AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿದ್ದ ಲವರ್​​ ಭೇಟಿಯಾಗಲು 10 ಜೀವಂತ ಗುಂಡುಗಳ ಸಮೇತ ಬಂದ ಅಪ್ರಾಪ್ತೆ: ಮುಂದಾಗಿದ್ದೇನು?

ಉತ್ತರ ಪ್ರದೇಶದ ಗೋಂಡಾ ಜಿಲ್ಲೆಯ ವಿಭಾಗೀಯ ಜೈಲಿನಲ್ಲಿರುವ ತನ್ನ ಪ್ರಿಯಕರನನ್ನು ಭೇಟಿಯಾಗಲು ಬಂದಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಬಳಿ ಬರೋಬ್ಬರಿ 10 ಜೀವಂತ ಗುಂಡುಗಳು ಹಾಗೂ ನಕಲಿ ಆಧಾರ್ ಕಾರ್ಡ್ ಪತ್ತೆಯಾಗಿರುವ ಘಟನೆ ನಡೆದಿದೆ. ವಿಚಾರಣೆ ವೇಳೆ ಬಾಲಕಿ ತನ್ನ ನಿಜವಾದ ಗುರುತನ್ನು ಬಹಿರಂಗಪಡಿಸಿದ್ದಾಳೆ. ಪತ್ತೆಯಾದ ಗುಂಡುಗಳು ತನ್ನ ತಂದೆಯ ಪರವಾನಗಿ ಹೊಂದಿರುವ ಪಿಸ್ತೂಲ್‌ಗೆ ಸೇರಿದ್ದವು ಎಂದು ಆಕೆ ಪೊಲೀಸರಿಗೆ ತಿಳಿಸಿದ್ದಾಳೆ ಎನ್ನಲಾಗಿದೆ.

ಜೈಲಿನಲ್ಲಿದ್ದ ಲವರ್​​ ಭೇಟಿಯಾಗಲು 10 ಜೀವಂತ ಗುಂಡುಗಳ ಸಮೇತ ಬಂದ ಅಪ್ರಾಪ್ತೆ: ಮುಂದಾಗಿದ್ದೇನು?
ಜೈಲಿನಲ್ಲಿದ್ದ ಲವರ್​​ ಭೇಟಿಯಾಗಲು 10 ಜೀವಂತ ಗುಂಡುಗಳ ಸಮೇತ ಬಂದ ಅಪ್ರಾಪ್ತೆImage Credit source: NDTV
ಪ್ರಸನ್ನ ಹೆಗಡೆ
|

Updated on:Aug 09, 2026 | 8:47 AM

Share

ಮುಖ್ಯಾಂಶಗಳು

  • ಅಪ್ರಾಪ್ತ ಬಾಲಕಿಯ ಬಳಿ ಜೀವಂತ ಗುಂಡುಗಳು ಪತ್ತೆ
  • ಉತ್ತರ ಪ್ರದೇಶದ ಗೋಂಡಾದಲ್ಲಿ ನಡೆದಿರುವ ಘಟನೆ
  • ಪ್ರಿಯಕರನ ಭೇಟಿಯಾಗಲು ಜೈಲಿಗೆ ಬಂದಿದ್ದ ಬಾಲಕಿ

ಲಖನೌ, ಆಗಸ್ಟ್​​ 09: ಜೈಲಿನಲ್ಲಿದ್ದ ಪ್ರಿಯಕರನನ್ನು ಭೇಟಿಯಾಗಲು ಬಂದಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಬಳಿ 10 ಜೀವಂತ ಗುಂಡುಗಳು ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಗೋಂಡಾದಲ್ಲಿ ನಡೆದಿದೆ. ಬಾಲಕಿಯ ಬಳಿ ನಕಲಿ ಆಧಾರ್‌ ಕಾರ್ಡ್‌ ಹಾಗೂ ನಗದು ಹಣವೂ ಪತ್ತೆಯಾಗಿದ್ದು, ಆಕೆಯನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಗೋಂಡಾ ವಿಭಾಗೀಯ ಜೈಲಿನಲ್ಲಿರುವ ಹರಷು ಕಶ್ಯಪ್‌ ಎಂಬ ಕೈದಿಯನ್ನು ಭೇಟಿಯಾಗಲು ಬಾಲಕಿ ಬಂದಿದ್ದಳು ಎಂದು ಜೈಲರ್‌ ಅಫ್ತಾಬ್‌ ಆಲಂ ಅನ್ಸಾರಿ ತಿಳಿಸಿದ್ದಾರೆ.

