AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Take Yoga Break At Chair: ಕೇಂದ್ರ ಉದ್ಯೋಗಿಗಳಿಗೆ ಕುರ್ಚಿಯಲ್ಲಿ ಯೋಗ ಮಾಡಲು ಹೊಸ ಯೋಗ ಪ್ರೋಟೋಕಾಲ್ ಪರಿಚಯಿಸಿದ ಆಯುಷ್ ಸಚಿವಾಲಯ

ಕೇಂದ್ರ ಸರ್ಕಾರವು ತನ್ನ ಉದ್ಯೋಗಿಗಳಿಗೆ ಒತ್ತಡವನ್ನು ಕಡಿಮೆ ಮಾಡಲು, ರಿಫ್ರೆಶ್ ಮೂಡ್​​ನಲ್ಲಿರಲು ಮತ್ತು ತಮ್ಮ ಕೆಲಸದ ಮೇಲೆ ಗಮನ ನೀಡಲು 'ವೈ-ಬ್ರೇಕ್ - ಯೋಗ ಅಟ್ ಆಫೀಸ್ ಚೇರ್' ನ್ನು (Take Yoga Break At Chair) ತೆಗೆದುಕೊಳ್ಳುವಂತೆ ಕೇಳಿಕೊಂಡಿದೆ.

Take Yoga Break At Chair:  ಕೇಂದ್ರ ಉದ್ಯೋಗಿಗಳಿಗೆ ಕುರ್ಚಿಯಲ್ಲಿ ಯೋಗ ಮಾಡಲು ಹೊಸ ಯೋಗ ಪ್ರೋಟೋಕಾಲ್ ಪರಿಚಯಿಸಿದ ಆಯುಷ್ ಸಚಿವಾಲಯ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jun 13, 2023 | 1:59 PM

Share

ದೆಹಲಿ: ಕೇಂದ್ರ ಸರ್ಕಾರವು ತನ್ನ ಉದ್ಯೋಗಿಗಳಿಗೆ ಒತ್ತಡವನ್ನು ಕಡಿಮೆ ಮಾಡಲು, ರಿಫ್ರೆಶ್ ಮೂಡ್​​ನಲ್ಲಿರಲು ಮತ್ತು ತಮ್ಮ ಕೆಲಸದ ಮೇಲೆ ಗಮನ ನೀಡಲು ‘ವೈ-ಬ್ರೇಕ್ – ಯೋಗ ಅಟ್ ಆಫೀಸ್ ಚೇರ್‘ ನ್ನು (Take Yoga Break At Chair) ತೆಗೆದುಕೊಳ್ಳುವಂತೆ ಕೇಳಿಕೊಂಡಿದೆ. ಕೇಂದ್ರ ಸಿಬ್ಬಂದಿ ಸಚಿವಾಲಯವು ಹೊರಡಿಸಿರುವ ಆದೇಶದಂತೆ ಎಲ್ಲಾ ಕೇಂದ್ರ ಸರ್ಕಾರದ ಸಚಿವಾಲಯಗಳು/ಇಲಾಖೆಗಳು ಕೆಲಸದ ಸ್ಥಳದಲ್ಲಿ ಉದ್ಯೋಗಿಗಳಿಗೆ ಈ ಹೊಸ ಯೋಗ ಪ್ರೋಟೋಕಾಲ್​​ನ್ನು ಅಳವಡಿಸಿಕೊಳ್ಳಲು ಮತ್ತು ಇದರ ಬಗ್ಗೆ ಜಾಗೃತಿ ಮೂಡಿಸುವಂತೆ ಮಾಡಲು ಆದೇಶ ನೀಡಿದೆ. ವೈ-ಬ್ರೇಕ್ ಅಟ್ ವರ್ಕ್‌ಪ್ಲೇಸ್​​ನ್ನು ಆಯುಷ್ ಸಚಿವಾಲಯವು ಪರಿಚಯಿಸಿದೆ, ಇದು ಕೆಲಸದ ಸ್ಥಳದಲ್ಲಿ ಒತ್ತಡ, ರಿಫ್ರೆಶ್ ಮೂಡ್​​ ಮತ್ತು ಕೆಲಸದ ಕಡೆ ಹೆಚ್ಚು ಗಮನ ನೀಡಲು ಅವಕಾಶ ಮಾಡುತ್ತದೆ ಎಂದು ಹೇಳಿದೆ. ಇದರಿಂದ ಉದ್ಯೋಗಿಗಳ ಆರೋಗ್ಯದ ಮೇಲೆ ಒಳ್ಳೆಯ ಪರಿಣಾಮವನ್ನು ಉಂಟು ಮಾಡುತ್ತದೆ. ಮೊರಾರ್ಜಿ ದೇಸಾಯಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯೋಗ ಮತ್ತು ಸಚಿವಾಲಯದ ಸಿಬ್ಬಂದಿಗಳಿಗೆ ಒತ್ತಡ ಕೆಲಸದ ನಡುವೆ ಯೋಗಾಭ್ಯಾಸ ಮಾಡಲು ಸಾಧ್ಯವಾಗದ ಕಾರಣ ಆಯುಷ್ ಈ ಹೊಸ ವೈಶಿಷ್ಟ್ಯಗಳನ್ನು ಪರಿಚಯಸಿದೆ.

