AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra: ಅಪ್ರಾಪ್ತೆ ಮೇಲೆ ಅತ್ಯಾಚಾರ; ದೂರು ದಾಖಲಿಸಿಕೊಳ್ಳಲು ಒಪ್ಪದ ಎರಡು ಪೊಲೀಸ್​ ಠಾಣೆಗಳು

ಬಾಲಕಿ ಶಿರಡಿಯಿಂದ ವಾಪಸ್​ ಬರುತ್ತಿದ್ದಳು. ಭಿವಂದಿ ಬೈಪಾಸ್​ ಬಳಿ  ರೈಲಿನಿಂದ ಇಳಿದುಕೊಂಡಳು. ನಂತರ ಕಲ್ಯಾಣ್​ಗೆ ತೆರಳಿ ಉಲ್ಲಾಸನಗರಕ್ಕೆ ಹೋಗುವ ಲೋಕಲ್​ ರೈಲನ್ನು ಹತ್ತಿದ್ದಳು. 

Maharashtra: ಅಪ್ರಾಪ್ತೆ ಮೇಲೆ ಅತ್ಯಾಚಾರ; ದೂರು ದಾಖಲಿಸಿಕೊಳ್ಳಲು ಒಪ್ಪದ ಎರಡು ಪೊಲೀಸ್​ ಠಾಣೆಗಳು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 12, 2021 | 8:06 PM

Share

ಮುಂಬೈ: 34 ವರ್ಷದ ಮಹಿಳೆಯರ ಭೀಕರ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ರಾಷ್ಟ್ರಾದ್ಯಂತ ಸುದ್ದಿ ಮಾಡಿದೆ. ಅದರ ಬೆನ್ನಲ್ಲೇ  ಅಪ್ರಾಪ್ತೆಯೊಬ್ಬಳ ಮೇಲೆ ರೇಪ್​ ನಡೆದಿರುವ ವಿಚಾರ ಇಂದು ಬೆಳಕಿಗೆ ಬಂದಿದೆ. ಇಂದು ಮಹಾರಾಷ್ಟ್ರದ ಉಲ್ಲಾಸನಗರದಲ್ಲಿ ದುರ್ಘಟನೆ ನಡೆದಿದ್ದು, 15ವರ್ಷದ ಬಾಲಕಿ ಸಂತ್ರಸ್ತೆ. ಉಲ್ಲಾಸನಗರದ ರೈಲ್ವೆ ಸ್ಟೇಶನ್​ ಆವರಣದಲ್ಲಿರುವ ರೈಲ್ವೆ ವಸತಿ ಗೃಹದಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.  ಈಗಾಗಲೇ ಆರೋಪಿಯನ್ನೂ ಬಂಧಿಸಲಾಗಿದ್ದು, ಪೊಕ್ಸೊ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.  

ಬಾಲಕಿ ಶಿರಡಿಯಿಂದ ವಾಪಸ್​ ಬರುತ್ತಿದ್ದಳು. ಭಿವಂದಿ ಬೈಪಾಸ್​ ಬಳಿ  ರೈಲಿನಿಂದ ಇಳಿದುಕೊಂಡಳು. ನಂತರ ಕಲ್ಯಾಣ್​ಗೆ ತೆರಳಿ ಉಲ್ಲಾಸನಗರಕ್ಕೆ ಹೋಗುವ ಲೋಕಲ್​ ರೈಲನ್ನು ಹತ್ತಿದ್ದಳು.  ಉಲ್ಲಾಸನಗರದಲ್ಲಿ ರಾತ್ರಿ 9ಗಂಟೆಗೆ ಅವಳು ಇಳಿದಾಗ ಆಕೆಗೆ ಇಬ್ಬರು ಸ್ನೇಹಿತರೂ ಸಿಕ್ಕಿದರು. ಮೂವರೂ ಸ್ಕೈವಾಕ್​​ನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ವ್ಯಕ್ತಿಯೊಬ್ಬ ಹತ್ತಿರ ಬಂದಿದ್ದಾನೆ. ಆತ ತನ್ನ ಬಳಿ ಇದ್ದ ಸುತ್ತಿಗೆಯಿಂದ ಬಾಲಕಿಯ ಸ್ನೇಹಿತರನ್ನು ಹೆದರಿಸಿದ. ಅವರಿಬ್ಬರೂ ಓಡಿದ ನಂತರ ಈಕೆಯನ್ನು ಅಪಹರಿಸಿ, ರೇಪ್​ ಮಾಡಿದ್ದಾನೆಂದು ರೈಲ್ವೆ ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ. ಆ ಬಾಲಕಿ ರಾತ್ರಿಯಿಡೀ ಸಂಕಷ್ಟಪಟ್ಟು, ಬೆಳಗ್ಗೆ ಅಲ್ಲಿಂದ ಪಾರಾಗಿದ್ದಾಳೆ. ನಂತರ ತನ್ನ ಸ್ನೇಹಿತೆಯೊಬ್ಬಳಿಗೆ ಕರೆ ಮಾಡಿ ವಿಷಯ ಮುಟ್ಟಿಸಿ, ಆ ಸ್ನೇಹಿತೆ ನಮಗೆ ತಿಳಿಸಿದಳು ಎಂದು ಕಮಿಷನರ್​ ಮಾಹಿತಿ ನೀಡಿದರು.

ದೂರು ದಾಖಲಿಸಿಕೊಳ್ಳಲು ಹಿಂದೇಟು ಬಾಲಕಿ ಅತ್ಯಾಚಾರಕ್ಕೆ ಒಳಗಾಗಿ ಕಷ್ಟಪಡುತ್ತಿದ್ದರೆ, ಎರಡು ಪೊಲೀಸ್ ಠಾಣೆಗಳಲ್ಲಿ ಅಧಿಕಾರಿಗಳು ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದು ನಿಜಕ್ಕೂ ವಿಷಾದನೀಯ. ಈ ಎರಡೂ ಠಾಣೆಗಳ ಸಿಬ್ಬಂದಿ, ಕ್ರೈಂ ನಮ್ಮ ಠಾಣೆ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿ ಪ್ರಕರಣ ದಾಖಲಿಸಲಿಲ್ಲ.  ಈ ಬಗ್ಗೆಯೂ ತನಿಖೆ ನಡೆಸುತ್ತೇವೆ. ಸದ್ಯ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿಂದ ಕೌನ್ಸಲಿಂಗ್​ಗೆ ಕರೆದೊಯ್ಯಲಾಗುತ್ತದೆ ಎಂದು ರೈಲ್ವೆ ಕಮಿಷನರ್​ ಖಾಲಿದ್​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Rachita Ram: ನಾಮಧಾರಿಯಾಗಿರುವ ಚಿತ್ರ ಹಂಚಿಕೊಂಡ ರಚಿತಾ ರಾಮ್; ಏನು ವಿಶೇಷ?

ಎಸ್​ಸಿ ಎಸ್​ಟಿಯ 52 ಶಾಸಕರಿದ್ದರೂ ಅಧಿಕಾರ ಹಿಡಿಯಲು ಆಗಲಿಲ್ಲ: ಮಾದಾರ ಚನ್ನಯ್ಯ ಸ್ವಾಮೀಜಿ ಬೇಸರ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!