AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲವರ್ ಜೊತೆ ರಾತ್ರಿ ಲಾಡ್ಜ್​ನಲ್ಲಿದ್ದ ಅಪ್ರಾಪ್ತ ಬಾಲಕಿ ಮನೆಗೆ ಬಂದಕೂಡಲೆ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಅಪ್ರಾಪ್ತ ಬಾಲಕಿಯು ಪುರುಷನೊಬ್ಬನೊಂದಿಗೆ ಲಾಡ್ಜ್‌ನಲ್ಲಿ ರಾತ್ರಿ ಕಳೆಯುತ್ತಾಳೆ. ಆದರೆ, ಅಲ್ಲಿಂದ ಹಿಂದಿರುಗಿದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದಕ್ಕೆ ಕಾರಣವೇನೆಂಬುದರ ವಿವರ ಇಲ್ಲಿದೆ.

ಲವರ್ ಜೊತೆ ರಾತ್ರಿ ಲಾಡ್ಜ್​ನಲ್ಲಿದ್ದ ಅಪ್ರಾಪ್ತ ಬಾಲಕಿ ಮನೆಗೆ ಬಂದಕೂಡಲೆ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Sep 06, 2024 | 4:55 PM

Share

ನವದೆಹಲಿ: ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ನಡೆದ ಹೃದಯ ವಿದ್ರಾವಕ ಘಟನೆಯೊಂದರಲ್ಲಿ 19 ವರ್ಷದ ಯುವಕನ ಮೇಲೆ ಲೈಂಗಿಕ ಶೋಷಣೆಯ ಆರೋಪ ಹೊರಿಸಿ 17 ವರ್ಷದ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ದುರಂತ ಘಟನೆಯ ಬಳಿಕ ಯುವಕ ಮತ್ತು ಇಬ್ಬರು ಲಾಡ್ಜ್ ನೌಕರರು ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

ಸೋಮವಾರ ಅಪ್ರಾಪ್ತ ಬಾಲಕಿ 19 ವರ್ಷದ ಯುವಕನೊಂದಿಗೆ ಬಲ್ಲಾರ್‌ಪುರದ ಲಾಡ್ಜ್‌ನಲ್ಲಿ ರಾತ್ರಿ ಕಳೆದಿದ್ದಾಳೆ. ಮರುದಿನ ಬೆಳಿಗ್ಗೆ ಮನೆಗೆ ಹೋದ ಬಳಿಕ ಆಕೆಯ ಮನೆಯವರು ಪ್ರಶ್ನಿಸಿದಾಗ ಯುವಕನಿಂದ ರಾತ್ರಿ ತನಗೆ ಲೈಂಗಿಕ ಕಿರುಕುಳ ಉಂಟಾಯಿತು ಎಂದು ಆರೋಪಿಸಿದ್ದಾಳೆ. ನಂತರ ಆಕೆಯ ಮನೆಯವರು ಸ್ಥಳೀಯ ಅಧಿಕಾರಿಗಳಿಗೆ ಈ ಬಗ್ಗೆ ದೂರು ನೀಡಿದ್ದರು.

ಇದನ್ನೂ ಓದಿ: Crime News: ಮಗುವಿನ ಮೇಲೆ ಅತ್ಯಾಚಾರ, ಕೊಲೆ; ತನಗೆ ಗಲ್ಲು ಶಿಕ್ಷೆ ನೀಡಲು ಅಪರಾಧಿಯಿಂದ ನ್ಯಾಯಾಧೀಶರಿಗೆ ಮನವಿ

ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸರು 19 ವರ್ಷದ ಯುವಕನನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಬಂಧಿಸಿದ್ದಾರೆ. ಆದರೆ, ಈ ವಿಷಯ ಗೊತ್ತಾಗುತ್ತಿದ್ದಂತೆ ಗಾಬರಿಯಾದ ಆ ಬಾಲಕಿ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದರಿಂದ ಆಕೆಯ ಕುಟುಂಬದವರು ದುಃಖದಲ್ಲಿ ಮುಳುಗಿದ್ದಾರೆ.

ಅಪ್ರಾಪ್ತ ಬಾಲಕಿಯ ಸಾವಿನ ಹಿನ್ನಲೆಯಲ್ಲಿ ಪೊಲೀಸರು ಲಾಡ್ಜ್ ಮಾಲೀಕ ಹಾಗೂ ಮ್ಯಾನೇಜರ್ ನನ್ನು ಬಂಧಿಸಿದ್ದಾರೆ. ಅಪ್ರಾಪ್ತರು ರೂಮಿನಲ್ಲಿ ಉಳಿದುಕೊಳ್ಳುವುದಕ್ಕೆ ಅನುಮತಿಸಿದ್ದಕ್ಕಾಗಿ ಅವರು ಆರೋಪವನ್ನು ಎದುರಿಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!