ಅಧಿಕಾರಿಗಳು ಈಗ ತಮ್ಮ ಕಚೇರಿಯ ಕುರ್ಚಿಯಲ್ಲಿ ಕುಳಿತುಕೊಂಡು “ವೈ-ಬ್ರೇಕ್ ವರ್ಕ್‌ಪ್ಲೇಸ್ ಯೋಗ” ಎಂಬ ಅಲ್ಪಾವಧಿಯ ಯೋಗವನ್ನು ಕುರ್ಚಿಯಲ್ಲಿ ಅಭ್ಯಾಸ ಮಾಡುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಬಹುದು ಎಂದು ಜೂನ್ 12 ರಂದು (ಸೋಮವಾರ) ಆದೇಶದಲ್ಲಿ ತಿಳಿಸಲಾಗಿದೆ. ಯೋಗ ಅಟ್ ಚೇರ್​​ಗಳನ್ನು ತಮ್ಮ ಎಲ್ಲ ಉದ್ಯೋಗಿಗಳು ಅಳವಡಿಸಿಕೊಳ್ಳುವಂತೆ ಕೇಂದ್ರ ಸರ್ಕಾರವು ಆದೇಶ ನೀಡಿದ್ದು, ಈ ಬಗ್ಗೆ ಎಲ್ಲರಿಗೂ ಜಾಗೃತಿ ಮೂಡಿಸುವಂತೆ ಕೇಳಿಕೊಂಡಿದೆ.

ಇದನ್ನೂ ಓದಿ:Yoga: ಒತ್ತಡ ಹೆಚ್ಚಾದಾಗ ನೀವು ಈ 4 ಯೋಗಾಸನಗಳನ್ನು ಮಾಡಿ

ಈ ಚೇರ್​ ಬಗ್ಗೆ ಈ YouTube ಲಿಂಕ್​​​ನಲ್ಲಿ ನೋಡಬಹುದು https://youtu.be/1qQQ3yUjnyM, https://youtu.be/2zBEUqc7nCc, https://youtu.be/aqYJR8HnSJI, https://youtu.be/I8YBnxWjHbg, ಮತ್ತು ಯೋಗ ಪೋರ್ಟಲ್ ಈ YouTube ಲಿಂಕ್​ಗೆ ಹೋಗಿ https://yoga.ayush.gov.in/Y-Break/

ಇದು ಕೆಲಸದಿಂದ ವಿರಾಮವನ್ನು ತೆಗೆದುಕೊಳ್ಳುವ ಸಮಯದಲ್ಲಿ ಇದನ್ನು ಮಾಡಬಹುದು. ಇದು ಕೆಲವು ಸರಳ ಯೋಗ ಅಭ್ಯಾಸಗಳನ್ನು ಒಳಗೊಂಡಿದೆ, ಇದರಲ್ಲಿ ‘ಆಸನಗಳು’ (ಭಂಗಿಗಳು), ‘ಪ್ರಾಣಾಯಾಮ’ (ಉಸಿರಾಟದ ತಂತ್ರಗಳು) ಮತ್ತು ‘ಧ್ಯಾನ’ ಗಳನ್ನು ಒಳಗೊಂಡಿದೆ. ಇದನ್ನು ಪ್ರಖ್ಯಾತ ತಜ್ಞರು ಅಭಿವೃದ್ಧಿಪಡಿಸಲಾಗಿದೆ. ಈ ಬಗ್ಗೆ ಆಯುಷ್ ಸಚಿವಾಲಯದ ವೆಬ್‌ಸೈಟ್‌ನಲ್ಲಿ ವಿವರಗಳನ್ನು ನೀಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:57 am, Tue, 13 June 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!