ಚಲಿಸುವ ಕಾರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಜತೆಗಿದ್ದ ಸ್ನೇಹಿತೆ ಸಾವು

ಚಲಿಸುವ ಕಾರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಆಕೆಯ ಜೊತೆಗಿದ್ದ ಸ್ನೇಹಿತೆಯನ್ನು ವಾಹನದಿಂದ ಹೊರಗೆ ತಳ್ಳಿದ ಪರಿಣಾಮ ಸಾವನ್ನಪ್ಪಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳವಾರ ಸಂಜೆ ಆರೋಪಿಯು ಇಬ್ಬರು ಅಪ್ರಾಪ್ತರನ್ನು ಗ್ರೇಟರ್ ನೋಯ್ಡಾದಿಂದ ಕೆಲಸ ಕೊಡಿಸುವ ಭರವಸೆ ನೀಡಿ ಲಕ್ನೋಗೆ ಕರೆದುಕೊಂಡು ಹೋಗಿದ್ದ ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾಳೆ. ಪುರುಷರು ಬಿಯರ್ ಖರೀದಿಸಿ ಕಾರಿನಲ್ಲಿ ಮದ್ಯಪಾನ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಚಲಿಸುವ ಕಾರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಜತೆಗಿದ್ದ ಸ್ನೇಹಿತೆ ಸಾವು
ಕ್ರೈಂ
Image Credit source: The Hindu

Updated on: May 11, 2025 | 3:04 PM

ಉತ್ತರ ಪ್ರದೇಶ, ಮೇ 11: ಚಲಿಸುವ ಕಾರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಆಕೆಯ ಜೊತೆಗಿದ್ದ ಸ್ನೇಹಿತೆ(Freind)ಯನ್ನು ವಾಹನದಿಂದ ಹೊರಗೆ ತಳ್ಳಿದ ಪರಿಣಾಮ ಸಾವನ್ನಪ್ಪಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಮಂಗಳವಾರ ಸಂಜೆ ಆರೋಪಿಯು ಇಬ್ಬರು ಅಪ್ರಾಪ್ತರನ್ನು ಗ್ರೇಟರ್ ನೋಯ್ಡಾದಿಂದ ಕೆಲಸ ಕೊಡಿಸುವ ಭರವಸೆ ನೀಡಿ ಲಕ್ನೋಗೆ ಕರೆದುಕೊಂಡು ಹೋಗಿದ್ದ ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾಳೆ. ಪುರುಷರು ಬಿಯರ್ ಖರೀದಿಸಿ ಕಾರಿನಲ್ಲಿ ಮದ್ಯಪಾನ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಗ್ರೇಟರ್ ನೋಯ್ಡಾ ನಿವಾಸಿಗಳಾದ ಸಂದೀಪ್ ಮತ್ತು ಅಮಿತ್ ಮತ್ತು ಗಾಜಿಯಾಬಾದ್ ನಿವಾಸಿ ಗೌರವ್ ಎಂದು ಗುರುತಿಸಲಾದ ಕಾರಿನಲ್ಲಿದ್ದ ಅಪ್ರಾಪ್ತ ಬಾಲಕಿಯರು ಮತ್ತು ಪುರುಷರ ನಡುವೆ ಜಗಳ ನಡೆದಾಗ, ಮೀರತ್ ಜಿಲ್ಲೆಯಲ್ಲಿ ಒಬ್ಬರನ್ನು ಕಾರಿನಿಂದ ಹೊರಗೆ ತಳ್ಳಿದ್ದಾರೆ . ನಂತರ ಅವರು ಸಾವನ್ನಪ್ಪಿದ್ದಾರೆ.
ಕಾರಿನಲ್ಲಿದ್ದ ಅಪ್ರಾಪ್ತ ಬಾಲಕಿ ಮೇಲೆ ಮೂವರು ಆರೋಪಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ
ಹೊಸ ಪಾಡ್‌ಕಾಸ್ಟ್‌ನಲ್ಲಿ ಡೈವೋರ್ಸ್ ಬಗ್ಗೆ ಚರ್ಚಿಸಿದ ಮಿಚೆಲ್ ಒಬಾಮಾ
ಪಾಕಿಸ್ತಾನದಲ್ಲಿ ರೈಲು ಹೈಜಾಕ್;27 ಉಗ್ರರ ಹತ್ಯೆ, 155 ಒತ್ತೆಯಾಳುಗಳ ರಕ್ಷಣೆ
ಪಾಕಿಸ್ತಾನದಲ್ಲಿ ಉಗ್ರರಿಂದ ಪ್ಯಾಸೆಂಜರ್​​ ರೈಲು ಹೈಜಾಕ್; 11 ಸೈನಿಕರ ಹತ್ಯೆ
ಒಡಿಶಾ ವಿಧಾನಸಭೆಯಲ್ಲಿ ಬಿಜೆಪಿ, ಕಾಂಗ್ರೆಸ್ ಶಾಸಕರಿಂದ ಪರಸ್ಪರ ಹಲ್ಲೆ

ಆದರೆ ಮೀರತ್‌ನಿಂದ ಸುಮಾರು 100 ಕಿಲೋಮೀಟರ್ ಮುಂದಿರುವ ಬುಲಂದ್‌ಶಹರ್ ಜಿಲ್ಲೆಯ ಖುರ್ಜಾ ಸುತ್ತಮುತ್ತ ಆಕೆ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ. ಪೊಲೀಸರಿಗೆ ಮಾಹಿತಿ ನೀಡಿದ ನಂತರ, ಆರೋಪಿಯ ಕಿಯಾ ಸೆಲ್ಟೋಸ್ ಕಾರನ್ನು ಅಲಿಘರ್-ಬುಲಂದ್‌ಶಹರ್ ಹೆದ್ದಾರಿಯ ಬಳಿ ತಡೆಹಿಡಿಯಲಾಯಿತು, ಅಲ್ಲಿ ಎನ್‌ಕೌಂಟರ್ ನಡೆಯಿತು.

ಮತ್ತಷ್ಟು ಓದಿ:
ತರಕಾರಿ ಖರೀದಿಸಲು ಹೋದ ಬಾಲಕಿಯನ್ನು ಅಪಹರಿಸಿ, ವಾರಗಳ ಕಾಲ ಅತ್ಯಾಚಾರ

ಎನ್​ಕೌಂಟರ್ ಸಮಯದಲ್ಲಿ ಗೌರವ್ ಮತ್ತು ಸಂದೀಪ್ ಅವರ ಕಾಲಿಗೆ ಗುಂಡು ಹಾರಿಸಲಾಯಿತು. ಬುಲಂದ್​ಶೆಹರ್ ಎಸ್ಎಸ್ಪಿ ದಿನೇಶ್ ಕುಮಾರ್ ಸಿಂಗ್ ಅವರ ಪ್ರಕಾರ, ಎರಡು ಅಕ್ರಮ ಪಿಸ್ತೂಲ್‌ಗಳು, ಜೀವಂತ ಮತ್ತು ಖಾಲಿ ಕಾರ್ಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಬುಧವಾರ ಖುರ್ಜಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯಡಿಯಲ್ಲಿ ವಿವಿಧ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us