AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಖಿಂಪುರ ಖೇರಿ ಪ್ರಕರಣ: ಸಚಿವರು ರೈತರಿಗೆ ಬೆದರಿಕೆ ಹಾಕಬಾರದಿತ್ತು, ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

Lakhimpur Kheri case ರಾಜಕೀಯ ವ್ಯಕ್ತಿಗಳು ಸಭ್ಯ ಭಾಷೆಯಲ್ಲಿ ಸಾರ್ವಜನಿಕ ಹೇಳಿಕೆಗಳನ್ನು ನೀಡಬೇಕು. ಅವರು ಸ್ಥಾನಮಾನ ಮತ್ತು ಹುದ್ದೆಯ ಘನತೆಗೆ ತಕ್ಕಂತೆ ನಡೆದುಕೊಳ್ಳಬೇಕು. ಕಾನೂನು ರೂಪಿಸುವವರನ್ನು ಕಾನೂನು ಉಲ್ಲಂಘಿಸುವವರಂತೆ ನೋಡಲಾಗುವುದಿಲ್ಲ" ಎಂದು ಹೈಕೋರ್ಟ್ ಹೇಳಿದೆ. 

ಲಖಿಂಪುರ ಖೇರಿ ಪ್ರಕರಣ: ಸಚಿವರು ರೈತರಿಗೆ ಬೆದರಿಕೆ ಹಾಕಬಾರದಿತ್ತು, ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್
ಲಖಿಂಪುರ ಖೇರಿ ಪ್ರಕರಣ
TV9 Web
| Edited By: |

Updated on: May 09, 2022 | 8:12 PM

Share

ದೆಹಲಿ: ಕಳೆದ ವರ್ಷ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ(Lakhimpur Kheri )ಪ್ರತಿಭಟನಾ ನಿರತ ರೈತರನ್ನು ಹತ್ಯೆಗೈದ ಆರೋಪ ಹೊತ್ತಿರುವ ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ (Ajay Mishra Teni) ಅವರ ಪುತ್ರ ಆಶಿಶ್ ಮಿಶ್ರಾ (Ashish Mishra) ಘಟನೆ ನಡೆಯುವ ಕೆಲವು ದಿನಗಳ ಮೊದಲು ರೈತರಿಗೆ ಬೆದರಿಕೆಯೊಡ್ಡುವ ಹೇಳಿಕೆ ನೀಡಬಾರದಿತ್ತು ಎಂದು ಹೇಳಿದ ಹೈಕೋರ್ಟ್ ಪ್ರಕರಣದ ಇತರ ನಾಲ್ವರು ಆರೋಪಿಗಳಿಗೆ ಸೋಮವಾರ ಜಾಮೀನು ತಿರಸ್ಕರಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರು ರೈತರಿಗೆ ಬೆದರಿಕೆ ಹಾಕದಿದ್ದರೆ ಹತ್ಯೆಗಳು ನಡೆಯುತ್ತಿರಲಿಲ್ಲ ಎಂದು ಉತ್ತರ ಪ್ರದೇಶ ಪೊಲೀಸ್ ವಿಶೇಷ ತನಿಖಾ ತಂಡದ ಆರೋಪ ಪಟ್ಟಿಯನ್ನು ಅಲಹಾಬಾದ್ ಹೈಕೋರ್ಟ್ ಉಲ್ಲೇಖಿಸಿದೆ. ಅಕ್ಟೋಬರ್ 3 ರಂದು ಲಖಿಂಪುರ ಖೇರಿಯಲ್ಲಿ ಕೃಷಿ ಕಾನೂನುಗಳ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ನಾಲ್ವರು ರೈತರು ಮತ್ತು ಪತ್ರಕರ್ತರ ಮೇಲೆ ಆಶಿಶ್ ಮಿಶ್ರಾ ವಾಹನ ಹರಿಸಿ ಹತ್ಯೆ ಮಾಡಿದ ಆರೋಪವಿದೆ. ಹತ್ಯೆಯ ನಂತರ ಭುಗಿಲೆದ್ದ ಹಿಂಸಾಚಾರದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಘಟನೆಗೆ ಒಂದು ಗಂಟೆಗೂ ಮುನ್ನ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಭಾಗವಹಿಸಿದ್ದ ಕುಸ್ತಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಆಶಿಶ್ ಮಿಶ್ರಾ ಅವರು ಅಪ್ಪ ಅಜಯ್ ಮಿಶ್ರಾ ಅವರ ಬೆಂಗಾವಲು ಪಡೆಯಲ್ಲಿದ್ದರು. ಈ ಬೆಂಗಾವಲು ಪಡೆ ಸಾಗುತ್ತಿದ್ದಂತೆ ರೈತರು ಕಪ್ಪು ಬಾವುಟ ಪ್ರದರ್ಶಿಸಿದ್ದರು. ಲಖಿಂಪುರ ಘಟನೆಗೆ ಕೆಲವು ದಿನಗಳ ಮೊದಲು, ಅಜಯ್ ಮಿಶ್ರಾ ಅವರು ಆ ಪ್ರದೇಶದಲ್ಲಿ ಮಾಡಿದ ಭಾಷಣದಲ್ಲಿ, ರೈತರು ತಮ್ಮ ಪ್ರತಿಭಟನೆ ಕೈಬಿಡದಿದ್ದರೆ “ಎರಡು ನಿಮಿಷಗಳಲ್ಲಿ ಸರಿಪಡಿಸುವುದಾಗಿ” ಬೆದರಿಕೆ ಹಾಕಿದ್ದರು.

