AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಫೋಸಿಸ್‌ ಟೆಕ್ಕಿಯಾಗಿರುವ ಮಗ ಬರ್ತಿದಾನೆ ಎಂದು ಅಪ್ಪ-ಅಮ್ಮ ಸಂಭ್ರಮಿಸಿದ್ದರು, ಅಷ್ಟರಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದುಬಿಟ್ರು

Warangal: ಇನ್ಫೋಸಿಸ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಶ್ರೀಕಾಂತ್, ಇಂದು ಬಕ್ರೀದ್ ರಜಾ ದಿನ, ಜೊತೆಗೆ ಪ್ರಥಮ ಏಕಾದಶಿ ಇರುವುದರಿಂದ ತಂದೆ-ತಾಯಿಯೊಂದಿಗೆ ಪೂಜೆಯಲ್ಲಿ ಭಾಗವಹಿಸಲು ಮನೆಗೆ ಬರುತ್ತಿದ್ದರು.

ಇನ್ಫೋಸಿಸ್‌ ಟೆಕ್ಕಿಯಾಗಿರುವ ಮಗ ಬರ್ತಿದಾನೆ ಎಂದು ಅಪ್ಪ-ಅಮ್ಮ ಸಂಭ್ರಮಿಸಿದ್ದರು, ಅಷ್ಟರಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದುಬಿಟ್ರು
ಮಗ ಬರ್ತಿದಾನೆ ಎಂದು ಅಪ್ಪ-ಅಮ್ಮ ಸಂಭ್ರಮಿಸಿದ್ದರು, ಅಷ್ಟರಲ್ಲಿ ದುಷ್ಕರ್ಮಿಗಳು ...
Follow us
ಸಾಧು ಶ್ರೀನಾಥ್​
|

Updated on: Jun 29, 2023 | 1:21 PM

ಇಂದು ಪ್ರಥಮ ಏಕಾದಶಿ. ಎಲ್ಲರ ಮನೆಯಲ್ಲೂ ಹಬ್ಬದ ವಾತಾವರಣ.. ಆದರೆ ಈ ಮನೆಯಲ್ಲಿ ಘೋರ ದುರಂತವೇ ಸಂಭವಿಸಿದೆ.. ಯುವ ಸಾಫ್ಟ್‌ವೇರ್ ಇಂಜಿನಿಯರ್ ತನ್ನ ಸೆಲ್ ಫೋನ್ ಉಳಿಸಲು ಹೋಗಿ, ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಟ್ರೈನಿನಲ್ಲಿ ದರೋಡೆಕೋರರು ಎಸಗಿರುವ ದುಷ್ಕೃತ್ಯ ಇದಾಗಿದೆ. ಕಳ್ಳರಿಂದಾಗಿ ಯುವ ಟೆಕ್ಕಿ ಪ್ರಾಣ ಕಳೆದುಕೊಂಡಿದ್ದಾನೆ. ಕಳ್ಳರು ಆತನ ಬಳಿಯಿದ್ದ ಸೆಲ್ ಫೋನ್ ಕಸಿಯಲು ಯತ್ನಿಸಿದಾಗ ಸದರಿ ಸಾಫ್ಟ್ ವೇರ್ ಇಂಜಿನಿಯರ್ ರೈಲಿನಿಂದ ಜಾರಿ, ಅದೇ ರೈಲಿನಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಈ ದಾರುಣ ಘಟನೆ ಬೀಬಿ ನಗರದಲ್ಲಿ ನಡೆದಿದೆ. ಮೃತನ ಸ್ವಗ್ರಾಮ ಕಮಲಾಪುರ ಮಂಡಲದ ನೆರೆಲ್ಲ ಗ್ರಾಮದಲ್ಲಿ ಈ ಭೀಕರ ದುರಂತ ಸಂಭವಿಸಿದೆ. ಘಟನೆಯ ವಿವರ ಇಂತಿದೆ.

