AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra: ಅಪ್ರಾಪ್ತೆ ಮೇಲೆ ಅತ್ಯಾಚಾರ; ದೂರು ದಾಖಲಿಸಿಕೊಳ್ಳಲು ಒಪ್ಪದ ಎರಡು ಪೊಲೀಸ್​ ಠಾಣೆಗಳು

ಬಾಲಕಿ ಶಿರಡಿಯಿಂದ ವಾಪಸ್​ ಬರುತ್ತಿದ್ದಳು. ಭಿವಂದಿ ಬೈಪಾಸ್​ ಬಳಿ  ರೈಲಿನಿಂದ ಇಳಿದುಕೊಂಡಳು. ನಂತರ ಕಲ್ಯಾಣ್​ಗೆ ತೆರಳಿ ಉಲ್ಲಾಸನಗರಕ್ಕೆ ಹೋಗುವ ಲೋಕಲ್​ ರೈಲನ್ನು ಹತ್ತಿದ್ದಳು. 

Maharashtra: ಅಪ್ರಾಪ್ತೆ ಮೇಲೆ ಅತ್ಯಾಚಾರ; ದೂರು ದಾಖಲಿಸಿಕೊಳ್ಳಲು ಒಪ್ಪದ ಎರಡು ಪೊಲೀಸ್​ ಠಾಣೆಗಳು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 12, 2021 | 8:06 PM

Share

ಮುಂಬೈ: 34 ವರ್ಷದ ಮಹಿಳೆಯರ ಭೀಕರ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ರಾಷ್ಟ್ರಾದ್ಯಂತ ಸುದ್ದಿ ಮಾಡಿದೆ. ಅದರ ಬೆನ್ನಲ್ಲೇ  ಅಪ್ರಾಪ್ತೆಯೊಬ್ಬಳ ಮೇಲೆ ರೇಪ್​ ನಡೆದಿರುವ ವಿಚಾರ ಇಂದು ಬೆಳಕಿಗೆ ಬಂದಿದೆ. ಇಂದು ಮಹಾರಾಷ್ಟ್ರದ ಉಲ್ಲಾಸನಗರದಲ್ಲಿ ದುರ್ಘಟನೆ ನಡೆದಿದ್ದು, 15ವರ್ಷದ ಬಾಲಕಿ ಸಂತ್ರಸ್ತೆ. ಉಲ್ಲಾಸನಗರದ ರೈಲ್ವೆ ಸ್ಟೇಶನ್​ ಆವರಣದಲ್ಲಿರುವ ರೈಲ್ವೆ ವಸತಿ ಗೃಹದಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.  ಈಗಾಗಲೇ ಆರೋಪಿಯನ್ನೂ ಬಂಧಿಸಲಾಗಿದ್ದು, ಪೊಕ್ಸೊ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.  

ಬಾಲಕಿ ಶಿರಡಿಯಿಂದ ವಾಪಸ್​ ಬರುತ್ತಿದ್ದಳು. ಭಿವಂದಿ ಬೈಪಾಸ್​ ಬಳಿ  ರೈಲಿನಿಂದ ಇಳಿದುಕೊಂಡಳು. ನಂತರ ಕಲ್ಯಾಣ್​ಗೆ ತೆರಳಿ ಉಲ್ಲಾಸನಗರಕ್ಕೆ ಹೋಗುವ ಲೋಕಲ್​ ರೈಲನ್ನು ಹತ್ತಿದ್ದಳು.  ಉಲ್ಲಾಸನಗರದಲ್ಲಿ ರಾತ್ರಿ 9ಗಂಟೆಗೆ ಅವಳು ಇಳಿದಾಗ ಆಕೆಗೆ ಇಬ್ಬರು ಸ್ನೇಹಿತರೂ ಸಿಕ್ಕಿದರು. ಮೂವರೂ ಸ್ಕೈವಾಕ್​​ನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ವ್ಯಕ್ತಿಯೊಬ್ಬ ಹತ್ತಿರ ಬಂದಿದ್ದಾನೆ. ಆತ ತನ್ನ ಬಳಿ ಇದ್ದ ಸುತ್ತಿಗೆಯಿಂದ ಬಾಲಕಿಯ ಸ್ನೇಹಿತರನ್ನು ಹೆದರಿಸಿದ. ಅವರಿಬ್ಬರೂ ಓಡಿದ ನಂತರ ಈಕೆಯನ್ನು ಅಪಹರಿಸಿ, ರೇಪ್​ ಮಾಡಿದ್ದಾನೆಂದು ರೈಲ್ವೆ ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ. ಆ ಬಾಲಕಿ ರಾತ್ರಿಯಿಡೀ ಸಂಕಷ್ಟಪಟ್ಟು, ಬೆಳಗ್ಗೆ ಅಲ್ಲಿಂದ ಪಾರಾಗಿದ್ದಾಳೆ. ನಂತರ ತನ್ನ ಸ್ನೇಹಿತೆಯೊಬ್ಬಳಿಗೆ ಕರೆ ಮಾಡಿ ವಿಷಯ ಮುಟ್ಟಿಸಿ, ಆ ಸ್ನೇಹಿತೆ ನಮಗೆ ತಿಳಿಸಿದಳು ಎಂದು ಕಮಿಷನರ್​ ಮಾಹಿತಿ ನೀಡಿದರು.

ದೂರು ದಾಖಲಿಸಿಕೊಳ್ಳಲು ಹಿಂದೇಟು ಬಾಲಕಿ ಅತ್ಯಾಚಾರಕ್ಕೆ ಒಳಗಾಗಿ ಕಷ್ಟಪಡುತ್ತಿದ್ದರೆ, ಎರಡು ಪೊಲೀಸ್ ಠಾಣೆಗಳಲ್ಲಿ ಅಧಿಕಾರಿಗಳು ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದು ನಿಜಕ್ಕೂ ವಿಷಾದನೀಯ. ಈ ಎರಡೂ ಠಾಣೆಗಳ ಸಿಬ್ಬಂದಿ, ಕ್ರೈಂ ನಮ್ಮ ಠಾಣೆ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿ ಪ್ರಕರಣ ದಾಖಲಿಸಲಿಲ್ಲ.  ಈ ಬಗ್ಗೆಯೂ ತನಿಖೆ ನಡೆಸುತ್ತೇವೆ. ಸದ್ಯ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿಂದ ಕೌನ್ಸಲಿಂಗ್​ಗೆ ಕರೆದೊಯ್ಯಲಾಗುತ್ತದೆ ಎಂದು ರೈಲ್ವೆ ಕಮಿಷನರ್​ ಖಾಲಿದ್​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Rachita Ram: ನಾಮಧಾರಿಯಾಗಿರುವ ಚಿತ್ರ ಹಂಚಿಕೊಂಡ ರಚಿತಾ ರಾಮ್; ಏನು ವಿಶೇಷ?

ಎಸ್​ಸಿ ಎಸ್​ಟಿಯ 52 ಶಾಸಕರಿದ್ದರೂ ಅಧಿಕಾರ ಹಿಡಿಯಲು ಆಗಲಿಲ್ಲ: ಮಾದಾರ ಚನ್ನಯ್ಯ ಸ್ವಾಮೀಜಿ ಬೇಸರ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