AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿ ಗುತ್ತಿಗೆ ವಿವಾದ: ಹೈಕೋರ್ಟ್ ಆದೇಶ ಪ್ರಶ್ನಿಸಿ ಹೇಮಂತ್ ಸೊರೆನ್ ಸಲ್ಲಿಸಿದ ಮೇಲ್ಮನವಿ ಅಂಗೀಕರಿಸಿದ ಸುಪ್ರೀಂ

ಇಡಿ ತನಿಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ನಿರ್ವಹಣೆಯನ್ನು ಅಂಗೀಕರಿಸಿದ ಜಾರ್ಖಂಡ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ  ಸೊರೆನ್ ಸಲ್ಲಿಸಿದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್..

ಗಣಿ ಗುತ್ತಿಗೆ ವಿವಾದ: ಹೈಕೋರ್ಟ್ ಆದೇಶ ಪ್ರಶ್ನಿಸಿ ಹೇಮಂತ್ ಸೊರೆನ್ ಸಲ್ಲಿಸಿದ ಮೇಲ್ಮನವಿ ಅಂಗೀಕರಿಸಿದ ಸುಪ್ರೀಂ
ಹೇಮಂತ್ ಸೊರೆನ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Nov 07, 2022 | 1:09 PM

ಗಣಿ ಗುತ್ತಿಗೆ ವಿಚಾರದಲ್ಲಿ ತನಿಖೆಗಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ನಿರ್ವಹಣೆಯನ್ನು ಸ್ವೀಕರಿಸುವ ಹೈಕೋರ್ಟ್ ಆದೇಶದ ವಿರುದ್ಧ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ (Jharkhand CM Hemant Soren)ಮತ್ತು ರಾಜ್ಯ ಸರ್ಕಾರದ ಮೇಲ್ಮನವಿಗಳನ್ನು ಸುಪ್ರೀಂಕೋರ್ಟ್ ಸೋಮವಾರ ಅಂಗೀಕರಿಸಿದೆ. ಇದು ಜಾರ್ಖಂಡ್ ಹೈಕೋರ್ಟ್‌ನ ಜೂನ್ 3 ರ ಆದೇಶವನ್ನು ರದ್ದುಗೊಳಿಸಿದೆ. ರಾಜ್ಯದ ಗಣಿಗಾರಿಕೆ ಸಚಿವರಾಗಿ ಗಣಿ ಗುತ್ತಿಗೆ ನೀಡಿದ ಆರೋಪವನ್ನು ಸೊರೆನ್ ಮೇಲಿದೆ. “ನಾವು ಈ ಎರಡು ಮೇಲ್ಮನವಿಗಳನ್ನು ಅನುಮತಿಸಿದ್ದೇವೆ ಮತ್ತು ಈ ಪಿಐಎಲ್​​ಗಳನ್ನು ನಿರ್ವಹಿಸಲಾಗುವುದಿಲ್ಲ ಎಂದು  ಜಾರ್ಖಂಡ್ ಹೈಕೋರ್ಟ್ 2022 ರ ಜೂನ್ 3 ರ ಆದೇಶವನ್ನು ರದ್ದುಗೊಳಿಸಿದ್ದೇವೆ” ಎಂದು ಸುಪ್ರೀಂ ಪೀಠ ಹೇಳಿದೆ.

ನ್ಯಾಯಮೂರ್ತಿಗಳಾದ ಯು ಯು ಲಲಿತ್, ಎಸ್ ಆರ್ ಭಟ್ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಆಗಸ್ಟ್ 17 ರಂದು ಜಾರ್ಖಂಡ್ ಸರ್ಕಾರ ಮತ್ತು ಸೊರೆನ್ ಅವರ ಪ್ರತ್ಯೇಕ ಮನವಿಗಳ ಮೇಲೆ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಗಣಿ ಗುತ್ತಿಗೆ ವಿಚಾರದಲ್ಲಿ ಸೊರೆನ್ ವಿರುದ್ಧ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಗೆ ಸುಪ್ರೀಂಕೋರ್ಟ್ ಈ ಹಿಂದೆ ತಡೆಯಾಜ್ಞೆ ನೀಡಿತ್ತು.

ಗಣಿ ಗುತ್ತಿಗೆ ವಿಚಾರದಲ್ಲಿ ಸೊರೆನ್ ವಿರುದ್ಧ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಈ ಹಿಂದೆ ತಡೆಯಾಜ್ಞೆ ನೀಡಿತ್ತು.

ರಾಜ್ಯದ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಅವರ ಸಹಚರರಿಗೆ ಸಂಬಂಧಿಸಿದ ಶೆಲ್ ಕಂಪನಿಗಳಿಗೆ ಸಂಬಂಧಿಸಿದಂತೆ ಜಾರ್ಖಂಡ್ ಹೈಕೋರ್ಟ್‌ನ ಪಿಐಎಲ್ ನಿರ್ವಹಣೆಯ ಆದೇಶವನ್ನು ಪ್ರಶ್ನಿಸಿ ಜಾರ್ಖಂಡ್ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ರಜಾ ಕಾಲ ಅರ್ಜಿಯನ್ನು (ಎಸ್‌ಎಲ್‌ಪಿ) ಸಲ್ಲಿಸಿತ್ತು.

Published On - 12:32 pm, Mon, 7 November 22

ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