AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದ ಕಾಡಿನಲ್ಲಿ ಶಿಕ್ಷಕ, ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಅನೈತಿಕ ಸಂಬಂಧದ ಶಂಕೆ

ಉತ್ತರ ಪ್ರದೇಶದ ರಸೂಲ್‌ಪುರ ಗ್ರಾಮದ ನಿವಾಸಿಯಾಗಿರುವ ಶಿಕ್ಷಕ ತಾನು ಕೆಲಸ ಮಾಡುತ್ತಿದ್ದ ಶಾಲೆಯಲ್ಲೇ ಓದುತ್ತಿದ್ದ ಬಾಲಕಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಅವರಿಬ್ಬರೂ ಸೆಪ್ಟೆಂಬರ್ 3ರಿಂದ ಕಾಣೆಯಾಗಿದ್ದರು.

ಉತ್ತರ ಪ್ರದೇಶದ ಕಾಡಿನಲ್ಲಿ ಶಿಕ್ಷಕ, ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಅನೈತಿಕ ಸಂಬಂಧದ ಶಂಕೆ
ಸಾಂದರ್ಭಿಕ ಚಿತ್ರImage Credit source: India.com
TV9 Web
| Updated By: ಸುಷ್ಮಾ ಚಕ್ರೆ|

Updated on: Sep 21, 2022 | 3:04 PM

Share

ಸಹರಾನ್‌ಪುರ: 40 ವರ್ಷದ ಶಾಲಾ ಶಿಕ್ಷಕ ಮತ್ತು ಅವರ ವಿದ್ಯಾರ್ಥಿನಿ ಉತ್ತರ ಪ್ರದೇಶದ (Uttar Pradesh) ಸಹರಾನ್​ಪುರದ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ನಡುವೆ ಅನೈತಿಕ ಸಂಬಂಧವಿತ್ತು (Extra Marital Affair) ಎಂದು ಹೇಳಲಾಗಿದೆ. ಶಾಲೆಯ ಶಿಕ್ಷಕ ವೀರೇಂದ್ರ ಮತ್ತು 9ನೇ ತರಗತಿಯ ವಿದ್ಯಾರ್ಥಿನಿಯಾಗಿರುವ 17 ವರ್ಷದ ಬಾಲಕಿ ಮಂಗಳವಾರ ತಡರಾತ್ರಿ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ರಸೂಲ್‌ಪುರ ಗ್ರಾಮದ ನಿವಾಸಿಯಾಗಿರುವ ಶಿಕ್ಷಕ ತಾನು ಕೆಲಸ ಮಾಡುತ್ತಿದ್ದ ಶಾಲೆಯಲ್ಲೇ ಓದುತ್ತಿದ್ದ ಬಾಲಕಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಅವರಿಬ್ಬರೂ ಸೆಪ್ಟೆಂಬರ್ 3ರಿಂದ ಕಾಣೆಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವಿಪಿನ್ ತಾಡಾ ತಿಳಿಸಿದ್ದಾರೆ.

ಇದನ್ನೂ ಓದಿ: Tamil Nadu: ತಮಿಳುನಾಡಿನ ಹಾಸ್ಟೆಲ್ ಟಾಯ್ಲೆಟ್​ನಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಶವವಾಗಿ ಪತ್ತೆ

ಬಾಲಕಿಯ ಕುಟುಂಬಸ್ಥರು ಅಪಹರಣದ ವರದಿಯನ್ನು ದಾಖಲಿಸಿದ್ದಾರೆ. ಪೊಲೀಸರು ಅವರಿಗಾಗಿ ಹುಡುಕಲು ಪ್ರಾರಂಭಿಸಿದ್ದರು. ಆದರೆ ಅವರು ಸ್ಥಳವನ್ನು ಬದಲಾಯಿಸಿದ್ದರಿಂದ ಅವರನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಅವರು ಮೃತಪಟ್ಟಿರುವ ಪ್ರದೇಶದಲ್ಲಿ ದುರ್ವಾಸನೆ ಹೊರಹೊಮ್ಮಲು ಪ್ರಾರಂಭಿಸಿದಾಗ ಅಕ್ಕಪಕ್ಕದವರು ಪೊಲೀಸರಿಗೆ ವಿಷಯ ತಿಳಿಸಿದ್ದರು. ಪೊಲೀಸ್ ತಂಡವು ಕಾಡಿಗೆ ಹೋದಾಗ 2 ಮೃತದೇಹಗಳು ಅತ್ಯಂತ ಕೆಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ.

10 ದಿನಗಳ ಹಿಂದೆಯೇ ಅವರಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಆ ಸ್ಥಳದಿಂದ ಮೃತ ಶಿಕ್ಷಕನ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲ. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್