AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶ: ರೈಲಿನಲ್ಲಿ ಮುದ್ದಾದ ಮಗುವಿಗೆ ಜನ್ಮ ನೀಡಿದ ಮಹಿಳೆ, 8 ತಿಂಗಳಿಗೆ ಹೆರಿಗೆ

ಆಂಧ್ರಪ್ರದೇಶದ ರೈಲಿನಲ್ಲಿ ಮಹಿಳೆಯೊಬ್ಬರು ಸುರಕ್ಷಿತವಾಗಿ ಹೆಣ್ಣುಮಗುವಿಗೆ ಜನ್ಮ ನೀಡಿದರು. ಎಂಟು ತಿಂಗಳ ಗರ್ಭಿಣಿ ತರನ್ನಮ್ ಖಾತುನ್ ಅವರಿಗೆ ಪ್ರಯಾಣದ ವೇಳೆ ಹೆರಿಗೆ ನೋವು ಕಾಣಿಸಿಕೊಂಡಾಗ, ರೈಲ್ವೆ ಸಿಬ್ಬಂದಿ ಮತ್ತು ಟಿಕೆಟ್ ಪರಿಶೀಲನಾಧಿಕಾರಿ ಜಿ. ಜ್ಯೋತಿ ತಕ್ಷಣ ನೆರವಿಗೆ ಧಾವಿಸಿದರು. ಅವರ ಸಕಾಲಿಕ ಸಹಾಯದಿಂದ ರೈಲಿನಲ್ಲೇ ಹೆರಿಗೆ ಮಾಡಿಸಲಾಯಿತು. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದು, ರೈಲ್ವೆ ಸಿಬ್ಬಂದಿಯ ಮಾನವೀಯತೆ ಮತ್ತು ಕ್ಷಿಪ್ರ ಸ್ಪಂದನೆಗೆ ಪ್ರಶಂಸೆ ವ್ಯಕ್ತವಾಗಿದೆ.

ಆಂಧ್ರಪ್ರದೇಶ: ರೈಲಿನಲ್ಲಿ ಮುದ್ದಾದ ಮಗುವಿಗೆ ಜನ್ಮ ನೀಡಿದ ಮಹಿಳೆ, 8 ತಿಂಗಳಿಗೆ ಹೆರಿಗೆ
ಮಗು
ನಯನಾ ರಾಜೀವ್
|

Updated on:Apr 08, 2026 | 8:24 AM

Share

ವಿಜಯವಾಡ, ಏಪ್ರಿಲ್ 08: ಮಹಿಳೆಯೊಬ್ಬರು ಆಂಧ್ರಪ್ರದೇಶದ ರೈಲಿನಲ್ಲಿ ಮಗು(Baby)ವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ. ರೈಲ್ವೆ ಸಿಬ್ಬಂದಿ ಸಹಾಯಕ್ಕೆ ಬಂದ ಪರಿಣಾಮ ಹೆರಿಗೆ ಸುಸೂತ್ರವಾಗಿ ಆಗಿದ್ದು, ಮುದ್ದಾದ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ. ಎಂಟು ತಿಂಗಳ ಗರ್ಭಿಣಿಯೊಬ್ಬರು ರೈಲು ಹತ್ತಿದರು. ಹೆರಿಗೆಗೆ ಇನ್ನೂ ಒಂದು ತಿಂಗಳು ಬಾಕಿ ಇದೆ ಎಂಬ ವಿಶ್ವಾಸ ಮತ್ತು ಅವರ ಕುಟುಂಬ ಸದಸ್ಯರು ತಮ್ಮ ಪಕ್ಕದಲ್ಲಿದ್ದಾರೆ ಎಂಬ ಧೈರ್ಯದೊಂದಿಗೆ, ಅವರು ರೈಲು ಪ್ರಯಾಣಕ್ಕೆ ಒಪ್ಪಿಕೊಂಡಿದ್ದರು. ಆದರೆ ಅಂದುಕೊಂಡಂತೆ ಎಲ್ಲವೂ ನಡೆಯದು ಎಂಬುದಕ್ಕೆ ಇದೂ ಒಂದು ನಿದರ್ಶನ.

ನಿಧಾನವಾಗಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕುಟುಂಬದವರಿಗೂ ಭಯ ಶುರುವಾಗಿತ್ತು. ಬಳಿಕ ರೈಲಿನ ಟಿಟಿಗೆ ಕರೆ ಮಾಡಲಾಯಿತು.ಇಶಾದ್ ಮತ್ತು ತರನ್ನಮ್ ಖಾತುನ್ ಜಾರ್ಖಂಡ್ ಮೂಲದವರು. ಏಪ್ರಿಲ್ 5 ರಂದು, ಧನಬಾದ್ ಮೂಲದ ಗರ್ಭಿಣಿ, ಅವರ ಕುಟುಂಬವು ರೈಲು ಸಂಖ್ಯೆ 13352 (ಆಲಪ್ಪುಳ-ಧನಬಾದ್ ಎಕ್ಸ್‌ಪ್ರೆಸ್) ನ ಬಿ 1 ಕೋಚ್‌ನಲ್ಲಿ ಚೆನ್ನೈನಿಂದ ಧನಬಾದ್‌ಗೆ ಪ್ರಯಾಣಿಸುತ್ತಿದ್ದಾಗ ರೈಲು ಅನ್ನಾವರಂ ನಿಲ್ದಾಣವನ್ನು ದಾಟಿದ ಸ್ವಲ್ಪ ಸಮಯದ ನಂತರ ಹೆರಿಗೆ ನೋವು ಕಾಣಿಸಿಕೊಂಡಿತ್ತು.

