AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mission Divyastra: ಮಿಷನ್ ದಿವ್ಯಾಸ್ತ್ರ ಯಶಸ್ವಿ ಉಡಾವಣೆ: ಪ್ರಧಾನಿ ಮೋದಿ

Agni-5 missile: ಇಂದು ಮಿಷನ್ ದಿವ್ಯಾಸ್ತ್ರ ಯಶಸ್ವಿ ಉಡಾವಣೆಯಾಗಿದೆ ಎಂದು ಪ್ರಧಾನಿ ಮೋದಿ ಅವರು ಘೋಷಣೆ ಮಾಡಿದ್ದಾರೆ. ಡಿಆರ್‌ಡಿಒ ವಿಜ್ಞಾನಿಗಳು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಅಗ್ನಿ-5 ಕ್ಷಿಪಣಿಯ ಮೊದಲ ಪರೀಕ್ಷಾರ್ಥ ಹಾರಾಟ ನಡೆಸಿದ್ದಾರೆ. ಈ ಕ್ಷಿಪಣಿ ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ (ಎಂಐಆರ್‌ವಿ) ತಂತ್ರಜ್ಞಾನವನ್ನು ಹೊಂದಿದೆ.

Mission Divyastra: ಮಿಷನ್ ದಿವ್ಯಾಸ್ತ್ರ ಯಶಸ್ವಿ ಉಡಾವಣೆ: ಪ್ರಧಾನಿ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on: Mar 11, 2024 | 6:13 PM

Share

ಮಿಷನ್ ದಿವ್ಯಾಸ್ತ್ರ (Mission Divyastra) ಯಶಸ್ವಿ ಉಡಾವಣೆಯನ್ನು ನಡೆಸಿದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ವಿಜ್ಞಾನಿಗಳಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ತಮ್ಮ ಎಕ್ಸ್​​ ಖಾತೆಯಲ್ಲಿ ಅಭಿನಂದನೆ ತಿಳಿಸಿದ್ದಾರೆ. ಡಿಆರ್‌ಡಿಒ ವಿಜ್ಞಾನಿಗಳು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಅಗ್ನಿ-5 ಕ್ಷಿಪಣಿಯ ಮೊದಲ ಪರೀಕ್ಷಾರ್ಥ ಹಾರಾಟ ನಡೆಸಿದ್ದಾರೆ. ಈ ಕ್ಷಿಪಣಿ ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ (ಎಂಐಆರ್‌ವಿ) ತಂತ್ರಜ್ಞಾನವನ್ನು ಹೊಂದಿದೆ. ಇದು ನಮ್ಮ ಭಾರತಕ್ಕೆ ಹೆಮ್ಮೆಯ ಕ್ಷಣ ಎಂದು ಮೋದಿ ಹೇಳಿದ್ದಾರೆ.

ಈ ಕ್ಷಿಪಣಿ ಪಾಕಿಸ್ತಾನ ಮತ್ತು ಚೀನಾದಂತಹ ದೇಶಗಳಿಂದ ಬಹು ರಂಗಗಳಲ್ಲಿ ಸವಾಲುಗಳನ್ನು ಎದುರಿಸುತ್ತಿರುವ ಭಾರತೀಯ ರಕ್ಷಣಾ ಪಡೆಗಳಿಗೆ ಉತ್ತೇಜನವಾಗಿದೆ.

ಇದನ್ನೂ ಓದಿ: ಸಿಎಎ ಜಾರಿಗೆ ಕೇಂದ್ರ ಸರ್ಕಾರ ಇಂದು ರಾತ್ರಿ ಅಧಿಸೂಚನೆ ಹೊರಡಿಸುವ ಸಾಧ್ಯತೆ

ಮೋದಿ ಎಕ್ಸ್​​​ ಟ್ವೀಟ್​​ ಇಲ್ಲಿದೆ:

&nbs

ಅಗ್ನಿ-5 ಬ್ಯಾಲಿಸ್ಟಿಕ್ ಕ್ಷಿಪಣಿ

DRDO 2012ರ ಸುಮಾರಿಗೆ ಅಗ್ನಿ-V ಕ್ಷಿಪಣಿಗಳ ಪ್ರಯೋಗವನ್ನು ಪ್ರಾರಂಭಿಸಿತು. ಅಂದಿನಿಂದ, ಇದು ನವೀಕರಿಸಿದ ಸಾಮರ್ಥ್ಯಗಳೊಂದಿಗೆ ಅಗ್ನಿ-Vನ ಬಹು ಆವೃತ್ತಿಗಳನ್ನು ಯಶಸ್ವಿಯಾಗಿ ಅಭಿವೃದ್ಧಿಪಡಿಸಿದೆ. 2021ರಲ್ಲಿ, ಡಿಆರ್‌ಡಿಒ ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಸರ್ಫೇಸ್ ಟು ಸರ್ಫೇಸ್ ಬ್ಯಾಲಿಸ್ಟಿಕ್ ಕ್ಷಿಪಣಿ ಅಗ್ನಿ-5ನ್ನು ಯಶಸ್ವಿಯಾಗಿ ಉಡಾವಣೆ ಮಾಡಿತು. ಮೂರು-ಹಂತದ ಘನ-ಇಂಧನ ಎಂಜಿನ್ ಅನ್ನು ಬಳಸುವ ಕ್ಷಿಪಣಿಯು 5,000 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಗುರಿಗಳನ್ನು ಅತಿ ಹೆಚ್ಚು ನಿಖರತೆಯೊಂದಿಗೆ ತಲುಪುವ ಸಾಮರ್ಥ್ಯವನ್ನು ಹೊಂದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