AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ministry of External Affairs: ಬೇಹುಗಾರಿಕೆ ಆರೋಪದ ಮೇಲೆ ವಿದೇಶಾಂಗ ಸಚಿವಾಲಯದಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಬೇಹುಗಾರಿಕೆ ಆರೋಪದ ಮೇಲೆ ವಿದೇಶಾಂಗ ಸಚಿವಾಲಯದಲ್ಲಿ ಕೆಲಸ ಮಾಡುತ್ತಿದ್ದ ಚಾಲಕನನ್ನು ದೆಹಲಿಯ ಜವಾಹರ್ ಲಾಲ್ ನೆಹರು ಭವನದಲ್ಲಿ ಇಂದು ಬಂಧಿಸಲಾಗಿದೆ.

Ministry of External Affairs: ಬೇಹುಗಾರಿಕೆ ಆರೋಪದ ಮೇಲೆ ವಿದೇಶಾಂಗ ಸಚಿವಾಲಯದಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 18, 2022 | 6:33 PM

Share

ದೆಹಲಿ: ಬೇಹುಗಾರಿಕೆ ಆರೋಪದ ಮೇಲೆ ವಿದೇಶಾಂಗ ಸಚಿವಾಲಯದಲ್ಲಿ ಕೆಲಸ ಮಾಡುತ್ತಿದ್ದ ಚಾಲಕನನ್ನು ದೆಹಲಿಯ ಜವಾಹರ್ ಲಾಲ್ ನೆಹರು ಭವನದಲ್ಲಿ ಇಂದು ಬಂಧಿಸಲಾಗಿದೆ. ಆತ ಪೂನಂ ಶರ್ಮಾ ಎಂಬ ಮಹಿಳೆಯಂತೆ ವೇಷ ಮರೆಸಿಕೊಂಡು ಪಾಕಿಸ್ತಾನಿ ವ್ಯಕ್ತಿಗೆ ಹಣಕ್ಕಾಗಿ ದೇಶ ಗುಪ್ತ ಮಾಹಿತಿ ಮತ್ತು ದಾಖಲೆಗಳನ್ನು ವರ್ಗಾಯಿಸುತ್ತಿದ್ದ ಎಂದು ಹೇಳಲಾಗಿದೆ. ಇದೀಗ ಆರೋಪಿಯನ್ನು ಬಂಧಿಸಿರುವ ದೆಹಲಿ ಪೊಲೀಸರ ಅಪರಾಧ ವಿಭಾಗದ ಮೂಲಗಳು ಈ ಚಾಲಕ ಹನಿ ಟ್ರ್ಯಾಪ್ ಮೂಲಕ ದೇಶದ ಗುಪ್ತವಿಚಾರಗಳನ್ನು ಪಾಕಿಸ್ತಾನಕ್ಕೆ ನೀಡಲು ಪ್ರಯತ್ನಿಸುತ್ತಿದ್ದ ಹೇಳಿದೆ.

ಪಾಕಿಸ್ತಾನಕ್ಕೆ ಗೌಪ್ಯ ಮತ್ತು ಸೂಕ್ಷ್ಮ ಮಾಹಿತಿಯನ್ನು ರವಾನಿಸಿದ್ದಕ್ಕಾಗಿ ದೆಹಲಿ ಪೊಲೀಸರು ಭದ್ರತಾ ಏಜೆನ್ಸಿಗಳ ಸಹಾಯದಿಂದ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ (ಎಂಇಎ) ಕೆಲಸ ಮಾಡುತ್ತಿದ್ದ ಚಾಲಕನನ್ನು ಬಂಧಿಸಿದ್ದಾರೆ. ಚಾಲಕನನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಹನಿಟ್ರ್ಯಾಪ್ ಮಾಡಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. MEAನಲ್ಲಿ ಕೆಲಸ ಮಾಡುವ ಹೆಚ್ಚಿನ ಉದ್ಯೋಗಿಗಳು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಯೇ ಎಂದು ಕಂಡುಹಿಡಿಯಲು ಪೊಲೀಸ್ ಮತ್ತು ಗುಪ್ತಚರ ಸಂಸ್ಥೆಗಳು ತನಿಖೆಯನ್ನು ಪ್ರಾರಂಭಿಸಿದವು. ಆದರೆ MEA ನಿಂದ ಅಧಿಕೃತ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಇದನ್ನು ಓದಿ: ನೇಪಾಳಿ ಸನ್ಯಾಸಿಯಂತೆ ಬದುಕುತ್ತಿದ್ದ ಚೀನಾ ಮಹಿಳೆ, ಬೇಹುಗಾರಿಕೆ ಆರೋಪದ ಮೇಲೆ ಬಂಧನ

