AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನಲ್ಲಿ ಬೈಕ್ ಓವರ್ ಟೇಕ್ ಮಾಡುವ ವಿಚಾರಕ್ಕೆ ಜಗಳ, ಕೊಲೆ, ಕೋಮುಗಲಭೆ

ಅಹಮದಾಬಾದ್ ಜಿಲ್ಲೆಯ ಧಂಧುಕಾದಲ್ಲಿ ನಡೆದ ಒಂದು ಸಣ್ಣ ವಾಗ್ವಾದವು ಅಂತಿಮವಾಗಿ ಇಡೀ ಪಟ್ಟಣವನ್ನೇ ಬೆಂಕಿಯ ಕೆನ್ನಾಲಿಗೆಗೆ ತಳ್ಳಿದ ಭೀಕರ ಘಟನೆಯಾಗಿ ಮಾರ್ಪಟ್ಟಿದೆ. ಕೇವಲ ಬೈಕ್ ಓವರ್‌ಟೇಕ್ ಮಾಡುವ ವಿಚಾರಕ್ಕೆ ಶುರುವಾದ ಕಿಡಿ, ಒಂದು ಜೀವವನ್ನು ಬಲಿಪಡೆದು ಕೋಮು ಉದ್ವಿಗ್ನತೆಗೆ ಕಾರಣವಾದ ಸುದ್ದಿ ಇಲ್ಲಿದೆ. ಘಟನೆಯ ವೇಳೆ ಧರ್ಮೇಶ್ ಮತ್ತು ಎದುರಾಳಿಗಳ ನಡುವಿನ ವಾಗ್ವಾದ ವಿಕೋಪಕ್ಕೆ ಹೋಗಿ, ಧರ್ಮೇಶ್‌ಗೆ ಚಾಕುವಿನಿಂದ ಇರಿಯಲಾಯಿತು. ಗಂಭೀರವಾಗಿ ಗಾಯಗೊಂಡ ಆತ ಸ್ಥಳದಲ್ಲೇ ಮೃತಪಟ್ಟ ಸುದ್ದಿ ಹರಡುತ್ತಿದ್ದಂತೆ ಪಟ್ಟಣದಲ್ಲಿ ಆಕ್ರೋಶದ ಅಲೆ ಎದ್ದಿತು. ಶಾಂತವಾಗಿದ್ದ ಧಂಧುಕಾ ಮಾರುಕಟ್ಟೆ ಕ್ಷಣಾರ್ಧದಲ್ಲಿ ರಣರಂಗವಾಯಿತು.

ಗುಜರಾತ್​ನಲ್ಲಿ  ಬೈಕ್ ಓವರ್ ಟೇಕ್ ಮಾಡುವ ವಿಚಾರಕ್ಕೆ ಜಗಳ, ಕೊಲೆ, ಕೋಮುಗಲಭೆ
ಸಾವು Image Credit source: Telangana Today
ನಯನಾ ರಾಜೀವ್
|

Updated on: Apr 19, 2026 | 9:56 AM

Share

ಅಹಮದಾಬಾದ್, ಏಪ್ರಿಲ್ 19: ರಸ್ತೆಯಲ್ಲಿ ಸಂಚರಿಸುವಾಗ ಸಾಮಾನ್ಯ ಎನಿಸುವ ‘ಓವರ್‌ಟೇಕಿಂಗ್’ ವಿಚಾರವು ಧಂಧುಕಾ ಪಟ್ಟಣದಲ್ಲಿ ರಕ್ತಪಾತಕ್ಕೆ ನಾಂದಿ ಹಾಡಿತು. 35 ವರ್ಷದ ಧರ್ಮೇಶ್ ಎಂಬ ಯುವಕ ಮತ್ತು ಇಬ್ಬರು ಹಿಂದೂಯೇತರ ಯುವಕರ ನಡುವೆ ಬೈಕ್ ಓವರ್‌ಟೇಕ್ ಮಾಡುವ ವಿಚಾರದಲ್ಲಿ ಮಾತಿನ ಚಕಮಕಿ ನಡೆಯಿತು. ಆದರೆ ಈ ಕ್ಷುಲ್ಲಕ ಕಾರಣವೇ ಅಂತಿಮವಾಗಿ ಕೊಲೆ(Murder)ಯಲ್ಲಿ ಅಂತ್ಯವಾಯಿತು. ಬಳಿಕ ಕೋಮುಗಲಭೆಗೆ ಕಾರಣವಾಯಿತು.

