AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

INS Visakhapatnam: ಕ್ಷಿಪಣಿ ವಿಧ್ವಂಸಕ ನೌಕೆ ಐಎನ್​ಎಸ್​ ವಿಶಾಖಪಟ್ಟಂ ಇಂದು ನೌಕಾಪಡೆಗೆ ಸೇರ್ಪಡೆ; ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ರಾಜನಾಥ್ ಸಿಂಗ್​

Rajnath Singh:ದೇಶೀಯವಾದ​ ಡಿಎಂಆರ್​ 249ಎ ಉಕ್ಕು ಬಳಸಿ ಈ ಐಎನ್​ಎಸ್​ ವಿಶಾಖಪಟ್ಟಣಂ ಹಡಗನ್ನು ನಿರ್ಮಿಸಲಾಗಿದ್ದು, ಇದು ಭಾರತದಲ್ಲಿ ತಯಾರಿಸಲಾದ ಅತಿದೊಡ್ಡ ವಿಧ್ವಂಸಕ ನೌಕೆಗಳಲ್ಲಿ ಒಂದಾಗಿದೆ.

INS Visakhapatnam: ಕ್ಷಿಪಣಿ ವಿಧ್ವಂಸಕ ನೌಕೆ ಐಎನ್​ಎಸ್​ ವಿಶಾಖಪಟ್ಟಂ ಇಂದು ನೌಕಾಪಡೆಗೆ ಸೇರ್ಪಡೆ; ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ರಾಜನಾಥ್ ಸಿಂಗ್​
ಐಎನ್​ಎಸ್​ ವಿಶಾಖಪಟ್ಟಣಂ
TV9 Web
| Edited By: |

