AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂ ಬಿಜೆಪಿ ಸಂಸದರ ಮನೆಯಲ್ಲಿ ಅಪ್ರಾಪ್ತ ಬಾಲಕನ ಶವ ಪತ್ತೆ, ತನಿಖೆ ಶುರು

ಅಸ್ಸಾಂನ ಕ್ಯಾಚ್ಯಾರ್ ಜಿಲ್ಲೆಯ ಸಂಸದ ರಾಜ್​ದೀಪ್ ರಾಯ್ ಅವರ ನಿವಾಸದಲ್ಲಿ ಮನೆಗೆಲಸದವರ ಮಗ ಶವವಾಗಿ ಪತ್ತೆಯಾಗಿದ್ದು, ತನಿಖೆ ಶುರುವಾಗಿದೆ. ನೇಣುಬಿಗಿದ ಸ್ಥಿತಿಯಲ್ಲಿ 10 ವರ್ಷದ ಬಾಲಕನ ಶವ ಪತ್ತೆಯಾಗಿದೆ ಎಂದು ಕ್ಯಾಚಾರ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಬ್ರತಾ ಸೇನ್ ಪಿಟಿಐಗೆ ತಿಳಿಸಿದ್ದಾರೆ. ಸಂತ್ರಸ್ತೆಯ ತಾಯಿ ಬಿಜೆಪಿ ನಾಯಕನ ಮನೆಯಲ್ಲಿ ಎರಡೂವರೆ ವರ್ಷಗಳಿಂದ ಮನೆಗೆಲಸದವಳಾಗಿ ಕೆಲಸ ಮಾಡುತ್ತಿದ್ದಳು ಮತ್ತು ಅವರು ಮೂಲತಃ ಧೋಲೈ ಪ್ರದೇಶದವರು ಎಂದು ಅವರು ಹೇಳಿದರು.

ಅಸ್ಸಾಂ ಬಿಜೆಪಿ ಸಂಸದರ ಮನೆಯಲ್ಲಿ ಅಪ್ರಾಪ್ತ ಬಾಲಕನ ಶವ ಪತ್ತೆ, ತನಿಖೆ ಶುರು
ರಾಜ್​ದೀಪ್ ರಾಯ್Image Credit source: Hindustan Times
ನಯನಾ ರಾಜೀವ್
|

Updated on: Aug 27, 2023 | 9:24 AM

Share

ಅಸ್ಸಾಂನ ಕ್ಯಾಚ್ಯಾರ್ ಜಿಲ್ಲೆಯ ಸಂಸದ ರಾಜ್​ದೀಪ್ ರಾಯ್ ಅವರ ನಿವಾಸದಲ್ಲಿ ಮನೆಗೆಲಸದವರ ಮಗ ಶವವಾಗಿ ಪತ್ತೆಯಾಗಿದ್ದು, ತನಿಖೆ ಶುರುವಾಗಿದೆ. ನೇಣುಬಿಗಿದ ಸ್ಥಿತಿಯಲ್ಲಿ 10 ವರ್ಷದ ಬಾಲಕನ ಶವ ಪತ್ತೆಯಾಗಿದೆ ಎಂದು ಕ್ಯಾಚಾರ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಬ್ರತಾ ಸೇನ್ ಪಿಟಿಐಗೆ ತಿಳಿಸಿದ್ದಾರೆ. ಸಂತ್ರಸ್ತೆಯ ತಾಯಿ ಬಿಜೆಪಿ ನಾಯಕನ ಮನೆಯಲ್ಲಿ ಎರಡೂವರೆ ವರ್ಷಗಳಿಂದ ಮನೆಗೆಲಸದವಳಾಗಿ ಕೆಲಸ ಮಾಡುತ್ತಿದ್ದಳು ಮತ್ತು ಅವರು ಮೂಲತಃ ಧೋಲೈ ಪ್ರದೇಶದವರು ಎಂದು ಅವರು ಹೇಳಿದರು.

ಬಾಲಕ 5ನೇ ತರಗತಿಯಲ್ಲಿ ಓದುತ್ತಿದ್ದ, ಶವವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಮರಣೋತ್ತರ ಪರೀಕ್ಷೆಗಾಗಿ ಸಿಲ್ಚಾರ್ ವೈದ್ಯಕೀಯ ಕಾಳೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವು ವರ್ಷಗಳಿಂದ ತನ್ನ ತಾಯಿ ಮತ್ತು ಅಕ್ಕನೊಂದಿಗೆ ಸಂಸದರ ಮನೆಯಲ್ಲಿ ವಾಸಿಸುತ್ತಿದ್ದ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ತನ್ನ ಇಬ್ಬರು ಮಕ್ಕಳ ಉತ್ತಮ ಶಿಕ್ಷಣಕ್ಕಾಗಿ, ಮಹಿಳೆ ಅವರನ್ನು ಕೆಲವು ವರ್ಷಗಳ ಹಿಂದೆ ಸಿಲ್ಚಾರ್‌ಗೆ ಕರೆತಂದರು. ಬಾಗಿಲು ಒಳಗಿನಿಂದ ಮುಚ್ಚಿತ್ತು, ಬಾಗಿಲು ಮುರಿದು ಒಳಗೆ ತೆರಳಿದಾಗ ಬಾಲಕ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ, ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಮತ್ತಷ್ಟು ಓದಿ: ಛತ್ತೀಸ್​ಗಢ: 5 ವರ್ಷಗಳಿಂದ ನಾಪತ್ತೆಯಾಗಿದ್ದ ಸುದ್ದಿ ನಿರೂಪಕಿಯ ಹುಡುಕಾಟದ ವೇಳೆ ಶವ ಪತ್ತೆ

ಪ್ರಾಥಮಿಕ ತನಿಖೆಯಲ್ಲಿ ಇದು ಆತ್ಮಹತ್ಯೆ ಎಂದು ಕಂಡುಬರುತ್ತಿದೆ, ವಿಡಿಯೋ ಗೇಮ್ ಆಡಲು ಮೊಬೈಲ್ ಕೇಳಿದಾಗ ತಾಯಿ ಕೊಡದಿದ್ದಕ್ಕೆ ಕೋಪಗೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ತಿಳಿದುಬಂದಿದೆ.

ಬಾಲಕನ ತಾಯಿ ಆತನ ಸಹೋದರಿಯೊಂದಿಗೆ ದಿನಸಿ ಖರೀದಿಸಲು ಹೋಗಿದ್ದರು, ಅವರು 40 ನಿಮಿಷಗಳ ಕಾಲ ಹೊರಗಿದ್ದರು. ಆ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ತಿಳಿದುಬಂದಿದೆ.

ಸಂಸದರು ಮಾತನಾಡಿ, ಬಾಲಕ ಓದಿನಲ್ಲಿ ತುಂಬಾ ಚುರುಕು, ಆತನ ಕೈಬರಹವನ್ನು ಕೂಡ ನೋಡಿದ್ದೇನೆ, ಈ ಸಾವು ನನಗೂ ನೋವು ತಂದಿದೆ, ವೈಯಕ್ತಿಕವಾಗಿ ನನಗೂ ನಷ್ಟವಾಗಿದೆ, ನಮ್ಮ ಕುಟುಂಬವು ಆತಂಕ್ಕೊಳಗಾಗಿದೆ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