AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜು ವಿದ್ಯಾರ್ಥಿನಿ ನಾಪತ್ತೆ, ಎಲೆಕ್ಟ್ರಿಷಿಯನ್​ನ ಮದುವೆಯಾಗಿ ಹಿಂದಿರುಗಿದ ಶ್ರದ್ಧಾ

ವಾರದಿಂದ ನಾಪತ್ತೆಯಾಗಿರುವ ಕಾಲೇಜು ವಿದ್ಯಾರ್ಥಿನಿ ಎಲೆಕ್ಟ್ರಿಷಿಯನ್​​ನ ಮದುವೆಯಾಗಿ ಹಿಂದಿರುಗಿರುವ ಘಟನೆ ಇಂದೋರ್​​ನಲ್ಲಿ ನಡೆದಿದೆ. ಅಂತಿಮ ವರ್ಷದ ಬಿಬಿಎ ವಿದ್ಯಾರ್ಥಿನಿ ಏಳು ದಿನಗಳ ನಂತರ ಹಿಂತಿರುಗಿದ್ದು, ರತ್ಲಂಗೆ ಹೋಗುವ ರೈಲಿನಲ್ಲಿ ಭೇಟಿಯಾಗಿದ್ದ ಎಲೆಕ್ಟ್ರಿಷಿಯನ್‌ನನ್ನು ಮದುವೆಯಾಗಿದ್ದೇನೆ ಎಂದು ಹೇಳಿಕೊಂಡಿದ್ದಾಳೆ.ವಿದ್ಯಾರ್ಥಿನಿ ಶ್ರದ್ಧಾ ತನ್ನ ಗೆಳೆಯ ಸಾರ್ಥಕ್ ಜೊತೆ ಓಡಿಹೋಗಲು ಯೋಜಿಸಿದ್ದಾಗಿ ಬಹಿರಂಗಪಡಿಸಿದಳು. ಆದರೆ, ಸಾರ್ಥಕ್ ರೈಲ್ವೆ ನಿಲ್ದಾಣಕ್ಕೆ ಬಾರದಿದ್ದಾಗ, ಅವಳು ರತ್ಲಂಗೆ ರೈಲು ಹತ್ತಿದ್ದಳು.

ಕಾಲೇಜು ವಿದ್ಯಾರ್ಥಿನಿ ನಾಪತ್ತೆ, ಎಲೆಕ್ಟ್ರಿಷಿಯನ್​ನ ಮದುವೆಯಾಗಿ ಹಿಂದಿರುಗಿದ ಶ್ರದ್ಧಾ
ವಿದ್ಯಾರ್ಥಿನಿ
ನಯನಾ ರಾಜೀವ್
|

Updated on:Aug 30, 2025 | 9:03 AM

Share

ಇಂದೋರ್, ಆಗಸ್ಟ್​ 30: ವಾರದಿಂದ ನಾಪತ್ತೆಯಾಗಿರುವ ಕಾಲೇಜು ವಿದ್ಯಾರ್ಥಿನಿ ಎಲೆಕ್ಟ್ರಿಷಿಯನ್​​ನ ಮದುವೆ(Marriage)ಯಾಗಿ ಹಿಂದಿರುಗಿರುವ ಘಟನೆ ಇಂದೋರ್​​ನಲ್ಲಿ ನಡೆದಿದೆ. ಅಂತಿಮ ವರ್ಷದ ಬಿಬಿಎ ವಿದ್ಯಾರ್ಥಿನಿ ಏಳು ದಿನಗಳ ನಂತರ ಹಿಂತಿರುಗಿದ್ದು, ರತ್ಲಂಗೆ ಹೋಗುವ ರೈಲಿನಲ್ಲಿ ಭೇಟಿಯಾಗಿದ್ದ ಎಲೆಕ್ಟ್ರಿಷಿಯನ್‌ನನ್ನು ಮದುವೆಯಾಗಿದ್ದೇನೆ ಎಂದು ಹೇಳಿಕೊಂಡಿದ್ದಾಳೆ.

ವಿದ್ಯಾರ್ಥಿನಿ ಶ್ರದ್ಧಾ ತನ್ನ ಗೆಳೆಯ ಸಾರ್ಥಕ್ ಜೊತೆ ಓಡಿಹೋಗಲು ಯೋಜಿಸಿದ್ದಾಗಿ ಬಹಿರಂಗಪಡಿಸಿದಳು. ಆದರೆ, ಸಾರ್ಥಕ್ ರೈಲ್ವೆ ನಿಲ್ದಾಣಕ್ಕೆ ಬಾರದಿದ್ದಾಗ, ಅವಳು ರತ್ಲಂಗೆ ರೈಲು ಹತ್ತಿದ್ದಳು. ಅಲ್ಲಿ ಅವಳು ಎಲೆಕ್ಟ್ರಿಷಿಯನ್​​ನ ಭೇಟಿಯಾಗಿ ಆತನನ್ನು ಮದುವೆಯಾಗಿರುವುದಾಗಿ ಹೇಳಿದ್ದಾರೆ.