ಶ್ರೀಕಾಂತ್ ಹೈದರಾಬಾದ್‌ನ ಇನ್ಫೋಸಿಸ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಇಂದು ಬಕ್ರೀದ್ ರಜಾ ದಿನ, ಜೊತೆಗೆ ಪ್ರಥಮ ಏಕಾದಶಿ ಇರುವುದರಿಂದ ತಂದೆ-ತಾಯಿಯೊಂದಿಗೆ ಪೂಜೆಯಲ್ಲಿ ಭಾಗವಹಿಸಲು ಮನೆಗೆ ಬರುತ್ತಿದ್ದರು. ಶತವಾಹನ ರೈಲು ಬುಧವಾರ ಸಂಜೆ ಸಿಕಂದರಾಬಾದ್‌ನಿಂದ ಕಾಜಿಪೇಟ್‌ಗೆ ತೆರಳಿತ್ತು. ಬೀಬಿನಗರ ಬಳಿಯ ರೈಲ್ವೆ ಹಳಿ ಬಳಿ ಇಬ್ಬರು ಅಪರಿಚಿತ ದುಷ್ಕರ್ಮಿಗಳು ದೊಣ್ಣೆಗಳನ್ನು ಹಿಡಿದು ಶ್ರೀಕಾಂತ್ ಅವರ ಸೆಲ್ ಫೋನ್ ಕದಿಯಲು ಯತ್ನಿಸಿದ್ದಾರೆ.

ಮತ್ತಷ್ಟು ಓದಿ: Chikkamagaluru News: ಅಸ್ಸಾಂ ಮೂಲದ ಮಹಿಳೆ ಮೇಲೆ‌ ಹುಲಿ ದಾಳಿ: ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

ಫುಟ್ ಬೋರ್ಡ್ ವರೆಗೂ ಇಳಿದು ಬಂದಿದ್ದ ಶ್ರೀಕಾಂತ್ ಅವರ ಕೈಯಲ್ಲಿ ಸೆಲ್ ಫೋನ್ ಇದ್ದಿದ್ದನ್ನು ಗಮನಿಸಿದ ದುಷ್ಕರ್ಮಿಗಳು ನೇರವಾಗಿ ಫೋನ್​ ಹಿಡಿದಿದ್ದ ಕೈಗೆ ಹೊಡೆದು ದರೋಡೆಗೆ ಯತ್ನಿಸಿದ್ದಾರೆ. ಗಾಬರಿಗೊಂಡ ಶ್ರೀಕಾಂತ್ ಸೆಲ್ ಫೋನ್ ಉಳಿಸಲು ಯತ್ನಿಸಿ, ರೈಲಿನಿಂದ ಜಾರಿ ಬಿದ್ದಿದ್ದಾನೆ. ದುರದೃಷ್ಟವಶಾತ್ ಅದೇ ರೈಲಿನಡಿಗೆ ಜಾರಿದ ಶ್ರೀಕಾಂತ್, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದುಷ್ಕರ್ಮಿಗಳು ಮೊಬೈಲ್ ದೋಚಲು ಯತ್ನಿಸಿ ಅಲ್ಲಿಂದ ಪರಾರಿಯಾಗಿದ್ದಾರೆ.

ಹಬ್ಬಕ್ಕೆ ಮನೆಗೆ ಬರುವ ಮಗನ ಬರುವಿಕೆಗಾಗಿ ಕಾದು ಕುಳಿತಿದ್ದ ಪಾಲಕರಾದ ರಾಮುಲು-ಧನಮ್ಮ ಅವರು ಶ್ರೀಕಾಂತ್ ಸಾವಿನ ಸುದ್ದಿ ಕೇಳಿ ರೋದಿಸುತ್ತಿದ್ದಾರೆ. ಹಬ್ಬದ ಸಂದರ್ಭದಲ್ಲಿ ಕುಟುಂಬದಲ್ಲಿ ಭೀಕರ ದುರಂತ ಸಂಭವಿಸಿದೆ. ಸೆಲ್ ಫೋನ್ ಕಳ್ಳರ ಅಟ್ಟಹಾಸವೇ ಇಂತಹ ದುಷ್ಕೃತ್ಯಕ್ಕೆ ಕಾರಣವಾಗಿದೆ. ಘಟನೆಯ ಕುರಿತು ರೈಲ್ವೆ ಪೊಲೀಸ್​ ಅಧಿಕಾರಿಗಳು ( ಆರ್‌ಪಿಎಫ್) ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್