ವಾಗ್ವಾದ, ಹತ್ಯೆ ಮತ್ತು ಆಕ್ರೋಶ ಘಟನೆಯ ವೇಳೆ ಧರ್ಮೇಶ್ ಮತ್ತು ಎದುರಾಳಿಗಳ ನಡುವಿನ ವಾಗ್ವಾದ ವಿಕೋಪಕ್ಕೆ ಹೋಗಿ, ಧರ್ಮೇಶ್‌ಗೆ ಚಾಕುವಿನಿಂದ ಇರಿಯಲಾಯಿತು. ಗಂಭೀರವಾಗಿ ಗಾಯಗೊಂಡ ಆತ ಸ್ಥಳದಲ್ಲೇ ಮೃತಪಟ್ಟ ಸುದ್ದಿ ಹರಡುತ್ತಿದ್ದಂತೆ ಪಟ್ಟಣದಲ್ಲಿ ಆಕ್ರೋಶದ ಅಲೆ ಎದ್ದಿತು. ಶಾಂತವಾಗಿದ್ದ ಧಂಧುಕಾ ಮಾರುಕಟ್ಟೆ ಕ್ಷಣಾರ್ಧದಲ್ಲಿ ರಣರಂಗವಾಯಿತು.

ಬೆಂಕಿಗೆ ಆಹುತಿಯಾದ ಮಾರುಕಟ್ಟೆ ಯುವಕನ ಹತ್ಯೆಯಿಂದ ರೊಚ್ಚಿಗೆದ್ದ ಉದ್ರಿಕ್ತ ಗುಂಪೊಂದು ರಸ್ತೆಗಿಳಿದು ವಿಧ್ವಂಸಕ ಕೃತ್ಯಕ್ಕೆ ಮುಂದಾಯಿತು. ಮಾರುಕಟ್ಟೆಯಲ್ಲಿದ್ದ ಅಂಗಡಿಗಳಿಗೆ ಬೆಂಕಿ ಹಚ್ಚಲಾಯಿತು ಮತ್ತು ವಾಹನಗಳನ್ನು ಧ್ವಂಸಗೊಳಿಸಲಾಯಿತು. ಆತಂಕಕ್ಕೊಳಗಾದ ವ್ಯಾಪಾರಿಗಳು ತಮ್ಮ ವ್ಯಾಪಾರ-ವಹಿವಾಟನ್ನು ಅರ್ಧಕ್ಕೇ ನಿಲ್ಲಿಸಿ, ಅಂಗಡಿಗಳನ್ನು ಮುಚ್ಚಿ ಓಡಿಹೋದರು. ಇಡೀ ಪಟ್ಟಣದಲ್ಲಿ ದಟ್ಟವಾದ ಹೊಗೆ ಮತ್ತು ಜನರ ಕಿರುಚಾಟ ತುಂಬಿಹೋಗಿತ್ತು.

