AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿ ಮತ್ತು ಖನಿಜಗಳ ಕಾಯ್ದೆ ತಿದ್ದುಪಡಿ ಮಸೂದೆ ಸಂಸತ್ತಿನಲ್ಲಿ ಅಂಗೀಕಾರ; ಗಣಿಗಾರಿಕೆ ಗುತ್ತಿಗೆ ಹರಾಜು ಇನ್ನು ಸರಳ, ಮುಕ್ತ ಮುಕ್ತ

ಈ ತಿದ್ದುಪಡಿಯು ಆತ್ಮನಿರ್ಭರ ಭಾರತ ಪರಿಕಲ್ಪನೆ ಅಡಿಯಲ್ಲಿ ಗಣಿಗಾರಿಕೆ ಕ್ಷೇತ್ರದಲ್ಲಿ ಉನ್ನತ ಮಟ್ಟಕ್ಕೇರಲು ಮತ್ತಷ್ಟು ಶಕ್ತಿ ನೀಡಲಿದೆ. ಜೊತೆಗೆ, ಅಪಾರ ಪ್ರಮಾಣದ ಉದ್ಯೋಗ ಸೃಷ್ಟಿಯೂ ಸಾಧ್ಯವಾಗಲಿದೆ. ಗಣಿಗಾರಿಕೆಗೆ ಅವಕಾಶವಿರುವ ರಾಜ್ಯಗಳಲ್ಲಿ ಹೆಚ್ಚೆಚ್ಚು ಉದ್ಯೋಗಾವಕಾಶ ತೆರೆದುಕೊಳ್ಳಲಿದೆ ಎಂದು ಕೇಂದ್ರ ಕಲ್ಲಿದ್ದಲು ಮತ್ತು ಗಣಿಗಾರಿಕೆ ಸಚಿವ ಪ್ರಲ್ಹಾದ್ ಜೋಶಿ ಅಭಿಪ್ರಾಯಪಟ್ಟಿದ್ದಾರೆ.

ಗಣಿ ಮತ್ತು ಖನಿಜಗಳ ಕಾಯ್ದೆ ತಿದ್ದುಪಡಿ ಮಸೂದೆ ಸಂಸತ್ತಿನಲ್ಲಿ ಅಂಗೀಕಾರ; ಗಣಿಗಾರಿಕೆ ಗುತ್ತಿಗೆ ಹರಾಜು ಇನ್ನು ಸರಳ, ಮುಕ್ತ ಮುಕ್ತ
ಸಚಿವ ಪ್ರಹ್ಲಾದ್ ಜೋಶಿ
TV9 Web
| Edited By: |

Updated on:Apr 05, 2022 | 12:57 PM

Share

ದೆಹಲಿ: ಗಣಿ ಮತ್ತು ಖನಿಜಗಳ (ಅಭಿವೃದ್ಧಿ ಮತ್ತು ನಿಯಂತ್ರಣಾ) ಕಾಯ್ದೆಗೆ ಸಂಬಂಧಿಸಿದಂತೆ ತರಲಾದ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸಲಾಗಿದೆ. ಮಾರ್ಚ್​ 19 ರಂದು ಈ ಕಾಯ್ದೆಯನ್ನು ಲೋಕಸಭೆ ಅಂಗೀಕರಿಸಿದ್ದ ಈ ಮಸೂದೆಗೆ ಶುಕ್ರವಾರ ರಾಜ್ಯಸಭೆಯಲ್ಲೂ ಅನುಮೋದನೆ ಸಿಕ್ಕಿದ್ದು, ಉಭಯ ಸದನಗಳಿಂದಲೂ ಒಪ್ಪಿಗೆ ಸಿಕ್ಕ ಕಾರಣ ಈ ತಿದ್ದುಪಡಿಯನ್ನು ಅಂಗೀಕರಿಸಲಾಗಿದೆ. ಕಲ್ಲಿದ್ದಲು ಮತ್ತು ಗಣಿಗಾರಿಕೆ ಕ್ಷೇತ್ರದಲ್ಲಿ ವ್ಯಾಪಾರ ಮಾಡುವ ಸುಲಭತೆಯನ್ನು ಉತ್ತೇಜಿಸುವ ಉದ್ದೇಶದಿಂದ ಈ ತಿದ್ದುಪಡಿ ತರಲಾಗಿದ್ದು, ಅಭಿವೃದ್ಧಿಯ ದೃಷ್ಟಿಯಿಂದ ಇದು ಸಕಾರಾತ್ಮಕ ಬೆಳವಣಿಗೆ ಎನ್ನಲಾಗಿದೆ.