“ರಾಜಕೀಯ ವ್ಯಕ್ತಿಗಳು ಸಭ್ಯ ಭಾಷೆಯಲ್ಲಿ ಸಾರ್ವಜನಿಕ ಹೇಳಿಕೆಗಳನ್ನು ನೀಡಬೇಕು. ಅವರು ಸ್ಥಾನಮಾನ ಮತ್ತು ಹುದ್ದೆಯ ಘನತೆಗೆ ತಕ್ಕಂತೆ ನಡೆದುಕೊಳ್ಳಬೇಕು. ಕಾನೂನು ರೂಪಿಸುವವರನ್ನು ಕಾನೂನು ಉಲ್ಲಂಘಿಸುವವರಂತೆ ನೋಡಲಾಗುವುದಿಲ್ಲ” ಎಂದು ಹೈಕೋರ್ಟ್ ಹೇಳಿದೆ.  ರೈತರ ಪ್ರತಿಭಟನೆ ನಡುವೆಯೇ ನಿರ್ಬಂಧಗಳ ಹೊರತಾಗಿಯೂ ಆ ಪ್ರದೇಶದಲ್ಲಿ ಕಾರ್ಯಕ್ರಮಕ್ಕೆ ಹಾಜರಾಗಲು ಆಯ್ಕೆ ಮಾಡಿದ ಉಪಮುಖ್ಯಮಂತ್ರಿಯವರ ಬಗ್ಗೆಯೂ ನ್ಯಾಯಾಲಯ ಕಟುವಾಗಿ ಪ್ರತಿಕ್ರಿಯಿಸಿತು.

“ಉಪಮುಖ್ಯಮಂತ್ರಿ ಅವರಿಗೆ ಈ ಪ್ರದೇಶದಲ್ಲಿ ನಿಷೇಧಾಜ್ಞೆಗಳ ಬಗ್ಗೆ ತಿಳಿದಿರುವುದಿಲ್ಲ ಎಂದು ನಾವು ನಂಬಲು ಸಾಧ್ಯವಿಲ್ಲ. ಆದರೂ ಅವರು ಆ ಪ್ರದೇಶದಲ್ಲಿ ನಡೆದ ಕುಸ್ತಿ ಸ್ಪರ್ಧೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ಒಪ್ಪಿದ್ದಾರೆ” ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ
Image
LakhimpurKheri Result ರೈತರ ಪ್ರತಿಭಟನೆಗಳ ಮೂಲಕ ಸುದ್ದಿಯಾಗಿದ್ದ ಲಖೀಂಪುರ ಖೇರಿಯ ಎಲ್ಲ ಕ್ಷೇತ್ರಗಳಲ್ಲಿಯೂ ಬಿಜೆಪಿ ಮುನ್ನಡೆ

ಪ್ರಮುಖ ಆರೋಪಿಯಾಗಿರುವ ಆಶಿಶ್ ಮಿಶ್ರಾ ಇತ್ತೀಚೆಗೆ ಜಾಮೀನು ರದ್ದುಗೊಳಿಸಿದ ನಂತರ ಜೈಲಿಗೆ ಮರಳಿದ್ದರು. ಫೆಬ್ರವರಿ 10 ರಂದು ಅವರಿಗೆ ಜಾಮೀನು ನೀಡಿದ್ದ ಅಲಹಾಬಾದ್ ಹೈಕೋರ್ಟ್ ಇಂದು ಆರೋಪಿಗಳು ಪ್ರಭಾವಿಗಳಾಗಿದ್ದು, ಸಾಕ್ಷ್ಯವನ್ನು ನಾಶಪಡಿಸಬಹುದು ಎಂದು ಹೇಳಿದೆ. “ಪ್ರಮುಖ ಆರೋಪಿಗಳು ಮತ್ತು ಸಹ ಆರೋಪಿಗಳು ಅತ್ಯಂತ ಪ್ರಭಾವಿ ಕುಟುಂಬಗಳಿಂದ ಬಂದವರು. ಅವರು ಸಾಕ್ಷ್ಯವನ್ನು ಹಾಳುಮಾಡಬಹುದು” ಎಂದು ಹೈಕೋರ್ಟ್ ಹೇಳಿದೆ.

ಸೋಮವಾರ ಹೊಸದಾಗಿ ಆಶಿಶ್ ಮಿಶ್ರಾ ಅವರ ಜಾಮೀನು ಅರ್ಜಿಯ ವಿಚಾರಣೆ ವೇಳೆ, ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠದ ನ್ಯಾಯಮೂರ್ತಿ ಕೃಷ್ಣ ಪಹಲ್, ಆರೋಪಿಗಳಿಗೆ ಜಾಮೀನು ನಿರಾಕರಿಸಿದ್ದು ಮೇ 25 ರೊಳಗೆ ಅರ್ಜಿಯ ಬಗ್ಗೆ ತನ್ನ ಕಡೆಯನ್ನು ಹಾಜರುಪಡಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿತು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