ಪೊಲೀಸ್ ಬಿಗಿ ಬಂದೋಬಸ್ತ್ ಮತ್ತು ಬಂಧನ ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಓಂ ಪ್ರಕಾಶ್ ಜಾಟ್ ಅವರು ಬೃಹತ್ ಪೊಲೀಸ್ ಪಡೆಯೊಂದಿಗೆ ಸ್ಥಳಕ್ಕೆ ಧಾವಿಸಿದರು. ಲಾಠಿ ಪ್ರಹಾರ ಮತ್ತು ಕಠಿಣ ಕ್ರಮಗಳ ಮೂಲಕ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿಗಳಾದ ಸಮೀರ್ ಮತ್ತು ರಿಜ್ವಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಕಿ ಹಚ್ಚುವಿಕೆ ಮತ್ತು ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಮಾಡಿದ ಆರೋಪದ ಮೇಲೆ ಇತರ 15 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

ಮತ್ತಷ್ಟು ಓದಿ: ಗೊಂಬೆಯಂತಿದ್ದ ಹೆಂಡತಿಯನ್ನು ಬಿಟ್ಟು ಪರಸ್ತ್ರೀ ಜತೆಗೆ ಸಂಬಂಧ: ಪೆನ್ ಡ್ರೈವ್​​ನಲ್ಲಿತ್ತು ಗಂಡನ ರಾಸಲೀಲೆ, ಕಿರುಕುಳದ ಸಾಕ್ಷಿ!

ಶಾಂತಿಗಾಗಿ ಮನವಿ ಪ್ರಸ್ತುತ ಧಂಧುಕಾದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಪೊಲೀಸರು ಪಟ್ಟಣದಾದ್ಯಂತ ಫ್ಲ್ಯಾಗ್ ಮಾರ್ಚ್ ನಡೆಸುತ್ತಿದ್ದಾರೆ. ಯಾರೂ ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳನ್ನು ಹರಡಬಾರದು ಮತ್ತು ಶಾಂತಿ ಕಾಪಾಡಲು ಸಹಕರಿಸಬೇಕು” ಎಂದು ಎಸ್‌ಪಿ ಜಾಟ್ ಮನವಿ ಮಾಡಿದ್ದಾರೆ. ಒಂದು ಕ್ಷಣದ ಸಿಟ್ಟು ಮತ್ತು ಅಸಹನೆ ಹೇಗೆ ಒಂದು ಸಂಸಾರವನ್ನು ಬೀದಿಗೆ ತಳ್ಳಬಹುದು ಮತ್ತು ಇಡೀ ಸಮಾಜದ ಶಾಂತಿಯನ್ನು ಕದಡಬಹುದು ಎಂಬುದಕ್ಕೆ ಧಂಧುಕಾದ ಈ ಘಟನೆ ಒಂದು ಕರಾಳ ಉದಾಹರಣೆಯಾಗಿದೆ. ಕಾನೂನು ತನ್ನ ಕೆಲಸ ಮಾಡುತ್ತಿದ್ದರೂ, ಕಳೆದುಹೋದ ಜೀವ ಮತ್ತು ಸುಟ್ಟುಹೋದ ಜೀವನಗಳು ಮಾತ್ರ ಮರಳಿ ಬಾರದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ವಿದ್ಯಾರ್ಥಿನಿಯರ ಬಳಿ ಅಂಗಡಿ ನೋಡಿಕೊಳ್ಳಿ ಎಂದು ಹೇಳಿ ಹೋದ ಮಾಲೀಕ
ವಿದ್ಯಾರ್ಥಿನಿಯರ ಬಳಿ ಅಂಗಡಿ ನೋಡಿಕೊಳ್ಳಿ ಎಂದು ಹೇಳಿ ಹೋದ ಮಾಲೀಕ
ಅಗ್ನಿಗೆ ಆಹುತಿಯಾದ ಬಿಎಂಟಿಸಿ ಬಸ್​​: ಕ್ಷಣ ಮಾತ್ರದಲ್ಲಿ ತಪ್ಪಿದ ದುರಂತ
ಅಗ್ನಿಗೆ ಆಹುತಿಯಾದ ಬಿಎಂಟಿಸಿ ಬಸ್​​: ಕ್ಷಣ ಮಾತ್ರದಲ್ಲಿ ತಪ್ಪಿದ ದುರಂತ
ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?
ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!
ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!
ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ
ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!