AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಭಯಾ ಮಾದರಿ ಕೇಸ್​: ಬಿಹಾರದಲ್ಲಿ ಚಲಿಸುತ್ತಿದ್ದ ಬಸ್​ನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

Gangrape: ಚಲಿಸುತ್ತಿದ್ದ ಬಸ್​ನಲ್ಲಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಹೃದಯ ವಿದ್ರಾವಕ ಘಟನೆ ಬಿಹಾರದಲ್ಲಿ ನಡೆದಿದೆ.

ನಿರ್ಭಯಾ ಮಾದರಿ ಕೇಸ್​: ಬಿಹಾರದಲ್ಲಿ ಚಲಿಸುತ್ತಿದ್ದ ಬಸ್​ನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ
BusImage Credit source: ANI
TV9 Web
| Edited By: |

Updated on:Jun 08, 2022 | 11:16 AM

Share

ಪಾಟ್ನಾ: ಚಲಿಸುತ್ತಿದ್ದ ಬಸ್​ನಲ್ಲಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಹೃದಯ ವಿದ್ರಾವಕ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬೆಟ್ಟಯಾದಲ್ಲಿ ಕೃತ್ಯನಡೆದಿದ್ದು, ಬಸ್‌ನಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಸಂತ್ರಸ್ತ ಬಾಲಕಿ ಪತ್ತೆಯಾಗಿದ್ದಳು. ಚಾಲಕ, ಕ್ಲೀನರ್ ಸೇರಿ ಮೂವರು ಸಾಮೂಹಿಕ ಅತ್ಯಾಚಾರ ನಡೆದಿದ್ದು,ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಖಾಸಗಿ ಬಸ್ ಜಪ್ತಿ ಮಾಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸಂತ್ರಸ್ತೆ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಾನು ಪಾಟ್ನಾಗೆ ಬಸ್ ಹತ್ತಿದ್ದೆ, ಆದರೆ ಬಸ್‌ನ ಚಾಲಕ, ಕ್ಲೀನರ್ ಮತ್ತು ಇನ್ನೊಬ್ಬ ವ್ಯಕ್ತಿ ತನ್ನನ್ನು ನೀರು ಕೊಟ್ಟು ಪ್ರಜ್ಞಾಹೀನಗೊಳಿಸಿದರು. ಮತ್ತು ಅತ್ಯಾಚಾರ ಎಸಗಿದರು ಎಂದು ಸಂತ್ರಸ್ತೆ ಹೇಳಿಕೆ ನೀಡಿದ್ದಾಳೆ.

ಸಂತ್ರಸ್ತ ಬಾಲಕಿಯ ಹೇಳಿಕೆ ಮೇರೆಗೆ ತಕ್ಷಣ ಕ್ರಮ ಕೈಗೊಂಡ ಪೊಲೀಸರು ಆರೋಪಿ ಚಾಲಕ ಮತ್ತು ಸಹಾಯಕನನ್ನು ಬಂಧಿಸಿದ್ದಾರೆ. ಘಟನೆ ನಡೆದ ಬಸ್ಸನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳಿಬ್ಬರನ್ನೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಬಾಲಕಿಯನ್ನು ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿದೆ ಮತ್ತು ಆಕೆಯ ವೈದ್ಯಕೀಯ ಪರೀಕ್ಷೆ ಮಾಡಲಾಗುತ್ತಿದೆ. ಬೆಟ್ಟಿಯಾ ಬಸ್ ನಿಲ್ದಾಣದಲ್ಲಿ ಪಾಟ್ನಾಗೆ ಹೋಗುವ ಬಸ್‌ನಿಂದ ಅಪ್ರಾಪ್ತೆಯನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ರಾತ್ರಿ ಪಾಟ್ನಾಗೆ ತೆರಳಲು ಆಕೆ ಬಸ್ ಹತ್ತಿದ್ದಳು, ಆದರೆ ಆಕೆಯನ್ನು ಒಬ್ಬಂಟಿಯಾಗಿ ನೋಡಿದ ಚಾಲಕ ಮತ್ತು ಸಹಾಯಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ನಂತರ ಬಸ್​ ಅನ್ನು ಮುಚ್ಚಿ ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಮಂಗಳವಾರ ಬೆಳಗ್ಗೆ ಅರೆಪ್ರಜ್ಞಾವಸ್ಥೆಯಲ್ಲಿದ್ದ ಸಂತ್ರಸ್ತ ಬಾಲಕಿಯನ್ನು ಸ್ಥಳೀಯರು ಬಸ್‌ನಿಂದ ಹೊರತೆಗೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ನಗರ ಠಾಣೆ ಮತ್ತು ಮಹಿಳಾ ಠಾಣೆಯ ತಂಡ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಇದೇ ವೇಳೆ ತಲೆಮರೆಸಿಕೊಂಡಿರುವ ಮೂರನೇ ಆರೋಪಿಯನ್ನು ಬಂಧಿಸಲು ಪೊಲೀಸರು ಸನ್ನದ್ಧರಾಗಿದ್ದಾರೆ. ಆದರೆ ಸಂತ್ರಸ್ತೆಯ ವೈದ್ಯಕೀಯ ವರದಿ ಮತ್ತು ಆರೋಪಿಯ ವಿಚಾರಣೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:13 am, Wed, 8 June 22

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