Updated on: Nov 21, 2021 | 8:08 AM

Share

ಮುಂಬೈ: ಐಎನ್​ಎಸ್​ ವಿಶಾಖಪಟ್ಟಣಂ (INS Visakhapatnam) ಎಂಬ ಹೆಸರಿನ, ಮೊದಲ ರಹಸ್ಯ ಮಾರ್ಗದರ್ಶಿ ಕ್ಷಿಪಣಿ ವಿಧ್ವಂಸಕ ಹಡಗನ್ನು ಇಂದು ಮುಂಬೈನ ನೌಕಾನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಅವರು ನೌಕಾಪಡೆಗೆ ಅಧಿಕೃತನವಾಗಿ ನಿಯೋಜಿಸುವ ಮೂಲಕ, ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಈ ಐಎನ್​ಎಸ್​ ವಿಶಾಖಪಟ್ಟಣಂ ಹಡಗು ಪ್ರಾಜೆಕ್ಟ್​ 15ಬಿಯ ಕ್ಷಿಪಣಿ ವಿಧ್ವಂಸಕ ಶಿಪ್​ ಆಗಿದೆ.  ಇಂದು ಯುದ್ಧ ಹಡಗನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡುವ ಕಾರ್ಯಕ್ರಮದಲ್ಲಿ ನೌಕಾಪಡೆ ಮುಖ್ಯಸ್ಥ ಅಡ್ಮಿರಲ್​ ಕರಂಬೀರ್​ ಸಿಂಗ್​ ಅವರು ಮುಖ್ಯಅತಿಥಿಯಾಗಿದ್ದು, ರಾಜನಾಥ್ ಸಿಂಗ್​ ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ದೇಶೀಯವಾದ​ ಡಿಎಂಆರ್​ 249ಎ ಉಕ್ಕು ಬಳಸಿ ಈ ಐಎನ್​ಎಸ್​ ವಿಶಾಖಪಟ್ಟಣಂ ಹಡಗನ್ನು ನಿರ್ಮಿಸಲಾಗಿದ್ದು, ಇದು ಭಾರತದಲ್ಲಿ ತಯಾರಿಸಲಾದ ಅತಿದೊಡ್ಡ ವಿಧ್ವಂಸಕ ನೌಕೆಗಳಲ್ಲಿ ಒಂದಾಗಿದೆ. ಇದರ ಒಟ್ಟಾರೆ ಉದ್ದ 163 ಮೀಟರ್​​ಗಳಿದ್ದು, 704 ಟನ್​​ಗಳಷ್ಟು ಭಾರವನ್ನು ಸ್ಥಳಾಂತರ ಮಾಡಬಹುದಾಗಿದೆ. ಈ ನೌಕೆಯಲ್ಲಿ ಶಸ್ತ್ರಾಸ್ತ್ರಗಳ ಅಳವಡಿಗೆ ಮುಂದುವರಿದ ವಿಧಾನದಲ್ಲಿ ಇದ್ದು, ಬಹುವಿಧದ ಕಾರ್ಯ ನಡೆಸುವ ಸಾಮರ್ಥ್ಯ ಹೊಂದಿದೆ ಎಂದು ನೌಕಾಪಡೆ ಮೂಲಗಳು ತಿಳಿಸಿವೆ.   ಈ ಕ್ಷಿಪಣಿ ಧ್ವಂಸಕ ಹಡಗು ಶಕ್ತಿಯುತ ಅನಿಲ ಮತ್ತು ಅನಿಲ ಸಂಚಲನೆಯಿಂದ ಚಾಲಿತವಾಗಲ್ಪಡುತ್ತದೆ. ಅಲ್ಲದೆ, ಎರಡು ಹೆಲಿಕಾಪ್ಟರ್​​ಗಳನ್ನು ಹೊರುವಷ್ಟು ಬಲಿಷ್ಠವಾಗಿದೆ.  ಅಷ್ಟೇ ಅಲ್ಲ, ಅತ್ಯಾಧುನಿಕ ಡಿಜಿಟಲ್​ ನೆಟ್​ವರ್ಕ್​ಗಳು, ಕಾಂಬ್ಯಾಟ್​ ಮ್ಯಾನೇಜ್​ಮೆಂಟ್​ ವ್ಯವಸ್ಥೆ, ಇಂಟಿಗ್ರೇಟೆಡ್​ ಪ್ಲಾಟ್​ಫಾರ್ಮ್​​ ನಿರ್ವಹಣಾ ವ್ಯವಸ್ಥೆಯೊಂದಿಗೆ ಹೆಚ್ಚಿನ ಮಟ್ಟದಲ್ಲಿ ಯಾಂತ್ರೀಕೃತಗೊಂಡಿದೆ.

ಐಎನ್​ಎಸ್​ ವಿಶಾಖಪಟ್ಟಣಂ ನೌಕೆ ಉದ್ಘಾಟನೆ ಬಗ್ಗೆ ಬಗ್ಗೆ ನಿನ್ನೆ ರಾತ್ರಿ ಟ್ವೀಟ್ ಮಾಡಿರುವ ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ನಾಳೆ (ನ.21) ಮುಂಬೈಗೆ ತೆರಳುತ್ತಿದ್ದೇನೆ. ಐಎನ್​ಎಸ್​ ವಿಶಾಖಪಟ್ಟಣಂ ಕ್ಷಿಪಣಿ ವಿಧ್ವಂಸಕ ಹಡಗನ್ನು ಲೋಕಾರ್ಪಣೆ ಮಾಡುತ್ತಿದ್ದೇನೆ. ಈ ವರ್ಗದ ಒಟ್ಟು ನಾಲ್ಕು ನೌಕೆಗಳಲ್ಲಿ ಮೊದಲನೆಯದು ನಾಳೆ ನೌಕಾಪಡೆ ಸೇರುವ ಮೂಲಕ ರಾಷ್ಟ್ರಕ್ಕೆ ಸಮರ್ಪಿತವಾಗಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉಡುಪಿ: ಮೌಢ್ಯದ ಹೆಸರಿನಲ್ಲಿ ಶ್ರೀತಾಳೆ ಮರ ಕಡಿಯಲು ಮುಂದಾದ ಗ್ರಾಮಸ್ಥರು; ಪರಿಸರ ಪ್ರೀಯರಿಂದ ಆಕ್ರೋಶ

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