸೇನೆ ಮೈತ್ರಿಯಿಂದ. ಓವೈಸಿ ಪಕ್ಷವನ್ನು ನಮ್ಮ ಮೈತ್ರಿಗೆ ಸೇರಿಸಿಕೊಳ್ಳಲು ನಮಗೆ ಒಪ್ಪಿಗೆಯಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: RRR: ಏಕತಾ ಪ್ರತಿಮೆ ಮುಂಭಾಗ ರಾಮ್ ಚರಣ್- ಜ್ಯೂ.ಎನ್​ಟಿಆರ್ ‘ದೋಸ್ತಿ’ ಪೋಸ್; ವಿಶೇಷ ಕ್ಷಣಕ್ಕೆ ಸಾಕ್ಷಿಯಾದ ರಾಜಮೌಳಿ; ಫೋಟೋಗಳು ಇಲ್ಲಿವೆ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್