ಗಣಿ ಮತ್ತು ಖನಿಜಗಳ (ಅಭಿವೃದ್ಧಿ ಮತ್ತು ನಿಯಂತ್ರಣಾ) ಕಾಯ್ದೆಗೆ ತಂದಿರುವ ತಿದ್ದುಪಡಿಗಳಿಂದಾಗಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಪಾರ ಪ್ರಮಾಣದಲ್ಲಿ ಬಾಕಿ ಉಳಿದಿರುವ ಕೆಲಸ ಕಾರ್ಯಗಳು ತ್ವರಿತಗತಿಯಲ್ಲಿ ಪೂರ್ಣಗೊಳ್ಳಲಿವೆ. ಅಭಿವೃದ್ಧಿ ಪ್ರಕ್ರಿಯೆ ಸೇರಿದಂತೆ ಗಣಿ ಮತ್ತು ಖನಿಜಕ್ಕೆ ಸೇರಿದ ಎಲ್ಲಾ ಬೆಳವಣಿಗೆಗಳಿಗೂ ಬಹುದೊಡ್ಡ ಮಟ್ಟದಲ್ಲಿ ಉತ್ತೇಜನ ಸಿಗಲಿದೆ ಎಂದು ವಿಶ್ಲೇಷಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಕೇಂದ್ರ ಕಲ್ಲಿದ್ದಲು ಮತ್ತು ಗಣಿಗಾರಿಕೆ ಸಚಿವ ಪ್ರಲ್ಹಾದ್ ಜೋಶಿ, ಈ ತಿದ್ದುಪಡಿಯು ಆತ್ಮನಿರ್ಭರ ಭಾರತ ಪರಿಕಲ್ಪನೆ ಅಡಿಯಲ್ಲಿ ಗಣಿಗಾರಿಕೆ ಕ್ಷೇತ್ರದಲ್ಲಿ ಉನ್ನತ ಮಟ್ಟಕ್ಕೇರಲು ಮತ್ತಷ್ಟು ಶಕ್ತಿ ನೀಡಲಿದೆ. ಜೊತೆಗೆ, ಅಪಾರ ಪ್ರಮಾಣದ ಉದ್ಯೋಗ ಸೃಷ್ಟಿಯೂ ಸಾಧ್ಯವಾಗಲಿದೆ. ಗಣಿಗಾರಿಕೆಗೆ ಅವಕಾಶವಿರುವ ರಾಜ್ಯಗಳಲ್ಲಿ ಹೆಚ್ಚೆಚ್ಚು ಉದ್ಯೋಗಾವಕಾಶ ತೆರೆದುಕೊಳ್ಳಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ರಸ್ತುತ ಚಾಲ್ತಿಯಲ್ಲಿದ್ದ ಗಣಿ ಮತ್ತು ಖನಿಜಗಳ (ಅಭಿವೃದ್ಧಿ ಮತ್ತು ನಿಯಂತ್ರಣಾ) ಕಾಯ್ದೆಯ ಸೆಕ್ಷನ್​ 10(A)(2) ಅಡಿಯಲ್ಲಿ ಅನುಮತಿ ಹೊಂದಿದವರಿಗೆ ಮಾತ್ರ ನಿಯಮಿತ ಅವಕಾಶ ನೀಡಲಾಗುತ್ತಿತ್ತು. ಆದರೆ, ಈಗ ತರಲಾಗಿರುವ ತಿದ್ದುಪಡಿಯ ಮೂಲಕ ಇದರ ಮೇಲಿನ ಎಲ್ಲಾ ನಿರ್ಬಂಧಗಳೂ ತೆರವುಗೊಳ್ಳಲಿದ್ದು, ಬಹಿರಂಗವಾಗಿ ಹರಾಜು ಪ್ರಕ್ರಿಯೆಗೆ ಅವಕಾಶ ಕಲ್ಪಿಸಲು ಸಾಧ್ಯವಾಗುತ್ತದೆ. ಅಂತೆಯೇ, ಈವರೆಗೆ ಗಣಿಗಾರಿಕೆಗೆ ಗುತ್ತಿಗೆ ಪಡೆಯಲು ಸಾಧ್ಯವಾಗದವರಿಗೂ ಹರಾಜಿನ ಮೂಲಕ ಅವಕಾಶ ನೀಡಲಾಗುತ್ತದೆ.

(Mines and Minerals Amendment Bill 2021 passed in both Lok Sabha and Rajya Sabha of Parliament says Union Minister of Coal and Mines Pralhad Joshi)

Published On - 8:48 pm, Fri, 2 April 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?