ಅವರ ಕುಟುಂಬ ಸದಸ್ಯರು ತಕ್ಷಣ ಕರ್ತವ್ಯದಲ್ಲಿದ್ದ ಟಿಕೆಟ್ ಪರಿಶೀಲನಾ ಸಿಬ್ಬಂದಿಯನ್ನು ಸಹಾಯಕ್ಕಾಗಿ ಸಂಪರ್ಕಿಸಿದರು. ಪರಿಸ್ಥಿತಿಗೆ ತ್ವರಿತವಾಗಿ ಸ್ಪಂದಿಸಿದ ಜಿ. ಜ್ಯೋತಿ ಗರ್ಭಿಣಿಯ ಸಹಾಯಕ್ಕೆ ಬಂದರು. ಪರಿಸ್ಥಿತಿಯ ತುರ್ತುಸ್ಥಿತಿಯನ್ನು ಅರ್ಥಮಾಡಿಕೊಂಡು, ರೈಲಿಗೆ ಎಲಮಂಚಿಲಿ ನಿಲ್ದಾಣದಲ್ಲಿ ವಿಶೇಷ ನಿಲುಗಡೆ ಕಲ್ಪಿಸಲಾಯಿತು. ಆಂಬ್ಯುಲೆನ್ಸ್​ಗೆ ಕೂಡ ಕರೆ ಮಾಡಿದ್ದರು.

ಮತ್ತಷ್ಟು ಓದಿ: ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ, ಜನ ವಿಡಿಯೋ ಮಾಡಿದ್ರು ಸಹಾಯಕ್ಕೆ ಬರ್ಲಿಲ್ಲ

ತಾಯಿ ಮತ್ತು ನವಜಾತ ಶಿಶುವನ್ನು 108 ಆಂಬ್ಯುಲೆನ್ಸ್ ಮೂಲಕ ಎಲಮಂಚಿಲಿಯ ಸರ್ಕಾರಿ ಆಸ್ಪತ್ರೆಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಲಾಯಿತು. ತಾಯಿ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿದ್ದಾರೆ ಮತ್ತು ಆರೋಗ್ಯವಾಗಿದ್ದಾರೆ ಎಂದು ವರದಿಯಾಗಿದೆ. ಬೊಕಾರೊ ಎಕ್ಸ್‌ಪ್ರೆಸ್ ಅನ್ನು ಸುಮಾರು 40 ನಿಮಿಷಗಳ ಕಾಲ ರೈಲ್ವೆ ನಿಲ್ದಾಣದಲ್ಲಿ ನಿಲ್ಲಿಸಲಾಗಿತ್ತು.

ಟಿಟಿಇ ಜೊತೆಗೆ, ರೈಲ್ವೆ ಸಿಬ್ಬಂದಿ ಮತ್ತು ರೈಲಿನೊಳಗಿನ ಪುರುಷ ಪ್ರಯಾಣಿಕರನ್ನು ರೈಲು ಕೋಚ್‌ನಿಂದ ಹೊರಗೆ ಕಳುಹಿಸಲಾಯಿತು, ಇದರಿಂದ ಬಿ1 ಕೋಚ್‌ನಲ್ಲಿರುವ ಮಹಿಳೆಗೆ ಸಾಮಾನ್ಯ ಹೆರಿಗೆಯಾಗುವಂತೆ ನೋಡಿಕೊಳ್ಳಲಾಯಿತು. ರೈಲಿನಲ್ಲಿರುವ ಸೌಕರ್ಯ, ಸುರಕ್ಷತೆ ಮತ್ತು ಕಡಿಮೆ ವೆಚ್ಚ ಎನ್ನುವ ಕಾರಣಕ್ಕೆ ಗರ್ಭಿಣಿಯರಿಂದ ಹಿಡಿದು ವೃದ್ಧರವೆಗೂ ಎಲ್ಲರೂ ರೈಲು ಪ್ರಯಾಣವನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ.

ಈ ರೈಲು ಪ್ರಯಾಣ ಎಷ್ಟು ಸುರಕ್ಷಿತವೆಂಬುದು ಈ ಘಟನೆಯಿಂದ ಮತ್ತೊಮ್ಮೆ ಸಾಬೀತಾದಂತಾಗಿದೆ. ರೈಲಿನಲ್ಲಿ ಪ್ರಯಾಣಿಸುವಾಗ, ನಾವು ಅನೇಕ ವಿಚಿತ್ರ ಘಟನೆಗಳನ್ನು ನೋಡುತ್ತೇವೆ. ಆದರೆ ಮಾನವೀಯತೆ ತೋರುವ ಘಟನೆಗಳು ಬಹಳ ಅಪರೂಪ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:22 am, Wed, 8 April 26

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