ಆಗಸ್ಟ್‌ನಲ್ಲಿ ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ 46 ವರ್ಷದ ವ್ಯಕ್ತಿಯನ್ನು ರಾಜಸ್ಥಾನ ಪೊಲೀಸರು ದೆಹಲಿಯಲ್ಲಿ ಬಂಧಿಸಿದ್ದರು ಎಂಬುದು ಗಮನಿಸಬೇಕಾದ ಸಂಗತಿ. ಈ ವ್ಯಕ್ತಿ 2016ರಲ್ಲಿ ಭಾರತೀಯ ಪೌರತ್ವ ಪಡೆದಿದ್ದರು. ಭಗ್ಚಂದ್ ಎಂದು ಗುರುತಿಸಲಾಗಿರುವ ಈ ಗೂಢಚಾರಿ ಪಾಕಿಸ್ತಾನದಲ್ಲಿ ಹುಟ್ಟಿದ್ದು, 1998ರಲ್ಲಿ ಕುಟುಂಬ ಸಮೇತ ದೆಹಲಿಗೆ ಬಂದಿದ್ದ. 46 ವರ್ಷದ ಈತ 2016ರಲ್ಲಿ ಭಾರತೀಯ ಪೌರತ್ವ ಪಡೆದು ದೆಹಲಿಯಲ್ಲಿ ಟ್ಯಾಕ್ಸಿ ಚಾಲಕ ಮತ್ತು ಕಾರ್ಮಿಕನಾಗಿ ಕೆಲಸ ಮಾಡಲು ಆರಂಭಿಸಿದ್ದ. ವರದಿಯ ಪ್ರಕಾರ ಭಾಗ್ಚಂದ್ ಪಾಕಿಸ್ತಾನದಲ್ಲಿರುವ ತನ್ನ ಸಂಬಂಧಿಕರ ಮೂಲಕ ತನ್ನ ಹ್ಯಾಂಡ್ಲರ್‌ಗಳೊಂದಿಗೆ ಸಂಪರ್ಕದಲ್ಲಿದ್ದನು.

ಬೌದ್ಧ ಸನ್ಯಾಸಿ ಎಂದ ಚೀನಾದ ಗೂಢಚಾರಿ ಬಂಧನ 

ಅಕ್ಟೋಬರ್‌ನಲ್ಲಿ, ‘ಬೌದ್ಧ ಸನ್ಯಾಸಿ’ ಎಂದು ಹೇಳಿಕೊಂಡ 50 ವರ್ಷದ ಚೀನಾ ಮಹಿಳೆಯನ್ನು ಚೀನಾದ ಗೂಢಚಾರಿಕೆ ಎಂದು ಶಂಕಿಸಿ ದೆಹಲಿ ಪೊಲೀಸರು ಬಂಧಿಸಿದ್ದರು. ಸುದ್ದಿ ಸಂಸ್ಥೆ IANS ಪ್ರಕಾರ, ಕೈ ರುವೋ ಎಂದು ಗುರುತಿಸಲ್ಪಟ್ಟ ಮಹಿಳೆ, “ಚೀನಾದ ಕಮ್ಯುನಿಸ್ಟ್ ನಾಯಕರು ತನ್ನನ್ನು ಕೊಲ್ಲಲು ಬಯಸಿದ್ದರು ಮತ್ತು ಆದ್ದರಿಂದ ಅವರು ಬಂದಿದ್ದಾರೆ ಎಂದು ಹೇಳುವ ಮೂಲಕ ತನಿಖಾಧಿಕಾರಿಗಳನ್ನು ದಾರಿತಪ್ಪಿಸಲು ಪ್ರಯತ್ನಿಸಿದರು. ಅವಳು ನೇಪಾಳದ ಪ್ರಜೆಯಾದ ಡೋಲಾ ಲಾಮಾ ಎಂದು ಭಾರತದಲ್ಲಿ ವಾಸಿಸುತ್ತಿದ್ದಳು. ನಂತರ ಪರಿಶೀಲನೆ ನಡೆಸಿದಾಗ ಆಕೆಯ ಹೆಸರಿನಲ್ಲಿ ಚೈನೀಸ್ ಪಾಸ್ ಪೋರ್ಟ್ ಇದ್ದು, ಆ ಪಾಸ್ ಪೋರ್ಟ್ ಆಧಾರದ ಮೇಲೆ ಆಕೆ ಭಾರತದಲ್ಲಿ ನೆಲೆಸಿದ್ದಾಳೆ ಎಂದು ಪೊಲೀಸರಿಗೆ ತಿಳಿದು ಬಂದಿದೆ.

Published On - 5:05 pm, Fri, 18 November 22

Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