ಕರಣ್‌ದೀಪ್ ಇಂದೋರ್‌ನ ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಆಗಿದ್ದಾನೆ.ಕರಣ್‌ದೀಪ್ ಹಾಗೂ ತಾನು ಒಂದೇ ರೈಲಿನಲ್ಲಿ ಪ್ರಯಾಣಿಸುತ್ತಿರುವುದನ್ನು ನೋಡಿ ಆಶ್ಚರ್ಯವಾಯಿತು ಎಂದು ಶ್ರದ್ಧಾ ಹೇಳಿದ್ದಾಳೆ.ಮತ್ತು ಇಬ್ಬರೂ ಮದುವೆಯಾಗಲು ನಿರ್ಧರಿಸಿದರು. ಮೊದಲು ಅವರು ಮಂದ್ಸೌರ್‌ಗೆ ಹೋಗಿ ನಂತರ ಸುಮಾರು 250 ಕಿಲೋಮೀಟರ್ ದೂರದಲ್ಲಿರುವ ಮಹೇಶ್ವರಕ್ಕೆ ಹೋಗಿ, ಅಲ್ಲಿ ದೇವಸ್ಥಾನದಲ್ಲಿ ವಿವಾಹವಾದರು. ಬಳಿಕ ಅವರು ನೇರವಾಗಿ ಇಂದೋರ್ ಪೊಲೀಸ್ ಠಾಣೆಗೆ ಮರಳಿದರು.

ಮತ್ತಷ್ಟು ಓದಿ: ಬೆಳಗ್ಗೆ ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಸಂಜೆಯೇ ಪ್ರಿಯಕರನ ಜತೆ ವಿವಾಹವಾದ್ಲು!

ಏತನ್ಮಧ್ಯೆ, ಪೊಲೀಸರು ಶ್ರದ್ಧಾಳ ಹೇಳಿಕೆಯಿಂದ ಇನ್ನೂ ಮನವರಿಕೆಯಾಗಿಲ್ಲ ಮತ್ತು ಮದುವೆ ಪ್ರಮಾಣಪತ್ರವನ್ನು ಒದಗಿಸುವಂತೆ ಕೇಳಿದ್ದಾರೆ. ಸಾರ್ಥಕ್​​ನ ಪ್ರಶ್ನಿಸಿದಾಗ ಆತ ಶ್ರದ್ಧಾಳೊಂದಿಗೆ ಹಲವು ದಿನಗಳಿಂದ ಸಂಪರ್ಕದಲ್ಲಿ ಇರಲಿಲ್ಲ ಎಂದು ಹೇಳಿಕೊಂಡಿದ್ದಾನೆ. ಮಗಳು ಮದುವೆಯಾಗಿರುವುದಾಗಿ ಹೇಳಿಕೊಂಡಾಗ ಆಘಾತಕ್ಕೊಳಗಾದ ಆಕೆಯ ತಂದೆ ಅನಿಲ್ ತಿವಾರಿ, ನಾನು ಈ ಮದುವೆಗೆ ಒಪ್ಪುವುದಿಲ್ಲ ಎಂದಿದ್ದಾರೆ.

ಶ್ರದ್ಧಾಳ ಮಾನಸಿಕ ಸ್ಥಿತಿಯ ಬಗ್ಗೆ ಮತ್ತಷ್ಟು ಕಳವಳ ವ್ಯಕ್ತಪಡಿಸಿದ್ದು, ಕರಣ್‌ದೀಪ್ ಆಕೆ ಆತ್ಮಹತ್ಯೆ ಮಾಡಿಕೊಳ್ಳದಂತೆ ರಕ್ಷಿಸಿದ್ದಾಗಿ ಹೇಳಿಕೊಂಡಿದ್ದಾನೆ. ಆದರೆ ನನ್ನ ಮಗಳು ಮಾನಸಿಕವಾಗಿ ಸ್ಥಿರವಾಗಿಲ್ಲ. ಅವಳು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದಾಗ ನಿಲ್ದಾಣದಲ್ಲಿ ಅವಳನ್ನು ಭೇಟಿಯಾಗಿದ್ದಾಗಿ ಕರಣ್‌ದೀಪ್ ಸ್ವತಃ ನನಗೆ ಹೇಳಿದ್ದರು, ಈಗ ಆಕೆ ಬೇರೆಯದ್ದೇ ಕಥೆ ಹೇಳುತ್ತಿದ್ದಾಳೆ ಎಂದಿದ್ದಾರೆ. ಅವಳು ಕಾಣೆಯಾದಾಗ ಅವಳ ಬಗ್ಗೆ ಮಾಹಿತಿ ನೀಡುವವರಿಗೆ ಕುಟುಂಬವು 51,000 ರೂ. ಬಹುಮಾನವನ್ನು ಘೋಷಿಸಿತ್ತು.

ಆಗಸ್ಟ್ 23 ರಂದು, ಹತ್ತಿರದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಶ್ರದ್ಧಾ ಮೊಬೈಲ್ ಫೋನ್ ಇಲ್ಲದೆ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಮನೆಯಿಂದ ಹೊರಗೆ ಹೋಗುತ್ತಿರುವುದು ಕಂಡುಬಂದಿದ್ದವು. ಆಕೆಯ ಕಣ್ಮರೆಯಾದ ನಂತರ, ಕುಟುಂಬ ಮತ್ತು ಪೊಲೀಸರಿಗೆ ಒಂದು ವಾರದವರೆಗೆ ಯಾವುದೇ ಮಹತ್ವದ ಸುಳಿವುಗಳು ಸಿಗಲಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:02 am, Sat, 30 August 25

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