ಬಾಲಕಿ, ಮತ್ತೋರ್ವ ವಶಕ್ಕೆ

ಜೈಲಿನ ಮುಖ್ಯ ದ್ವಾರದಲ್ಲಿ ಕಡ್ಡಾಯ ಭದ್ರತಾ ತಪಾಸಣೆ ನಡೆಸುವ ವೇಳೆ ಬಾಲಕಿ ನೀಡಿದ ಗುರುತಿನ ವಿವರಗಳಲ್ಲಿ ವ್ಯತ್ಯಾಸ ಕಂಡುಬಂದಿದೆ. ಆಕೆ ತನ್ನ ಆಧಾರ್‌ ಕಾರ್ಡ್‌ನಲ್ಲಿದ್ದ ಹೆಸರಿಗಿಂತ ಭಿನ್ನವಾದ ಹೆಸರನ್ನು ಅಧಿಕಾರಿಗಳಿಗೆ ತಿಳಿಸಿದ್ದಳು. ಇದರಿಂದ ಅನುಮಾನಗೊಂಡ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಬಾಲಕಿಯ ಜೇಬಿನಲ್ಲಿ 10 ಜೀವಂತ ಗುಂಡುಗಳು ಪತ್ತೆಯಾಗಿವೆ ಎಂದು ಜೈಲರ್‌ ತಿಳಿಸಿದ್ದಾರೆ. ಬಳಿಕ ಜೈಲು ಪೊಲೀಸ್‌ ಹೊರಠಾಣೆಯ ಉಸ್ತುವಾರಿಯನ್ನು ಸ್ಥಳಕ್ಕೆ ಕರೆಸಲಾಗಿದ್ದು, ಬಾಲಕಿ ಹಾಗೂ ಆಕೆಯೊಂದಿಗೆ ಬಂದಿದ್ದ ವ್ಯಕ್ತಿಯನ್ನು ವಶಪಡಿಸಿಕೊಂಡ ವಸ್ತುಗಳ ಸಮೇತ ಪೊಲೀಸರಿಗೆ ಒಪ್ಪಿಸಲಾಗಿದೆ.

ಇದನ್ನೂ ಓದಿ: ವಿದೇಶಿ ಉದ್ಯೋಗದ ಆಮಿಷ; ಪೋರ್ಚುಗಲ್‌ನಲ್ಲಿ ಭಾರತೀಯ ಯುವತಿಯನ್ನು ಬಿಯರ್ ಶಾಪ್ ಮಾಲೀಕನಿಗೆ ಮಾರಿದ ಏಜೆನ್ಸಿ!

ವಿಚಾರಣೆ ವೇಳೆ ಬಾಲಕಿ ತನ್ನ ನಿಜವಾದ ಗುರುತನ್ನು ಬಹಿರಂಗಪಡಿಸಿದ್ದಾಳೆ. ಪತ್ತೆಯಾದ ಗುಂಡುಗಳು ತನ್ನ ತಂದೆಯ ಪರವಾನಗಿ ಹೊಂದಿರುವ ಪಿಸ್ತೂಲ್‌ಗೆ ಸೇರಿದ್ದವು ಎಂದು ಆಕೆ ಪೊಲೀಸರಿಗೆ ತಿಳಿಸಿದ್ದಾಳೆ. ತಂದೆಗೆ ಬೇಗ ಕೋಪ ಬರುತ್ತದೆ. ತಾನು ಜೈಲಿನಲ್ಲಿರುವ ಪ್ರಿಯಕರನನ್ನು ಭೇಟಿಯಾಗಲು ಬಂದಿರುವ ವಿಷಯ ತಿಳಿದರೆ ಅವರು ಯಾವುದಾದರೂ ಅಪಾಯಕಾರಿ ನಿರ್ಧಾರ ಕೈಗೊಳ್ಳಬಹುದು ಎಂಬ ಭಯದಿಂದ ಪಿಸ್ತೂಲ್‌ನಲ್ಲಿದ್ದ ಗುಂಡುಗಳನ್ನು ತೆಗೆದುಕೊಂಡು ಬಂದಿದ್ದಾಗಿ ಬಾಲಕಿ ಹೇಳಿದ್ದಾಳೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಜೈಲರ್‌ ತಿಳಿಸಿದ್ದಾರೆ. ಗುಂಡುಗಳು ನಿಜವಾಗಿಯೂ ಆಕೆಯ ತಂದೆಯ ಪರವಾನಗಿ ಹೊಂದಿರುವ ಶಸ್ತ್ರಾಸ್ತ್ರಕ್ಕೆ ಸೇರಿದ್ದವೇ ಹಾಗೂ ನಕಲಿ ಗುರುತಿನ ದಾಖಲೆ ಆಕೆಗೆ ಹೇಗೆ ದೊರೆಯಿತು ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆ (BNS) ಹಾಗೂ ಶಸ್ತ್ರಾಸ್ತ್ರ ಕಾಯ್ದೆಯ (Arms Act) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 8:45 am, Sun, 9 August 26

