AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂ ಬಿಜೆಪಿ ಸಂಸದರ ಮನೆಯಲ್ಲಿ ಅಪ್ರಾಪ್ತ ಬಾಲಕನ ಶವ ಪತ್ತೆ, ತನಿಖೆ ಶುರು

ಅಸ್ಸಾಂನ ಕ್ಯಾಚ್ಯಾರ್ ಜಿಲ್ಲೆಯ ಸಂಸದ ರಾಜ್​ದೀಪ್ ರಾಯ್ ಅವರ ನಿವಾಸದಲ್ಲಿ ಮನೆಗೆಲಸದವರ ಮಗ ಶವವಾಗಿ ಪತ್ತೆಯಾಗಿದ್ದು, ತನಿಖೆ ಶುರುವಾಗಿದೆ. ನೇಣುಬಿಗಿದ ಸ್ಥಿತಿಯಲ್ಲಿ 10 ವರ್ಷದ ಬಾಲಕನ ಶವ ಪತ್ತೆಯಾಗಿದೆ ಎಂದು ಕ್ಯಾಚಾರ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಬ್ರತಾ ಸೇನ್ ಪಿಟಿಐಗೆ ತಿಳಿಸಿದ್ದಾರೆ. ಸಂತ್ರಸ್ತೆಯ ತಾಯಿ ಬಿಜೆಪಿ ನಾಯಕನ ಮನೆಯಲ್ಲಿ ಎರಡೂವರೆ ವರ್ಷಗಳಿಂದ ಮನೆಗೆಲಸದವಳಾಗಿ ಕೆಲಸ ಮಾಡುತ್ತಿದ್ದಳು ಮತ್ತು ಅವರು ಮೂಲತಃ ಧೋಲೈ ಪ್ರದೇಶದವರು ಎಂದು ಅವರು ಹೇಳಿದರು.

ಅಸ್ಸಾಂ ಬಿಜೆಪಿ ಸಂಸದರ ಮನೆಯಲ್ಲಿ ಅಪ್ರಾಪ್ತ ಬಾಲಕನ ಶವ ಪತ್ತೆ, ತನಿಖೆ ಶುರು
ರಾಜ್​ದೀಪ್ ರಾಯ್Image Credit source: Hindustan Times
ನಯನಾ ರಾಜೀವ್
|

Updated on: Aug 27, 2023 | 9:24 AM

Share

ಅಸ್ಸಾಂನ ಕ್ಯಾಚ್ಯಾರ್ ಜಿಲ್ಲೆಯ ಸಂಸದ ರಾಜ್​ದೀಪ್ ರಾಯ್ ಅವರ ನಿವಾಸದಲ್ಲಿ ಮನೆಗೆಲಸದವರ ಮಗ ಶವವಾಗಿ ಪತ್ತೆಯಾಗಿದ್ದು, ತನಿಖೆ ಶುರುವಾಗಿದೆ. ನೇಣುಬಿಗಿದ ಸ್ಥಿತಿಯಲ್ಲಿ 10 ವರ್ಷದ ಬಾಲಕನ ಶವ ಪತ್ತೆಯಾಗಿದೆ ಎಂದು ಕ್ಯಾಚಾರ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಬ್ರತಾ ಸೇನ್ ಪಿಟಿಐಗೆ ತಿಳಿಸಿದ್ದಾರೆ. ಸಂತ್ರಸ್ತೆಯ ತಾಯಿ ಬಿಜೆಪಿ ನಾಯಕನ ಮನೆಯಲ್ಲಿ ಎರಡೂವರೆ ವರ್ಷಗಳಿಂದ ಮನೆಗೆಲಸದವಳಾಗಿ ಕೆಲಸ ಮಾಡುತ್ತಿದ್ದಳು ಮತ್ತು ಅವರು ಮೂಲತಃ ಧೋಲೈ ಪ್ರದೇಶದವರು ಎಂದು ಅವರು ಹೇಳಿದರು.

ಬಾಲಕ 5ನೇ ತರಗತಿಯಲ್ಲಿ ಓದುತ್ತಿದ್ದ, ಶವವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಮರಣೋತ್ತರ ಪರೀಕ್ಷೆಗಾಗಿ ಸಿಲ್ಚಾರ್ ವೈದ್ಯಕೀಯ ಕಾಳೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವು ವರ್ಷಗಳಿಂದ ತನ್ನ ತಾಯಿ ಮತ್ತು ಅಕ್ಕನೊಂದಿಗೆ ಸಂಸದರ ಮನೆಯಲ್ಲಿ ವಾಸಿಸುತ್ತಿದ್ದ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ತನ್ನ ಇಬ್ಬರು ಮಕ್ಕಳ ಉತ್ತಮ ಶಿಕ್ಷಣಕ್ಕಾಗಿ, ಮಹಿಳೆ ಅವರನ್ನು ಕೆಲವು ವರ್ಷಗಳ ಹಿಂದೆ ಸಿಲ್ಚಾರ್‌ಗೆ ಕರೆತಂದರು. ಬಾಗಿಲು ಒಳಗಿನಿಂದ ಮುಚ್ಚಿತ್ತು, ಬಾಗಿಲು ಮುರಿದು ಒಳಗೆ ತೆರಳಿದಾಗ ಬಾಲಕ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ, ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಮತ್ತಷ್ಟು ಓದಿ: ಛತ್ತೀಸ್​ಗಢ: 5 ವರ್ಷಗಳಿಂದ ನಾಪತ್ತೆಯಾಗಿದ್ದ ಸುದ್ದಿ ನಿರೂಪಕಿಯ ಹುಡುಕಾಟದ ವೇಳೆ ಶವ ಪತ್ತೆ

ಪ್ರಾಥಮಿಕ ತನಿಖೆಯಲ್ಲಿ ಇದು ಆತ್ಮಹತ್ಯೆ ಎಂದು ಕಂಡುಬರುತ್ತಿದೆ, ವಿಡಿಯೋ ಗೇಮ್ ಆಡಲು ಮೊಬೈಲ್ ಕೇಳಿದಾಗ ತಾಯಿ ಕೊಡದಿದ್ದಕ್ಕೆ ಕೋಪಗೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ತಿಳಿದುಬಂದಿದೆ.

ಬಾಲಕನ ತಾಯಿ ಆತನ ಸಹೋದರಿಯೊಂದಿಗೆ ದಿನಸಿ ಖರೀದಿಸಲು ಹೋಗಿದ್ದರು, ಅವರು 40 ನಿಮಿಷಗಳ ಕಾಲ ಹೊರಗಿದ್ದರು. ಆ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ತಿಳಿದುಬಂದಿದೆ.

ಸಂಸದರು ಮಾತನಾಡಿ, ಬಾಲಕ ಓದಿನಲ್ಲಿ ತುಂಬಾ ಚುರುಕು, ಆತನ ಕೈಬರಹವನ್ನು ಕೂಡ ನೋಡಿದ್ದೇನೆ, ಈ ಸಾವು ನನಗೂ ನೋವು ತಂದಿದೆ, ವೈಯಕ್ತಿಕವಾಗಿ ನನಗೂ ನಷ್ಟವಾಗಿದೆ, ನಮ್ಮ ಕುಟುಂಬವು ಆತಂಕ್ಕೊಳಗಾಗಿದೆ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?