Follow Us
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ
ಒಳ್ಳೆಯ ಸಿನಿಮಾಕ್ಕಾಗಿ ನನ್ನ ಬಳಿ ಸಾಕಷ್ಟು ಹಣ ಇದೆ: ನಿರ್ಮಾಪಕ ವೆಂಕಟ್
ಒಳ್ಳೆಯ ಸಿನಿಮಾಕ್ಕಾಗಿ ನನ್ನ ಬಳಿ ಸಾಕಷ್ಟು ಹಣ ಇದೆ: ನಿರ್ಮಾಪಕ ವೆಂಕಟ್
ಟಾಕ್ಸಿಕ್ ಟ್ರೇಲರ್​: ‘ನಾನೇ ಸಿನಿಮಾ ಮಾಡಿದಷ್ಟು ಖುಷಿಯಾಯ್ತು’ ಎಂದ ಶಿವಣ್ಣ
ಟಾಕ್ಸಿಕ್ ಟ್ರೇಲರ್​: ‘ನಾನೇ ಸಿನಿಮಾ ಮಾಡಿದಷ್ಟು ಖುಷಿಯಾಯ್ತು’ ಎಂದ ಶಿವಣ್ಣ
‘ನನ್ನ ಜೀವನದ ಸ್ಮರಣೀಯ ಅನುಭವ’: ಟಾಕ್ಸಿಕ್ ಚಿತ್ರದ ಬಗ್ಗೆ ನಟ ಅಕ್ಷಯ್ ಓಬೆರಾ
‘ನನ್ನ ಜೀವನದ ಸ್ಮರಣೀಯ ಅನುಭವ’: ಟಾಕ್ಸಿಕ್ ಚಿತ್ರದ ಬಗ್ಗೆ ನಟ ಅಕ್ಷಯ್ ಓಬೆರಾ
‘ಆಲ್​ ದಿ ಬೆಸ್ಟ್​ ಟಾಕ್ಸಿಕ್’: ಟ್ರೈಲರ್​ ಲಾಂಚ್ ಮಾಡಿದ ಶಿವಣ್ಣ
‘ಆಲ್​ ದಿ ಬೆಸ್ಟ್​ ಟಾಕ್ಸಿಕ್’: ಟ್ರೈಲರ್​ ಲಾಂಚ್ ಮಾಡಿದ ಶಿವಣ್ಣ
ಕಾಂಗ್ರೆಸ್ ಅಸಮಾಧಾನಿತ ಶಾಸಕರಿಗೆ ಕುಮಾರಸ್ವಾಮಿ ಓಪರ್ ಆಫರ್!
ಕಾಂಗ್ರೆಸ್ ಅಸಮಾಧಾನಿತ ಶಾಸಕರಿಗೆ ಕುಮಾರಸ್ವಾಮಿ ಓಪರ್ ಆಫರ್!
LIVE: ‘ಟಾಕ್ಸಿಕ್’ ಸಿನಿಮಾ ಟ್ರೈಲರ್ ಬಿಡುಗಡೆ ಇವೆಂಟ್ ಲೈವ್ ಇಲ್ಲಿ ನೋಡಿ
LIVE: ‘ಟಾಕ್ಸಿಕ್’ ಸಿನಿಮಾ ಟ್ರೈಲರ್ ಬಿಡುಗಡೆ ಇವೆಂಟ್ ಲೈವ್ ಇಲ್ಲಿ ನೋಡಿ
ಸಚಿವರನ್ನು ಬರಮಾಡಿಕೊಳ್ಳುವ ಭರದಲ್ಲಿ 1 ಲಕ್ಷ ರೂ. ಕಳೆದುಕೊಂಡ ಅಭಿಮಾನಿ
ಸಚಿವರನ್ನು ಬರಮಾಡಿಕೊಳ್ಳುವ ಭರದಲ್ಲಿ 1 ಲಕ್ಷ ರೂ. ಕಳೆದುಕೊಂಡ ಅಭಿಮಾನಿ
ಭಾರತದಲ್ಲಿ ಸ್ವಾವಲಂಬನೆಯ ನವ ಯುಗ ಆರಂಭ ಎಂದ ಪ್ರಧಾನಿ ಮೋದಿ
ಭಾರತದಲ್ಲಿ ಸ್ವಾವಲಂಬನೆಯ ನವ ಯುಗ ಆರಂಭ ಎಂದ ಪ್ರಧಾನಿ ಮೋದಿ